Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದ ಗ್ರಾಮಗಳೆ ಕರೋನ ಹಾಟ್ ಸ್ಪಾಟ್, ಶೇ.54ರಷ್ಟು ಸೋಂಕಿತರು ಹಳ್ಳಿ ವಾಸಿಗಳು, ಇಲ್ಲಿದೆ ತಾಲೂಕುವಾರು ಡಿಟೇಲ್ಸ್

ಶಿವಮೊಗ್ಗದ ಗ್ರಾಮಗಳೆ ಕರೋನ ಹಾಟ್ ಸ್ಪಾಟ್, ಶೇ.54ರಷ್ಟು ಸೋಂಕಿತರು ಹಳ್ಳಿ ವಾಸಿಗಳು, ಇಲ್ಲಿದೆ ತಾಲೂಕುವಾರು ಡಿಟೇಲ್ಸ್

27/05/2021 9:57 AM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MAY 2021

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಎರಡನೆ ಅಲೆ ಕರೋನ ಸೋಂಕು ಹರಡುವ ಪ್ರಮಾಣ ನಿಧಾನವಾಗಿ ತಗ್ಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಶೇ.40ರಿಂದ ಶೇ.30ಕ್ಕೆ ಇಳಿಕೆಯಾಗಿದೆ. ಆದರೆ ಗ್ರಾಮೀಣ ಭಾಗದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವುದು ಆತಂಕ ಮೂಡಿಸಿದೆ. ಇದೆ ಕಾರಣಕ್ಕೆ ಹಲವು ಊರುಗಳು ಲಾಕ್ ಡೌನ್ ಆಗಿವೆ. ಕೆಲವು ಕಡೆ ಸೀಲ್ ಡೌನ್ ಕೂಡ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೆ ಅಲೆ ಕರೋನ ವ್ಯಾಪಕವಾಗಿ ಹರಡಿದೆ. ಏಪ್ರಿಲ್ 1 ರಿಂದ ಈತನಕ 20,591 ಮಂದಿ ಕರೋನ ಸೋಂಕಿಗೆ ತುತ್ತಾಗಿದ್ದಾರೆ. ಈ ಪೈಕಿ 11,270 ಮಂದಿ ಗ್ರಾಮೀಣ ಭಾಗದವರಾಗಿದ್ದಾರೆ. ಹಳ್ಳಿ ವ್ಯಾಪ್ತಿಯಲ್ಲಿ ಕರೋನ ವೇಗವಾಗಿ ಹರಡುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ.

ಶಿವಮೊಗ್ಗ ತಾಲೂಕಿನಲ್ಲಿ ಈತನಕ 5651 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಈ ಪೈಕಿ 1430 ಸೋಂಕಿತರು ಗ್ರಾಮೀಣ ಭಾಗದವರು. ಭದ್ರಾವತಿಯಲ್ಲಿ 3307 ಮಂದಿಗೆ ಸೋಂಕು ತಗುಲಿದ್ದು, 1124 ಮಂದಿ ಗ್ರಾಮೀಣ ಭಾಗದವರು.

ಹೊಸನಗರದಲ್ಲಿ 1636 ಸೋಂಕು ಪ್ರಕರಣಗಳು ವರದಿಯಾಗಿದೆ. ಅದರಲ್ಲಿ 1522 ಮಂದಿ ಹಳ್ಳಿಗಳಿಗೆ ಸಂಬಂಧಿಸಿದವರು. ಸಾಗರದಲ್ಲಿ 3795 ಮಂದಿಗೆ ಕರೋನ ಸೋಂಕು ಬಂದಿದೆ. 2222 ಮಂದಿ ಗ್ರಾಮೀಣ ಭಾಗದವರು ಸೋಂಕಿಗೆ ತುತ್ತಾಗಿದ್ದಾರೆ.

ಇದನ್ನೂ ಓದಿ | ಶಿವಮೊಗ್ಗ ತಾಲೂಕಿನ ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಕರೋನ ಕೇಸ್? ಇಲ್ಲಿದೆ ಡಿಟೇಲ್ಸ್

ಶಿಕಾರಿಪುರದಲ್ಲಿ 2166 ಮಂದಿಗೆ ಕರೋನ ಬಂದಿದೆ. ಅದರಲ್ಲಿ 1527 ಗ್ರಾಮಸ್ಥರು ಸೋಂಕಿತರಾಗಿದ್ದಾರೆ. ಸೊರಬದಲ್ಲಿ 1914 ಸೋಂಕಿತರ ಪೈಕಿ 1674 ಮಂದಿ ಗ್ರಾಮೀಣ ಪ್ರದೇಶದವರು. ಇನ್ನು, ತೀರ್ಥಹಳ್ಳಿಯಲ್ಲಿ 2122 ಮಂದಿಗೆ ಕರೋನ ಸೋಂಕು ತಗುಲಿದೆ. ಅದರಲ್ಲಿ 1771 ಮಂದಿ ಗ್ರಾಮಾಂತರದವರು.

ಇದನ್ನೂ ಓದಿ | ತೀರ್ಥಹಳ್ಳಿ ತಾಲೂಕಿನ ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಕರೋನ ಕೇಸ್? ಇಲ್ಲಿದೆ ಗ್ರಾಮ ಪಂಚಾಯಿತಿವಾರು ಡಿಟೇಲ್ಸ್

ಹಳ್ಳಿ ಹಳ್ಳಿಗಳೇ ಸೀಲ್ ಡೌನ್

ಮೊದಲ ಅಲೆಗೆ ಹೋಲಿಸಿದರೆ ಎರಡನೆ ಅಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹಳ್ಳಿಗಳೆ ಪ್ರಮುಖ ಟಾರ್ಗೆಟ್ ಆಗಿದೆ. ಇದೆ ಕಾರಣಕ್ಕೆ ಅತಿ ಹೆಚ್ಚು ಸೋಂಕಿತರು ಇರುವ ಗ್ರಾಮಗಳನ್ನು ಸೀಲ್ ಡೌನ್ ಮಾಡಲಾಗುತ್ತಿದೆ. ಕೆಲವು ಕಡೆ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ನಾರಾಯಣಪುರ, ಆನಂದಪುರ, ರಿಪ್ಪನ್‍ ಪೇಟೆ, ಕೋಣಂದೂರು, ಆನವಟ್ಟಿ ಸೇರಿದಂತೆ ಹಲವು ಕಡೆ ಗ್ರಾಮಗಳು ಲಾಕ್ ಡೌನ್ ಆಗಿವೆ.

ಇದನ್ನೂ ಓದಿ | ಭದ್ರಾವತಿ ತಾಲೂಕಿನ ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಕರೋನ ಕೇಸ್? ಇಲ್ಲಿದೆ ಗ್ರಾಮ ಪಂಚಾಯಿತಿವಾರು ಡಿಟೇಲ್ಸ್

230521 Konandur Lockdown for One Week 1 1

ಗ್ರಾಮೀಣ ಭಾಗದಲ್ಲಿ ಕೇರ್ ಸೆಂಟರ್‍

ಮೊದಲ ಅಲೆಯಲ್ಲಿ ಇದ್ದಂತೆ ಈ ಭಾರಿಯೂ ಸೋಂಕು ನಗರ ಪ್ರದೇಶಗಳಿಗೆ ಸೀಮಿತ ಎಂದು ಜಿಲ್ಲಾಡಳಿತ ಅಂದಾಜಿಸಿತ್ತು. ಇದೆ ಕಾರಣಕ್ಕೆ ಚಿಕಿತ್ಸೆಗಾಗಿ ಆಸ್ಪತ್ರೆಗಳನ್ನು ಮತ್ತು ಆರೈಕೆಗಾಗಿ ಕೋವಿಡ್‍ ಕೇರ್ ಸೆಂಟರ್‍ಗಳನ್ನು ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಸ್ಥಾಪಿಸಿತ್ತು. ಆದರೆ ಜನಪ್ರತಿನಿಧಿಗಳು, ಅಧಿಕಾರಿಗಳ ಲೆಕ್ಕಾಚಾರ ಉಲ್ಟಾ ಮಾಡಿದ ಸೋಂಕು ಹಳ್ಳಿ ಹಳ್ಳಿ ತಲುಪಿದೆ. ಈಗ ಎಚ್ಚೆತ್ತಿರುವ ಆಡಳಿತ ಗ್ರಾಮೀಣ ಭಾಗದಲ್ಲಿ ಕೋವಿಡ್ ಕೇರ್ ಸೆಂಟರ್‍ಗಳನ್ನು ಆರಂಭಿಸಲು ಸೂಚಿಸಿದೆ.

ಇದನ್ನೂ ಓದಿ | ಹೊಸನಗರದಲ್ಲೂ ಹಳ್ಳಿ ಹಳ್ಳಿಗೆ ವ್ಯಾಪಿಸಿದ ಕರೋನ, ಯಾವ್ಯಾವ ಪಂಚಾಯಿತಿ ವ್ಯಾಪ್ತಿಯಲ್ಲಿ ಎಷ್ಟೆಷ್ಟಿದೆ ಪ್ರಕರಣ?

‘ಅಗತ್ಯಬಿದ್ದರೆ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಕೋವಿಡ್ ಕೇರ್ ಸೆಂಟರ್‍ಗಳನ್ನು ಸ್ಥಾಪಿಸುವಂತೆ ಅಧಿಕಾರಿಗಳಿಗೆ, ಪಿಡಿಓಗಳಿಗೆ ಸೂಚಿಸಿದ್ದೇನೆ. ಕೆಲವು ಕಡೆ ಎರಡ್ಮೂರು ಗ್ರಾಮ ಪಂಚಾಯಿತಿಯವರು ಸೇರಿ ಕೋವಿಡ್ ಕೇರ್ ಸೆಂಟರ್‍ ಮಾಡುತ್ತೇವೆ ಅಂದಿದ್ದಾರೆ. ಒಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಸೋಂಕು ಹರಡದಂತೆ ತಡೆಗಟ್ಟಲು ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ’ ಅನ್ನುತ್ತಾರೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ.

ಇದನ್ನೂ ಓದಿ | ಸೊರಬ ತಾಲೂಕಿನಲ್ಲಿ ಕರೋನ ಪಾಸಿಟಿವ್, ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಕೇಸ್? ಇಲ್ಲಿದೆ ಡಿಟೇಲ್ಸ್

ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಿಎಂ

ಹಳ್ಳಿಗಳೆ ಕರೋನ ಹಾಟ್‍ ಸ್ಪಾಟ್ ಆಗುತ್ತಿರುವ ಬೆನ್ನಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತವರು ಜಿಲ್ಲೆಯ ಸಚಿವರು, ಅಧಿಕಾರಿಗಳು, ಆಯ್ದ ಹತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷ, ಪಿಡಿಓಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಗ್ರಾಮೀಣ ಪ್ರದೇಶದಲ್ಲಿ ಕರೋನ ಕಟ್ಟಿಹಾಕಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದ್ದಾರೆ.

ಇದನ್ನೂ ಓದಿ | ಶಿಕಾರಿಪುರದ ಗ್ರಾಮೀಣ ಭಾಗದಲ್ಲೂ ಕರೋನ ಅಬ್ಬರ, ಯವ್ಯಾವ ಪಂಚಾಯಿತಿ ವ್ಯಾಪ್ತಿಯಲ್ಲಿ ಎಷ್ಟೆಷ್ಟಿದೆ ಪ್ರಕರಣ?

ಮಳೆಗಾಲ ಆರಂಭವಾಗುತ್ತಿದ್ದು ಮಲೆನಾಡು ಭಾಗದಲ್ಲಿ ಕೃಷಿ ಚಟುವಟಿಕೆ ಬಿರುಸು ಪಡೆಯಲಿದೆ. ಈ ಹೊತ್ತಿಗೆ ಸೋಂಕು ಅಬ್ಬರಿಸಿದರೆ ಕೃಷಿಕರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಹಾಗಾಗಿ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳುವ ಅನಿವಾರ್ಯತೆ ಇದೆ.

ಇದನ್ನೂ ಓದಿ | ಸಾಗರದಲ್ಲೂ ಕರೋನ ಅಬ್ಬರ, ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಪಾಸಿಟಿವ್ ಪ್ರಕರಣ? ಇಲ್ಲಿದೆ ಡಿಟೇಲ್ಸ್

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ [email protected]

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article BHADRAVATHI-MAP-GRAPHICS ಸಣ್ಣ ವಿಚಾರಕ್ಕೆ ಕಿರಿಕ್, ಭದ್ರಾವತಿಯಲ್ಲಿ ಯುವಕನ ಬೆನ್ನಿಗೆ ಚಾಕು, ಹತ್ಯೆ ಮಾಡಿದ ಐವರು ಅರೆಸ್ಟ್
Next Article 081220 BY Raghavendra Press Meet 1 ಶಿವಮೊಗ್ಗ ಜಿಲ್ಲೆಯಲ್ಲಿ 25 ಸಾವಿರ ಫುಡ್ ಕಿಟ್ ವಿತರಣೆಗೆ ಪ್ಲಾನ್

ಇದನ್ನೂ ಓದಿ

Shimoga-News-update
FATAFAT NEWS

ರವೀಂದ್ರನಗರ ಗಣಪತಿ ದೇಗುಲದ ಮುಂಭಾಗ ನಾಗದೇವರ ಪ್ರತಿಷ್ಠಾಪನೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Tunga-Dam-full
NEWS

ತುಂಗಾ, ಭದ್ರಾ ಜಲಾಶಯಗಳ ಒಳ ಹರಿವು ಕುಸಿತ, ಇವತ್ತು ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Police-Jeep-at-Shimoga-General-Image
CRIME DIARYSHIVAMOGGA CITY

ಸೋಮಿನಕೊಪ್ಪ ಸಮೀಪ ಕೆಲಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
SHIMOGA-NEWS-UPDATE
FATAFAT NEWS

ಶಿವಮೊಗ್ಗದ ಬಿದಿರೆಯ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮಾ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Crime-News-General-Image
CRIME DIARYSHIVAMOGGA CITY

ನಿಲ್ದಾಣದಲ್ಲಿಯೇ ಸಿಟಿ ಬಸ್‌ ಕಂಡಕ್ಟರ್‌ಗಳ ಮಧ್ಯೆ ಕಿರಿಕ್‌, ಕೈ ಕೈ ಮಿಲಾಯಿಸಿದ ನಿರ್ವಾಹಕರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Police-Van-Jeep-at-Shimoga-Nehru-Road
CRIME DIARYSHIVAMOGGA CITY

ಬೈಕ್‌ನಲ್ಲಿ ಬಂದು ಆಟೋ ಅಡಗಟ್ಟಿದ ದುಷ್ಕರ್ಮಿಗಳು, ಹಿಂಬದಿ ಕುಳಿತಿದ್ದ ವ್ಯಕ್ತಿ ಬಳಿ ಇದ್ದ ಬ್ಯಾಗ್‌ ಕಸಿದು ಪರಾರಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?