ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ನವೆಂಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ನಿರಂತರ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊಯ್ಲಿಗೆ ಬಂದಿರುವ ಭತ್ತ, ಜೋಳದ ಬೆಳೆ ಕೈ ತಪ್ಪುವ ಆತಂಕ ಎದುರಾಗಿದೆ. ಇದೆ ರೀತಿ ಮಳೆ ಮುಂದುವರೆದರೆ ಈ ಭಾರಿ ಜಿಲ್ಲೆಯ ದೊಡ್ಡ ಸಂಖ್ಯೆಯ ರೈತರು ಸಂಪೂರ್ಣ ಬೆಳೆ ಕಳೆದುಕೊಳ್ಳುವ ಸಾಧ್ಯತೆ ಇದೆ.
ಆರು ತಿಂಗಳಿಂದ ಬಂಡವಾಳ ಹಾಕಿ, ಕಷ್ಟಪಟ್ಟು ಬೆಳೆ ಬೆಳೆದಿದ್ದ ರೈತರು, ಈ ಭಾರಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದರು. ಈಗ ಕೊಯ್ಲು ಮಾಡುವ ಸಮಯ ಬಂದಿದೆ. ಆದರೆ ನಿರಂತರ ಮಳೆಯಿಂದಾಗಿ ಗದ್ದೆಗಿಳಿಯುವುದೆ ಕಷ್ಟವಾಗಿದೆ.
ಶಿವಮೊಗ್ಗ ಜಿಲ್ಲೆಯ 78 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. 51 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ.
ನೆಲಕ್ಕೊರಗಿದ ಭತ್ತ, ಜೋಳದ ಬೆಳೆ
ನಿರಂತರ ಮಳೆಯಿಂದಾಗಿ ಹೊಲದಲ್ಲಿ ತೇವಾಂಶವಿದೆ. ಗದ್ದೆಯಲ್ಲಿ ನೀರು ನಿಂತಿರುವುದರಿಂದ ಕೊಯ್ಲು ಯಂತ್ರಗಳನ್ನು ಇಳಿಸುವುದು ಕಷ್ಟವಾಗಲಿದೆ. ಒಂದು ವೇಳೆ ಕೂಲಿ ಕಾರ್ಮಿಕರನ್ನು ಬಳಸಿ ಕೊಯ್ಲು ಮಾಡಿದರೂ ಬೆಳೆಯನ್ನು ಒಣಗಿಸುವುದು ಸವಾಲಾಗಿದೆ. ಹಾಗಾಗಿ ಭತ್ತ, ಮೆಕ್ಕೆಜೋಳದ ಬೆಳೆ ನೆಲಕ್ಕೊರಗಿವೆ.
ಬಿಸಿಲು ನೆಲ ಮುಟ್ಟಬೇಕು
ಬೆಳೆ ಕೊಯ್ಲು ಮಾಡಿದರೂ ಅದನ್ನು ಒಣಗಿಸಬೇಕು. ನಿರಂತರ ಮೋಡ, ಮಳೆಯಿಂದಾಗಿ ಬಿಸಿಲು ನೆಲ ಮುಟ್ಟುತ್ತಿಲ್ಲ. ಈ ಸಂದರ್ಭದಲ್ಲಿ ಬೆಳೆ ಒಣಗಿಸುವುದು ಅತಿದೊಡ್ಡ ಸವಾಲಾಗಿದೆ. ಒಂದು ವೇಳೆ ಬೆಳೆಯನ್ನು ಸರಿಯಾಗಿ ಒಣಗಿಸದೆ ಇದ್ದರೆ ಕಾಳು ಬಣ್ಣ ಕಳೆದುಕೊಂಡು, ಮುಗ್ಗಲು ಹಿಡಿಯಲಿದೆ.

ಪರಿಹಾರಕ್ಕೆ ಹೆಚ್ಚಿದ ಆಗ್ರಹ
ಅಕ್ಟೋಬರ್ ಮೊದಲ ವಾರದಿಂದ ಶುರುವಾದ ಮಳೆ ಚಳಿಗಾಲ ಆರಂಭವಾದರೂ ನಿರಂತರವಾಗಿ ಸುರಿಯುತ್ತಿದೆ. ಇನ್ನಷ್ಟು ದಿನ ಮಳೆ ಸುರಿದರೆ ಬೆಳೆ ನಷ್ಟ ನಿಶ್ಚಿತ. ಹಾಗಾಗಿ ಪರಿಹಾರ ನೀಡಬೇಕು ಎಂದು ರೈತರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಇನ್ನೂ ಒಂದು ವಾರ ಮಳೆ ಆತಂಕ
ರಾಜ್ಯಾದ್ಯಂತ ಇನ್ನೂ ಒಂದು ವಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ರೈತರಲ್ಲಿ ಮತ್ತಷ್ಟು ಆತಂಕ ಉಂಟು ಮಾಡಿದೆ. ಮಳೆ ಇದೆ ರೀತಿ ಮುಂದುವರೆದರೆ ಕೊಯ್ಲು ಮತ್ತು ಒಕ್ಕಲು ಮಾಡುವುದು ಕಷ್ಟಕರ. ಬೆಳೆ ಸಂಪೂರ್ಣ ಹಾನಿಯಾಗುವ ಸಾಧ್ಯತೆ ಇದೆ. ಇದು ರೈತರಲ್ಲಿ ತೀವ್ರ ಆತಂಕ ಉಂಟು ಮಾಡಿದೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






