ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 10 AUGUST 2024 : ‘ಕಾರ್ಪೊರೇಟ್ ಕಂಪನಿಗಳೇ (Corporate) ದೇಶಬಿಟ್ಟು ತೊಲಗಿ’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಕಾರ್ಪೊರೇಟ್ ಕಂಪನಿಗಳನ್ನು ಪ್ರತಿನಿಧಿಸುವ ಪ್ರತಿಕೃತಿಯನ್ನು ದಹಿಸಿ ಪ್ರತಿರೋಧ ವ್ಯಕ್ತಪಡಿಸಲಾಯಿತು.
ಇದನ್ನೂ ಓದಿ ⇒ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ, ಹೊಸನಗರದಲ್ಲಿ ಹೃದಯವಿದ್ರಾವಕ ಘಟನೆ
ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿದ ದಿನವಾದ ಇಂದು ಕೃಷಿಯ ಮೇಲೆ ಕಾರ್ಪೊರೇಟ್ ಕಂಪನಿಗಳ ಹಿಡಿತದಿಂದ ಮುಕ್ತಿಯಾಗಿ ಆಕ್ರಮಣ ನಿಲ್ಲಬೇಕು. ರೈತರ ಬೆಳೆಗಳಿಗೆ ಎಂಎಸ್ಪಿ ಖಾತ್ರಿಯಾಗಬೇಕು. ರೈತರ ಹಾಗೂ ಜನಸಾಮಾನ್ಯರ ಬದುಕಿಗೆ ಕಂಟಕವಾಗಿರುವ ವಿದ್ಯುತ್ ಖಾಸಗೀಕರಣ ರದ್ದು ಮಾಡಬೇಕು. ಕಂಪನಿಗಳ ಹಿತ ಕಾಯಲು ತಂದಿರುವ ಕಾರ್ಮಿಕ ವಿರೋಧಿ ನಾಲ್ಕು ಕಾಯ್ದೆಗಳನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.

ಉದ್ಯೋಗ ಭದ್ರತೆ ದೇಶದ ನೀತಿಯಾಗಬೇಕು. ಹಿಂಬಾಗಿಲಿನಿಂದ ಬಂದು ಮೀಸಲಾತಿಯನ್ನು ಸರ್ವಾನಾಶಗೊಳಿಸುತ್ತಿರುವ ಕಾರ್ಪೊರೇಟ್ ಪರ ಖಾಸಗೀಕರಣ ನಿಂತು ಮೀಸಲಾತಿ ಜಾರಿಯಾಗಬೇಕು ಎಂದು ಆಗ್ರಹಿಸಲಾಯಿತು.
ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಪ್ರಮುಖರಾದ ಇ.ಬಿ.ಜಗದೀಶ್, ಕೆ.ರಾಘವೇಂದ್ರ, ಟಿ. ಎಂ.ಚಂದ್ರಪ್ಪ ಹಿಟ್ಟೂರು ರಾಜು, ಜಿ.ಎನ್. ಪಂಚಾಕ್ಷರಿ, ಜ್ಞಾನೇಶ್, ಸಿ.ಚಂದ್ರಪ್ಪ, ಗುರುಶಾಂತ ಇದ್ದರು.
ಇದನ್ನೂ ಓದಿ ⇒ ನಾಗರ ಪಂಚಮಿಯಂದೆ ಹಾವು ಕಡಿದು ಬಾಣಂತಿ ಸಾವು
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು















