ಹಿರಿಯ ಸಾಹಿತಿ ಡಾ.ಲಕ್ಷ್ಮೀನಾರಾಯಣ ಭಟ್ಟ ಇನ್ನಿಲ್ಲ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಡಾ. ಎನ್‍.ಎಸ್.ಲಕ್ಷ್ಮೀನಾರಾಯಣ ಭಟ್ಟ (85) ಅವರು ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.

158133963 1340745009620249 1360771719541618966 o.jpg? nc cat=108&ccb=1 3& nc sid=730e14& nc ohc=tRjkjscz DwAX 6iurs& nc ht=scontent.fixe1 1

ಬೆಂಗಳೂರಿನ ಬನಶಂಕರಿಯ ನಿವಾಸದಲ್ಲಿ ಬೆಳಗಿನ ಜಾವ ಡಾ. ಲಕ್ಷ್ಮೀನಾರಾಯಣ ಭಟ್ಟ ಅವರು ಕೊನೆಯುಸಿರೆಳೆದಿದ್ದಾರೆ. ಮನೆಯ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಡಾ. ಲಕ್ಷ್ಮೀನಾರಾಯಣ ಭಟ್ಟ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯವರು. 1936ರ ಅಕ್ಟೋಬರ್ 29ರಂದು ಶಿವಮೊಗ್ಗದಲ್ಲಿ ಜನಿಸಿದರು. ತಂದೆ ಶಿವರಾಮ ಭಟ್ಟ, ತಾಯಿ ಮೂಕಾಂಬಿಕೆ. ಮೈಸೂರು ಮಹಾರಾಜ ಕಾಲೇಜಿನಲ್ಲಿ ಎಂ.ಎ ಪದವಿ ಪಡೆದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪಿಹೆಚ್‍ಡಿ ಪದವಿ ಪಡೆದಿದ್ದರು.

ಇಂಗ್ಲೀಷ್‍ನ ಪ್ರಖ್ಯಾತ ಸಹಿತಿಗಳಾದ ಏಟ್ಸ್‍ , ಟಿ.ಎಸ್.ಏಲಿಯಟ್, ವಿಲಿಯಂ ಷೇಕ್ಸ್‍ ಪಿಯರ್ ಅವರ ಕಾವ್ಯಗಳನ್ನು ಕನ್ನಡಕ್ಕೆ ಅನುವಾದಿಸಿದ್ದರು. ಹೊರಳು ದಾರಿಯಲ್ಲಿ ಕಾವ್ಯ ವಿಮರ್ಶಾ ಗ್ರಂಥಕ್ಕೆ 1974ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು. ‘ನೀ ಸಿಗದೆ ಬಾಳೊಂದು ಬಾಳೇ ಕೃಷ್ಣ’ ಸೇರಿದಂತೆ ಹಲವು ಜನಪ್ರಯ ಕಾವ್ಯಗಳನ್ನು ರಚಿಸಿದ್ದರು. ಹಲವು ಕಾವ್ಯ, ವಿಮರ್ಶೆ, ಅನುವಾದ, ನವ್ಯ ಕವಿತೆ, ಮಕ್ಕಳಿಗಾಗಿ ಗೀತೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸಾಹಿತ್ಯ ಕೃಷಿ ಮಾಡಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment