SHIVAMOGGA LIVE NEWS, 13 DECEMBER 2024
ನವದೆಹಲಿ : ಶಿವಮೊಗ್ಗದಿಂದ ಮೈಸೂರು ಜಿಲ್ಲೆಗೆ ಪ್ರತಿದಿನ ರಾತ್ರಿ ಅರಸೀಕೆರೆ-ಹಾಸನ-ಕೆ.ಆರ್.ನಗರ ಮಾರ್ಗವಾಗಿ ನೂತನ ರೈಲ್ವೆ (Train) ಸಂಪರ್ಕ ಒದಗಿಸುವಂತೆ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮನವಿ ಮಾಡಿದರು.
ದೆಹಲಿಯ ಅವರ ಅಧಿಕೃತ ಕಚೇರಿಯಲ್ಲಿ ಭೇಟಿ ಮಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈಲ್ವೆ ಇಲಾಖೆಯಿಂದ ನಡೆಯುತ್ತಿರುವ ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ ಹಾಗೂ ಶಿವಮೊಗ್ಗ- ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲ್ವೆ ಮಾರ್ಗದ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸೂಪರ್ ಮಾರ್ಕೆಟ್ಗಳ ಟ್ರೆಂಡ್ ಜೋರು, ನಿತ್ಯ ಸಾವಿರ ಸಾವಿರ ಗ್ರಾಹಕರು, ಕಾರಣವೇನು?
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ನಿಗದಿತ ವೇಳೆಯಲ್ಲಿ ಮುಗಿಸಿಕೊಡಲು ಸೂಕ್ತ ನಿರ್ದೇಶನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ರಾಘವೇಂದ್ರ ಹೇಳಿದ್ದಾರೆ.