ಶಿವಮೊಗ್ಗದ ರೈತರಿಗೆ ಮಳೆ ಕಂಟಕ, ಈ ಭಾರಿ ಭತ್ತ, ಜೋಳದ ಬೆಳೆ ಕೈ ತಪ್ಪುತ್ತಾ? ಹೇಗಿದೆ ಪರಿಸ್ಥಿತಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ನವೆಂಬರ್ 2021

ನಿರಂತರ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊಯ್ಲಿಗೆ ಬಂದಿರುವ ಭತ್ತ, ಜೋಳದ ಬೆಳೆ ಕೈ ತಪ್ಪುವ ಆತಂಕ ಎದುರಾಗಿದೆ. ಇದೆ ರೀತಿ ಮಳೆ ಮುಂದುವರೆದರೆ ಈ ಭಾರಿ ಜಿಲ್ಲೆಯ ದೊಡ್ಡ ಸಂಖ್ಯೆಯ ರೈತರು ಸಂಪೂರ್ಣ ಬೆಳೆ ಕಳೆದುಕೊಳ್ಳುವ ಸಾಧ್ಯತೆ ಇದೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಆರು ತಿಂಗಳಿಂದ ಬಂಡವಾಳ ಹಾಕಿ, ಕಷ್ಟಪಟ್ಟು ಬೆಳೆ ಬೆಳೆದಿದ್ದ ರೈತರು, ಈ ಭಾರಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದರು. ಈಗ ಕೊಯ್ಲು ಮಾಡುವ ಸಮಯ ಬಂದಿದೆ. ಆದರೆ ನಿರಂತರ ಮಳೆಯಿಂದಾಗಿ ಗದ್ದೆಗಿಳಿಯುವುದೆ ಕಷ್ಟವಾಗಿದೆ.

ಶಿವಮೊಗ್ಗ ಜಿಲ್ಲೆಯ 78 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. 51 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ.

ನೆಲಕ್ಕೊರಗಿದ ಭತ್ತ, ಜೋಳದ ಬೆಳೆ

ನಿರಂತರ ಮಳೆಯಿಂದಾಗಿ ಹೊಲದಲ್ಲಿ ತೇವಾಂಶವಿದೆ. ಗದ್ದೆಯಲ್ಲಿ ನೀರು ನಿಂತಿರುವುದರಿಂದ ಕೊಯ್ಲು ಯಂತ್ರಗಳನ್ನು ಇಳಿಸುವುದು ಕಷ್ಟವಾಗಲಿದೆ. ಒಂದು ವೇಳೆ ಕೂಲಿ ಕಾರ್ಮಿಕರನ್ನು ಬಳಸಿ ಕೊಯ್ಲು ಮಾಡಿದರೂ ಬೆಳೆಯನ್ನು ಒಣಗಿಸುವುದು ಸವಾಲಾಗಿದೆ. ಹಾಗಾಗಿ ಭತ್ತ, ಮೆಕ್ಕೆಜೋಳದ ಬೆಳೆ ನೆಲಕ್ಕೊರಗಿವೆ.

ಬಿಸಿಲು ನೆಲ ಮುಟ್ಟಬೇಕು

ಬೆಳೆ ಕೊಯ್ಲು ಮಾಡಿದರೂ ಅದನ್ನು ಒಣಗಿಸಬೇಕು. ನಿರಂತರ ಮೋಡ, ಮಳೆಯಿಂದಾಗಿ ಬಿಸಿಲು ನೆಲ ಮುಟ್ಟುತ್ತಿಲ್ಲ. ಈ ಸಂದರ್ಭದಲ್ಲಿ ಬೆಳೆ ಒಣಗಿಸುವುದು ಅತಿದೊಡ್ಡ ಸವಾಲಾಗಿದೆ. ಒಂದು ವೇಳೆ ಬೆಳೆಯನ್ನು ಸರಿಯಾಗಿ ಒಣಗಿಸದೆ ಇದ್ದರೆ ಕಾಳು ಬಣ್ಣ ಕಳೆದುಕೊಂಡು, ಮುಗ್ಗಲು ಹಿಡಿಯಲಿದೆ.

shivamogga live subscirbe contact

ಪರಿಹಾರಕ್ಕೆ ಹೆಚ್ಚಿದ ಆಗ್ರಹ

ಅಕ್ಟೋಬರ್ ಮೊದಲ ವಾರದಿಂದ ಶುರುವಾದ ಮಳೆ ಚಳಿಗಾಲ ಆರಂಭವಾದರೂ ನಿರಂತರವಾಗಿ ಸುರಿಯುತ್ತಿದೆ. ಇನ್ನಷ್ಟು ದಿನ ಮಳೆ ಸುರಿದರೆ ಬೆಳೆ ನಷ್ಟ ನಿಶ್ಚಿತ. ಹಾಗಾಗಿ ಪರಿಹಾರ ನೀಡಬೇಕು ಎಂದು ರೈತರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಇನ್ನೂ ಒಂದು ವಾರ ಮಳೆ ಆತಂಕ

ರಾಜ್ಯಾದ್ಯಂತ ಇನ್ನೂ ಒಂದು ವಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ರೈತರಲ್ಲಿ ಮತ್ತಷ್ಟು ಆತಂಕ ಉಂಟು ಮಾಡಿದೆ. ಮಳೆ ಇದೆ ರೀತಿ ಮುಂದುವರೆದರೆ ಕೊಯ್ಲು ಮತ್ತು ಒಕ್ಕಲು ಮಾಡುವುದು ಕಷ್ಟಕರ. ಬೆಳೆ ಸಂಪೂರ್ಣ ಹಾನಿಯಾಗುವ ಸಾಧ್ಯತೆ ಇದೆ. ಇದು ರೈತರಲ್ಲಿ ತೀವ್ರ ಆತಂಕ ಉಂಟು ಮಾಡಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 19, 2021

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Leave a Comment