ಶಿವಮೊಗ್ಗ ಜಿಲ್ಲೆಯ ರೈತರಿಗೆ ಆತಂಕ ಮೂಡಿಸಿದ ಚಂಡಮಾರುತ, ಆಗಿದ್ದೇನು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS, 3 DECEMBER 2024

ಶಿವಮೊಗ್ಗ : ಫೆಂಗಲ್‌ ಚಂಡಮಾರುತದ (Cyclone) ಪರಿಣಾಮ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತೂ ಮಳೆಯಾಗಿದೆ. ಚಂಡಮಾರುತ ದುರ್ಬಲವಾಗುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ.

ಸೋಮವಾರ ಮಳೆ, ರಾತ್ರಿಯು ಅಬ್ಬರ

ಫೆಂಗಲ್‌ ಚಂಡಮಾರುತದ ಪರಿಣಾಮ ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆ ವೇಳೆಗೆ ಶಿವಮೊಗ್ಗ ಮತ್ತು ಭದ್ರಾವತಿಯ ವಿವಿಧೆಡೆ ಮಳೆಯಾಗಿತ್ತು. ಜಿಲ್ಲೆಯಲ್ಲಿ ವಿವಿಧೆಡೆ ಕಳೆದ ರಾತ್ರಿ ಮಳೆಯಾಗಿದೆ. ಇವತ್ತೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ನಂತರ ಬಿಸಲು ಕಾಣಿಸಿಕೊಂಡಿತ್ತು.

cyclone-effect-on-agriculture-sector-in-shimoga

ರೈತರಿಗೆ ಅತಂಕ ಮೂಡಿಸಿದ ಮಳೆ

ಮುಂಗಾರು ಉತ್ತಮವಾಗಿದ್ದರಿಂದ ಜಿಲ್ಲೆಯಲ್ಲಿ ಭತ್ತ, ಜೋಳ ಸೇರಿ ವಿವಿಧ ಬೆಳೆ ಬೆಳೆಯಲಾಗಿದೆ. ಉತ್ತಮ ಫಸಲು ಬಂದಿದ್ದು ಫೆಂಗಲ್‌ ಚಂಡಮಾರುತ ರೈತರಲ್ಲಿ ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ 68,757 ಹೆಕ್ಟೇರ್‌ನಲ್ಲಿ ಭತ್ತ, 44,040 ಹೆಕ್ಟೇರ್‌ನಲ್ಲಿ ಜೋಳ ಬೆಳೆಯಾಗಿದೆ.

Cyclone Effect on paddy

ಜಿಲ್ಲೆಯ ವಿವಿಧೆಡೆ ಭತ್ತ ಕಟಾವು ಮಾಡಲಾಗುತ್ತಿದ್ದು ಚಂಡಮಾರುತದಿಂದಾಗಿ ಕಟಾವು ಕಾರ್ಯ ಸ್ಥಗಿತಗೊಂಡಿದೆ. ಈಗಾಗಲೇ ಕಟಾವು ಮಾಡಿದವರು ಭತ್ತ ಮತ್ತು ಹುಲ್ಲನ್ನು ಸಂರಕ್ಷಿಸಬೇಕಿದೆ. ಇನ್ನಷ್ಟೆ ಕಟಾವು ಮಾಡಬೇಕಿರುವವರು ಮುಂದೇನು ಎಂದು ಚಿಂತೆಗೀಡಾಗಿದ್ದಾರೆ.

Cyclone Effect on paddy

ಇದನ್ನೂ ಓದಿ » ಭದ್ರಾ ಡ್ಯಾಮ್‌, ನಾಲೆಯ ಗೇಟ್‌ ಬಂದ್‌ ಮಾಡುವಾಗ ಕ್ರೇನ್‌ನ ಕೇಬಲ್‌ ಕಟ್

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment