SHIVAMOGGA LIVE NEWS, 3 DECEMBER 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ : ಫೆಂಗಲ್ ಚಂಡಮಾರುತದ (Cyclone) ಪರಿಣಾಮ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತೂ ಮಳೆಯಾಗಿದೆ. ಚಂಡಮಾರುತ ದುರ್ಬಲವಾಗುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
ಸೋಮವಾರ ಮಳೆ, ರಾತ್ರಿಯು ಅಬ್ಬರ
ಫೆಂಗಲ್ ಚಂಡಮಾರುತದ ಪರಿಣಾಮ ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆ ವೇಳೆಗೆ ಶಿವಮೊಗ್ಗ ಮತ್ತು ಭದ್ರಾವತಿಯ ವಿವಿಧೆಡೆ ಮಳೆಯಾಗಿತ್ತು. ಜಿಲ್ಲೆಯಲ್ಲಿ ವಿವಿಧೆಡೆ ಕಳೆದ ರಾತ್ರಿ ಮಳೆಯಾಗಿದೆ. ಇವತ್ತೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ನಂತರ ಬಿಸಲು ಕಾಣಿಸಿಕೊಂಡಿತ್ತು.

ರೈತರಿಗೆ ಅತಂಕ ಮೂಡಿಸಿದ ಮಳೆ
ಮುಂಗಾರು ಉತ್ತಮವಾಗಿದ್ದರಿಂದ ಜಿಲ್ಲೆಯಲ್ಲಿ ಭತ್ತ, ಜೋಳ ಸೇರಿ ವಿವಿಧ ಬೆಳೆ ಬೆಳೆಯಲಾಗಿದೆ. ಉತ್ತಮ ಫಸಲು ಬಂದಿದ್ದು ಫೆಂಗಲ್ ಚಂಡಮಾರುತ ರೈತರಲ್ಲಿ ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ 68,757 ಹೆಕ್ಟೇರ್ನಲ್ಲಿ ಭತ್ತ, 44,040 ಹೆಕ್ಟೇರ್ನಲ್ಲಿ ಜೋಳ ಬೆಳೆಯಾಗಿದೆ.

ಜಿಲ್ಲೆಯ ವಿವಿಧೆಡೆ ಭತ್ತ ಕಟಾವು ಮಾಡಲಾಗುತ್ತಿದ್ದು ಚಂಡಮಾರುತದಿಂದಾಗಿ ಕಟಾವು ಕಾರ್ಯ ಸ್ಥಗಿತಗೊಂಡಿದೆ. ಈಗಾಗಲೇ ಕಟಾವು ಮಾಡಿದವರು ಭತ್ತ ಮತ್ತು ಹುಲ್ಲನ್ನು ಸಂರಕ್ಷಿಸಬೇಕಿದೆ. ಇನ್ನಷ್ಟೆ ಕಟಾವು ಮಾಡಬೇಕಿರುವವರು ಮುಂದೇನು ಎಂದು ಚಿಂತೆಗೀಡಾಗಿದ್ದಾರೆ.

ಇದನ್ನೂ ಓದಿ » ಭದ್ರಾ ಡ್ಯಾಮ್, ನಾಲೆಯ ಗೇಟ್ ಬಂದ್ ಮಾಡುವಾಗ ಕ್ರೇನ್ನ ಕೇಬಲ್ ಕಟ್
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





