ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಡಾ. ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟ (85) ಅವರು ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಬನಶಂಕರಿಯ ನಿವಾಸದಲ್ಲಿ ಬೆಳಗಿನ ಜಾವ ಡಾ. ಲಕ್ಷ್ಮೀನಾರಾಯಣ ಭಟ್ಟ ಅವರು ಕೊನೆಯುಸಿರೆಳೆದಿದ್ದಾರೆ. ಮನೆಯ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಡಾ. ಲಕ್ಷ್ಮೀನಾರಾಯಣ ಭಟ್ಟ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯವರು. 1936ರ ಅಕ್ಟೋಬರ್ 29ರಂದು ಶಿವಮೊಗ್ಗದಲ್ಲಿ ಜನಿಸಿದರು. ತಂದೆ ಶಿವರಾಮ ಭಟ್ಟ, ತಾಯಿ ಮೂಕಾಂಬಿಕೆ. ಮೈಸೂರು ಮಹಾರಾಜ ಕಾಲೇಜಿನಲ್ಲಿ ಎಂ.ಎ ಪದವಿ ಪಡೆದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪಿಹೆಚ್ಡಿ ಪದವಿ ಪಡೆದಿದ್ದರು.
ಇಂಗ್ಲೀಷ್ನ ಪ್ರಖ್ಯಾತ ಸಹಿತಿಗಳಾದ ಏಟ್ಸ್ , ಟಿ.ಎಸ್.ಏಲಿಯಟ್, ವಿಲಿಯಂ ಷೇಕ್ಸ್ ಪಿಯರ್ ಅವರ ಕಾವ್ಯಗಳನ್ನು ಕನ್ನಡಕ್ಕೆ ಅನುವಾದಿಸಿದ್ದರು. ಹೊರಳು ದಾರಿಯಲ್ಲಿ ಕಾವ್ಯ ವಿಮರ್ಶಾ ಗ್ರಂಥಕ್ಕೆ 1974ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು. ‘ನೀ ಸಿಗದೆ ಬಾಳೊಂದು ಬಾಳೇ ಕೃಷ್ಣ’ ಸೇರಿದಂತೆ ಹಲವು ಜನಪ್ರಯ ಕಾವ್ಯಗಳನ್ನು ರಚಿಸಿದ್ದರು. ಹಲವು ಕಾವ್ಯ, ವಿಮರ್ಶೆ, ಅನುವಾದ, ನವ್ಯ ಕವಿತೆ, ಮಕ್ಕಳಿಗಾಗಿ ಗೀತೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸಾಹಿತ್ಯ ಕೃಷಿ ಮಾಡಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

- ಹೊಸನಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಲಾರಿಗಳು ಪೊಲೀಸ್ ವಶಕ್ಕೆ, ಕಾರಣವೇನು?

- ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

- ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

About The Editor
ನಿತಿನ್ ಆರ್.ಕೈದೊಟ್ಲು






