ಶಿವಮೊಗ್ಗ ಜಿಲ್ಲೆಯಲ್ಲಿ ನೂರರ ಗಡಿ ದಾಟಿತು ಕರೋನ ಸಕ್ರಿಯ ಪ್ರಕರಣಗಳು, ಇವತ್ತೆಷ್ಟು ಮಂದಿಗೆ ಸೋಂಕು ತಗುಲಿದೆ?

Published On : ಡಿಸೆಂಬರ್ 9, 2021

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಡಿಸೆಂಬರ್ 2021

ಭದ್ರಾವತಿಯ ನರ್ಸಿಂಗ್ ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಕರೋನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಇವತ್ತು ಜಿಲ್ಲೆಯಲ್ಲಿ 28 ಮಂದಿಗೆ ಸೋಂಕು ತಗುಲಿದೆ.

AVvXsEgs2CAQQwFXPEeKJ0M8TIYSuTjC1YFP87yReiHpVPmRryODfVeCXuFAqftB8kOZ5mPWZitv CEgSxJ 0UftK 3Xtg FQnjiLvzYXdPYIyMcbnCizoegDYgVDMGV3v1L2lUIeE2 3X339z1W9X2I3kEIgBbfYiP ZYP9tZPaJV64qH Ith d6U8fBL4P5A=s926

ಒಟ್ಟು ಸೋಂಕಿತರ ಪೈಕಿ ಭದ್ರಾವತಿ ತಾಲೂಕಿನವರೆ ಹೆಚ್ಚಿದ್ದಾರೆ. ಭದ್ರಾವತಿ ತಾಲೂಕಿನಲ್ಲಿ 24 ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಭದ್ರಾವತಿಯ ಖಾಸಗಿ ಆಸ್ಪತ್ರೆಯ 24 ನರ್ಸಿಂಗ್ ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ. ಅದರ ಕಂಪ್ಲೀಟ್ ವರದಿ ಇಲ್ಲಿದೆ. ಭದ್ರಾವತಿಯಲ್ಲಿ ಕರೋನ ಆತಂಕ, ಖಾಸಗಿ ಆಸ್ಪತ್ರೆ, ನರ್ಸಿಂಗ್ ಹಾಸ್ಟೆಲ್ ಸೀಲ್ ಡೌನ್

ಇನ್ನು, ಶಿಕಾರಿಪುರ ತಾಲೂಕಿನ ಇಬ್ಬರು, ಸಾಗರದ ಒಬ್ಬರಿಗೆ ಮತ್ತು ತೀರ್ಥಹಳ್ಳಿಯ ಒಬ್ಬರಿಗೆ ಸೋಂಕು ತಗುಲಿದೆ.

ಇವತ್ತು ಸೋಂಕಿತರ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ನೂರರ ಗಡಿ ದಾಟಿದೆ. ಜಿಲ್ಲೆಯಲ್ಲಿರುವ ಸಕ್ರಿಯ ಸೋಂಕಿತರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ.

shivamogga live subscribe band

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಡಿಸೆಂಬರ್ 9, 2021

Leave a Comment