SHIVAMOGGA LIVE NEWS, 9 DECEMBER 2024
ಶಿವಮೊಗ್ಗ : ಅತಿಥಿ ಶಿಕ್ಷಕರ (Guest Teachers) ವೇತನ ಪರಿಷ್ಕರಣೆ ಅಗತ್ಯವಿದೆ. ಈ ಸಂಬಂಧ ಅರ್ಥಿಕ ಇಲಾಖೆ ಅನುಮತಿ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು.
ಡಾ. ಧನಂಜಯ ಸರ್ಜಿ ಪ್ರಶ್ನೆ ಏನು?
ರಾಜ್ಯದಲ್ಲಿ 48,657 ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಗ್ರೂಪ್ ಡಿ, ಅಟೆಂಡರ್ ಹುದ್ದೆಗಳಿಗಿಂತಲು ಕಡಿಮೆ ವೇತನ ದೊರೆಯುತ್ತಿದೆ. ಅತಿಥಿ ಶಿಕ್ಷಕರ ವೇತನ ಹೆಚ್ಚಳ ಮಾಡಲಾಗುತ್ತದೆಯೇ ಎಂದು ಡಾ. ಧನಂಜಯ ಸರ್ಜಿ ಪ್ರಶ್ನಿಸಿದ್ದರು.
ಸಂವಿಧಾನದ ಪ್ರಸ್ತಾವನೆಯಲ್ಲಿ ಸಾಮಾಜಿಕ, ಆರ್ಥಿಕ ನ್ಯಾಯದ ವಿಚಾರವಿದೆ. ಆದರೆ ಅತಿಥಿ ಶಿಕ್ಷಕರಿಗೆ ಕನಿಷ್ಠ ವೇತನ ದೊರೆಯುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಹೇಗೆ ಪಾಠ ಮಾಡಲು ಸಾಧ್ಯ? ಇದರಿಂದ ಶಿಕ್ಷಣ ಕ್ಷೇತ್ರದ ಮೇಲೆ ಪರಿಣಾಮ ಬೀರಲಿದೆ. ಸದನದಲ್ಲಿ ಈ ವಿಷಯದ ಕುರಿತು ಚರ್ಚೆಗೆ ಅರ್ಧ ಗಂಟೆಯಷ್ಟು ಕಾಲವಕಾಶ ನೀಡಬೇಕು.
ಡಾ. ಧನಂಜಯ ಸರ್ಜಿ, ವಿಧಾನ ಪರಿಷತ್ ಸದಸ್ಯ
ಮಿನಿಸ್ಟರ್ ಉತ್ತರವೇನು?
ಅತಿಥಿ ಶಿಕ್ಷಕರಿಗೆ 2022ರಲ್ಲಿ ವೇತನ ಹೆಚ್ಚಳ ಮಾಡಲಾಗಿದೆ. ಪುನಃ ವೇತನ ಹೆಚ್ಚಳ ಮಾಡುವ ಅಗತ್ಯವಿದೆ. ಆರ್ಥಿಕ ಇಲಾಖೆಗೆ ಕಳುಹಿಸಿದ್ದ ಪ್ರಸ್ತಾವನೆ ವಾಪಸ್ ಬಂದಿದೆ. ಮತ್ತೆ ಆರ್ಥಿಕ ಇಲಾಖೆಯ ಅನುಮತಿ ಪಡೆಯಲಾಗುತ್ತದೆ.
ಮಧು ಬಂಗಾರಪ್ಪ, ಶಿಕ್ಷಣ ಸಚಿವ
ಇನ್ನು, ಅರ್ಧ ಗಂಟೆ ಚರ್ಚೆಗೆ ಅವಕಾಶ ಕೇಳಿದ್ದಕ್ಕೆ, ಪತ್ರ ರವಾನಿಸುವಂತೆ ಸಭಾಪತಿ ಬಸವರಾಜ ಹೊರಟ್ಟಿ ಸೂಚಿಸಿದರು.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಮಳೆ ಅಲರ್ಟ್, ಮುಂದಿನ 7 ದಿನ ಹೇಗಿರುತ್ತೆ ವಾತಾವರಣ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200