ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 2 ಡಿಸೆಂಬರ್ 2018
ತಾಯಿಯ ಅಗಲಿಕೆಯಿಂದ ಅನಾಥವಾಗಿದ್ದ ಒಂದೂವರೆ ವರ್ಷದ ಆನೆ ಮರಿಯನ್ನು ಇಲ್ಲಿನ ಸಕ್ರೆಬೈಲು ಆನೆ ಬಿಡಾರಕ್ಕೆ ಕರೆ ತರಲಾಗಿದೆ.
ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ ಬಳಿ ಕೆಸರಿನಲ್ಲಿ ಸಿಕ್ಕು ಮೃತಪಟ್ಟ ಕಾರಣ, ಮರಿಯ ಆಕ್ರಂದನ ಮುಗಿಲು ಮುಟ್ಟಿತ್ತು. ಅರಣ್ಯಾಕಾರಿಗಳು ಶಿವಮೊಗ್ಗದಿಂದ ಗಂಗಾ ಆನೆಯನ್ನು ಕರೆತಂದು ಮರಿಯನ್ನು ಸಕ್ರೆಬೈಲಿಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಗಂಗಾ ಆನೆಯನ್ನೇ ತನ್ನ ತಾಯಿಯೆಂದು ತಿಳಿದು ಮರಿ ಆನೆ, ಸಕ್ರೆಬೈಲಿನತ್ತ ಹೆಜ್ಜೆ ಹಾಕಿದೆ.
ಈವರೆಗೂ ಕಾಡಿನಲ್ಲಿದ್ದ ಕಾರಣ, ಮರಿ ಆನೆ ಮನುಷ್ಯರ ಕಂಡರೆ ತಿವಿಯಲು ಮುಂದಾಗುತ್ತಿದೆ. ಮರಿ ತುಂಬಾ ಗಟ್ಟಿ ಇದೆ. ಚೆನ್ನಾಗಿ ಮೇವು ಕೊಡುತ್ತಿರುವುದರಿಂದ ಗಂಗಾ ಜತೆ ಒಗ್ಗಿಕೊಂಡಿದೆ. ಇನ್ನೊಂದು ವಾರದಲ್ಲಿ ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲಿದೆ. ಮುಂದಿನ ವಾರದಲ್ಲಿ ಮರಿ ಆನೆಗೆ ಹೆಸರಿಡಲಾಗುತ್ತದೆ ಅನ್ನುತ್ತಾರೆ ಆರ್’ಎಫ್ಒ ಶಿವಕುಮಾರ್.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
LATEST NEWS
- ಶಿವಮೊಗ್ಗದ ಡೇಂಜರ್ ಹಂಪ್ಗಳಿಗೆ 24 ಗಂಟೆಯ ಗಡುವು, ಬೈಕ್ನಲ್ಲಿ ಕಮಿಷನರ್ ಸಿಟಿ ರೌಂಡ್ಸ್

- ಶಿವಮೊಗ್ಗ, ಸಾಗರದಲ್ಲಿ ಕೆಲಸ ಹುಡುಕ್ತಿದ್ದೀರಾ? ಫೆಬ್ರವರಿ 18ರಂದು ನಡೆಯಲಿದೆ ಸಂದರ್ಶನ

- ಶಿವಮೊಗ್ಗ ಲೈವ್ BIG IMPACT, ಡೇಂಜರಸ್ ಹಂಪ್ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್

- ಕೋಟೆ ಮಾರಿಕಾಂಬೆಗೆ 1 ಕೆಜಿ 600 ಗ್ರಾಂ ತೂಕದ ಚಿನ್ನದ ಮುಖವಾಡ

- ಫುಡ್ ಕೋರ್ಟ್ನಿಂದ ಹೊರ ಬಂದ ವ್ಯಕ್ತಿಯ ಕಾಲಿನ ಮೇಲೆ ಬೈಕ್ ಹತ್ತಿಸಿ, ಕಲ್ಲಿನಿಂದ ಹೊಡೆದು ಹಲ್ಲೆ

About The Editor
ನಿತಿನ್ ಆರ್.ಕೈದೊಟ್ಲು






