ಶಿವಮೊಗ್ಗ ಜಿಲ್ಲೆಯ ರೈತರಿಗೆ ಆತಂಕ ಮೂಡಿಸಿದ ಚಂಡಮಾರುತ, ಆಗಿದ್ದೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS, 3 DECEMBER 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ : ಫೆಂಗಲ್‌ ಚಂಡಮಾರುತದ (Cyclone) ಪರಿಣಾಮ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತೂ ಮಳೆಯಾಗಿದೆ. ಚಂಡಮಾರುತ ದುರ್ಬಲವಾಗುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ.

ಸೋಮವಾರ ಮಳೆ, ರಾತ್ರಿಯು ಅಬ್ಬರ

ಫೆಂಗಲ್‌ ಚಂಡಮಾರುತದ ಪರಿಣಾಮ ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆ ವೇಳೆಗೆ ಶಿವಮೊಗ್ಗ ಮತ್ತು ಭದ್ರಾವತಿಯ ವಿವಿಧೆಡೆ ಮಳೆಯಾಗಿತ್ತು. ಜಿಲ್ಲೆಯಲ್ಲಿ ವಿವಿಧೆಡೆ ಕಳೆದ ರಾತ್ರಿ ಮಳೆಯಾಗಿದೆ. ಇವತ್ತೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ನಂತರ ಬಿಸಲು ಕಾಣಿಸಿಕೊಂಡಿತ್ತು.

cyclone-effect-on-agriculture-sector-in-shimoga

ರೈತರಿಗೆ ಅತಂಕ ಮೂಡಿಸಿದ ಮಳೆ

ಮುಂಗಾರು ಉತ್ತಮವಾಗಿದ್ದರಿಂದ ಜಿಲ್ಲೆಯಲ್ಲಿ ಭತ್ತ, ಜೋಳ ಸೇರಿ ವಿವಿಧ ಬೆಳೆ ಬೆಳೆಯಲಾಗಿದೆ. ಉತ್ತಮ ಫಸಲು ಬಂದಿದ್ದು ಫೆಂಗಲ್‌ ಚಂಡಮಾರುತ ರೈತರಲ್ಲಿ ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ 68,757 ಹೆಕ್ಟೇರ್‌ನಲ್ಲಿ ಭತ್ತ, 44,040 ಹೆಕ್ಟೇರ್‌ನಲ್ಲಿ ಜೋಳ ಬೆಳೆಯಾಗಿದೆ.

Cyclone Effect on paddy

ಜಿಲ್ಲೆಯ ವಿವಿಧೆಡೆ ಭತ್ತ ಕಟಾವು ಮಾಡಲಾಗುತ್ತಿದ್ದು ಚಂಡಮಾರುತದಿಂದಾಗಿ ಕಟಾವು ಕಾರ್ಯ ಸ್ಥಗಿತಗೊಂಡಿದೆ. ಈಗಾಗಲೇ ಕಟಾವು ಮಾಡಿದವರು ಭತ್ತ ಮತ್ತು ಹುಲ್ಲನ್ನು ಸಂರಕ್ಷಿಸಬೇಕಿದೆ. ಇನ್ನಷ್ಟೆ ಕಟಾವು ಮಾಡಬೇಕಿರುವವರು ಮುಂದೇನು ಎಂದು ಚಿಂತೆಗೀಡಾಗಿದ್ದಾರೆ.

Cyclone Effect on paddy

ಇದನ್ನೂ ಓದಿ » ಭದ್ರಾ ಡ್ಯಾಮ್‌, ನಾಲೆಯ ಗೇಟ್‌ ಬಂದ್‌ ಮಾಡುವಾಗ ಕ್ರೇನ್‌ನ ಕೇಬಲ್‌ ಕಟ್

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment