ಅಡಿಕೆಗೆ ಕೆಂಪು ಮೂತಿ ಹುಳು ಬಾಧೆ, ನಿರ್ವಹಣೆ ಮಾಡೋದು ಹೇಗೆ? ಸಂಶೋಧನಾ ಕೇಂದ್ರದಿಂದ ಮಾಹಿತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ: ಅಡಿಕೆಗೆ (Adike) ಕೆಂಪು ಮೂತಿ ಹುಳು ಬಾಧೆ ಶುರುವಾಗಿದೆ. ಸೊರಬ ಮತ್ತು ಸಾಗರ ಭಾಗದ ಅಡಿಕೆ ತೋಟಗಳಲ್ಲಿ ಇವು ಕಾಣಿಸುತ್ತಿವೆ. ಇದರಿಂದ ರೈತರಿಗೆ ಸಮಸ್ಯೆಯಾಗಿದೆ. ಇವುಗಳ ನಿರ್ವಹಣಾ ಕುರಿತು ಶಿವಮೊಗ್ಗದ ನವುಲೆಯಲ್ಲಿರುವ ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ನಾಗರಾಜಪ್ಪ ಅಡಿವಪ್ಪರ್ ಮಾಹಿತಿ ನೀಡಿದ್ದಾರೆ.

Arya-PU-College-Shimoga.

4 ರಿಂದ 5 ವರ್ಷದ ತೋಟದಲ್ಲಿ ಇದರ ಬಾಧೆ ಹೆಚ್ಚಾಗಿದೆ. ಗರಿಗಳು ಹಳದಿಯಾಗಿ ಬಾಡಿದಂತೆ ಕಾಣಿಸುತ್ತದೆ. ಕಾಂಡದ ಭಾಗದಲ್ಲಿ ರಂಧ್ರಗಳಾಗಿ ಕಂದು ಬಣ್ಣದ ರಸ ಸೋರುತ್ತದೆ. ತೀವ್ರ ಹಾನಿಗೊಳಗಾದ ಮರಗಳಲ್ಲಿ ಕಾಂಡದ ಭಾಗದಲ್ಲಿ ನಾರಿನ ಅಂಶ ಹೊರಬರುತ್ತದೆ. ಹಾನಿಗೊಳಗಾದ ಮರಗಳನ್ನು ಸೀಳಿ ನೋಡಿದಾಗ ವಿವಿಧ ಹಂತದ ಹುಳುಗಳನ್ನು ಕಾಣಬಹುದು. ಇದರಿಂದ ಬೆಳವಣಿಗೆ ಕುಂಠಿತವಾಗುತ್ತದೆ. ತೀವ್ರಹಾನಿಗೊಳಗಾದ ಮರಗಳು ಗಾಳಿ, ಮಳೆಗೆ ಬೀಳುತ್ತವೆ ಎಂದು ಅವರು ತಿಳಿಸಿದ್ದಾರೆ.

ನಿರ್ವಹಣಾ ಕ್ರಮಗಳು

  • ಹುಳುವಿನ ಕಡೆ ಒಂದು ರಂಧ್ರವನ್ನು ಮಾಡಿ ಅದಕ್ಕೆ 4 ಮಿ.ಲೀ ಕ್ಲೊರಾಂಟ್ರಿನಿಲಿಪ್ರೋಲ್ 18.5 ಎಸ್.ಸಿ ಅಥವಾ 4 ಮಿ.ಲೀ ಇಂಡಾಕ್ಸಾಕಾರ್ಬ 14.5 ಎಸ್.ಸಿ ನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸುರಿಯಬೇಕು.

kempu-muthi-hula-in-adike

  • ಸುಳಿಯಲ್ಲಿರುವ ರಂಧ್ರದಲ್ಲಿಯೂ ಕೂಡ ಇದನ್ನು ಸುರಿಯಬೇಕು.
  • ಶೇ.5ರ ಮೆಲಾಥಿಯಾನ್ ಪುಡಿ ಹಾಗೂ ಮರಳು ಸಮಪ್ರಮಾಣದಲ್ಲಿ ಬೆರೆಸಿ ಏಪ್ರಿಲ್ – ಮೇ ಹಾಗೂ ಸೆಪ್ಟೆಂಬರ್–ಅಕ್ಟೋಬರ್ ತಿಂಗಳುಗಳಲ್ಲಿ ಎಲೆಯ ಸಂದುಗಳಲ್ಲಿ ಹಾಕಬೇಕು.
  • ಯಾವುದೇ ಮರಗಳ ಕಾಂಡದಲ್ಲಿ ಗಾಯಗಳಾಗದಂತೆ ಎಚ್ಚರವಹಿಸಬೇಕು. ಗಾಯಗಳಾಗಿದ್ದಲ್ಲಿ 5.0 ಮಿ.ಲೀ ಕ್ಲೋರೋಫೈರಿಫಾಸ್ 20 ಇ.ಸಿ ಸಂದುಗಳಲ್ಲಿ ಹಾಕಿ ಮಣ್ಣಿನ ಮಿಶ್ರಣದಿಂದ ಮುಚ್ಚಬೇಕು.
  • ಕ್ಲೊರಾಂಟ್ರಿನಿಲಿಪ್ರೊಲ್ 18.5 ಎಸ್.ಸಿ (2 ಮಿ.ಲೀ + 500 ಮಿ.ಲೀ ನೀರು) ಅಥವಾ ಇಂಡಾಕ್ಸಾಕಾರ್ಬ 77.78 ಎಸ್.ಸಿ (2 ಮಿ.ಲೀ + 500 ಮಿ.ಲೀ ನೀರು) ಬೇರುಗಳ ಮುಖಾಂತರ ಕೊಡಬೇಕು.
  • ಪ್ರತಿ ಹೆಕ್ಟೇರ್‌ಗೆ ಒಂದರಂತೆ ಮೋಹಕ ಬಲೆಯನ್ನು ಇಡಬೇಕು ಮತ್ತು 6 ತಿಂಗಳಿಗೊಮ್ಮೆ ಲ್ಯೂರ್‌ನ್ನು ಬದಲಾಯಿಸಬೇಕು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಏಳು ದಿನದ ಗಡುವು, ತಪ್ಪಿದರೆ ನೀರಿನ ಸಂಪರ್ಕ ಕಡಿತದ ಎಚ್ಚರಿಕೆ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 5, 2025

Acting Registrar Appointed for Kuvempu University

Acting Registrar Appointed for Kuvempu University

ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರಭಾರ ಕುಲಸಚಿವ

ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರಭಾರ ಕುಲಸಚಿವ

ಭದ್ರಾವತಿಯ ಇಬ್ಬರಿಗೆ 10 ವರ್ಷ ಜೈಲು, ₹2.23 ಲಕ್ಷ ದಂಡ, ಕಾರಣವೇನು?

ಭದ್ರಾವತಿಯ ಇಬ್ಬರಿಗೆ 10 ವರ್ಷ ಜೈಲು, ₹2.23 ಲಕ್ಷ ದಂಡ, ಕಾರಣವೇನು?

ಇಂದಿನ ಪಂಚಾಂಗ, ಶುಭ ಸಮಯ ಯಾವಾಗಿದೆ?

ಇಂದಿನ ಪಂಚಾಂಗ, ಶುಭ ಸಮಯ ಯಾವಾಗಿದೆ?

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

Leave a Comment