ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು?| 23 ಜುಲೈ 2025 |ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು – FATAFAT NEWS

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯ ಸಮಗ್ರ ಸುದ್ದಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಜುಲೈ 22ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಎಲ್ಲ ಪ್ರಮುಖ ಸುದ್ದಿಗಳು ಇಲ್ಲಿವೆ. (Fatafat News)

Speed News 1ಸೊರಬ: ಕುಬಟೂರು ಗ್ರಾಮದ ಶ್ರೀ ಚಿಂತಾಮಣಿ ನರಸಿಂಹಸ್ವಾಮಿ ದೇವರ ವಿಗ್ರಹ ಭಗ್ನ. ಕೆಲವೇ ಹೊತ್ತಿನಲ್ಲಿ ಆರೋಪಿ ಅರೆಸ್ಟ್‌. ಹಾನಗಲ್‌ ತಾಲೂಕು ಗೋಂದಿ ಗ್ರಾಮದ ಕೋಟೇಶ್ವರ (32) ಅರೆಸ್ಟ್‌.

Speed News 2ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಮೆಡಿಕಲ್‌ ರೆಪ್‌ ಸಚಿನ್‌ (25) ಸ್ಥಳದಲ್ಲೇ ಸಾವು. ರಾತ್ರಿ ಕೆಲಸ ಮುಗಿಸಿ ಕ್ಯಾತಿನಕೊಪ್ಪದ ಮನೆಗೆ ಮರಳುವಾಗ ಘಟನೆ. ಪೂರ್ತಿ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ » ಶಿವಮೊಗ್ಗದಲ್ಲಿ ರಾತ್ರಿ ಹಿಟ್‌ ಅಂಡ್‌ ರನ್‌ ಅಪಘಾತ, ಮೆಡಿಕಲ್‌ ರೆಪ್‌ ಸ್ಥಳದಲ್ಲೆ ದುರ್ಮರಣ

FATAFAT-NEWS-BAND.webp

Speed News 3ಶಿವಮೊಗ್ಗ: ಕಾಚಿನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಓಂಕಾರಪ್ಪ ಎಂಬವವರಿಗೆ ಸೇರಿದ ಬೈಕ್‌ ಭಾಗಶಃ ಸುಟ್ಟು ಹೋಗಿದೆ. ಪೂರ್ತಿ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ » ಕಾಚಿನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ನಡುರಾತ್ರಿ ಬೆಂಕಿ

Speed News 4ಹೊಸನಗರ: ನಿಟ್ಟೂರು ಸಮೀಪ ಸಂಪೇಕಟ್ಟೆ ಸರ್ಕಲ್‌ನಲ್ಲಿ ಮದ್ಯದ ವಿಚಾರಕ್ಕೆ ಲಕ್ಷ್ಮೀಶ ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೂವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೂರ್ತಿ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ » ಹೊಸನಗರದ ಸಂಪೆಕಟ್ಟೆಯಲ್ಲಿ ಮದ್ಯದ ವಿಚಾರಕ್ಕೆ ರಾಡ್‌ನಿಂದ ಹಲ್ಲೆ, CCTVಯಲ್ಲಿ ದೃಶ್ಯ ಸೆರೆ, ಏನಿದು ಘಟನೆ?

Speed News 5ಶಿವಮೊಗ್ಗ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಅಪರಿಚಿತ ವ್ಯಕ್ತಿ ಹೇಳಿಕೆ ನೀಡಿದ ಬೆನ್ನಿಗೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸಮಯೋಚಿತ. ನಿಷ್ಪಕ್ಷಪಾತ ತನಿಖೆಯಾಗಲಿ. ಸುದ್ದಿಗೋಷ್ಠಿಯಲ್ಲಿ ವಕೀಲ ಕೆ.ಪಿ.ಶ್ರೀಪಾಲ್‌ ಆಗ್ರಹ.

Speed News 6ಸೊರಬ: ಅಗಸನಹಳ್ಳಿಯಲ್ಲಿ ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗುತ್ತಿದ್ದ ಮನೆಯನ್ನು ತೆರವು ಮಾಡಲಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

Speed News 7ರಿಪ್ಪನ್‌ಪೇಟೆ: ಕೆಂಚನಾಲ ಮಾರಿಕಾಂಬ ದೇವಿಯ ಮಳೆಗಾಲದ ಮಾರಿಜಾತ್ರೆಯು ವಿಜೃಂಭಣೆಯಿಂದ ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.  

June-2025-Report-Shivamogga-Live-New-New.

Speed News 8ಶಿವಮೊಗ್ಗ: ತುರ್ತು ಪರಿಸ್ಥಿತಿಗೆ 50 ವರ್ಷವಾದ ಹಿನ್ನೆಲೆ ಶ್ರೀಗಂಧ ಸಂಸ್ಥೆಯಿಂದ ಜು.25ರಂದು ಸಂಜೆ 5.30ಕ್ಕೆ ಶುಭ ಮಂಗಳ ಸಮುದಾಯ ಭವನದಲ್ಲಿ ಕರಾಳ ಅಧ್ಯಾಯ 50 ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Speed News 9ಸೊರಬ: ಮಳೆಗೆ ಆನವಟ್ಟಿಯ ಹಿರೇಮಾಗಡಿಯ ರುಕ್ಮಿಣಿ ಬಾಯಿ, ಚಂದ್ರಗುತ್ತಿಯ ಬೆನ್ನೂರು ಗ್ರಾಮದ ಶಾರದಮ್ಮ ಅವರ ಮನೆಗಳ ಗೋಡೆ ಕುಸಿದು ಹಾನಿಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

Speed News 10ಶಿವಮೊಗ್ಗ: ಮೂಡುಬಿದಿರೆಯ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದಿಂದ ಆ.1 ಮತ್ತು 2ರಂದು ಆಳ್ವಾಸ್‌ ಪ್ರಗತಿ 2025 ಬೃಹತ್‌ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಅಳ್ವಾಸ್‌ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್‌ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Speed News 11ಶಿವಮೊಗ್ಗ: ರೈತ ಸಂಘದ ಸಂಸ್ಥಾಪಕ ಅಧ್ಯಕ್ಷ ಹೆಚ್‌.ಎಸ್‌.ರುದ್ರಪ್ಪ ನೆನಪಿನಲ್ಲಿ ಆ.19ರಂದು ಡಾ.ಅಂಬೇಡ್ಕರ್‌ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ತಿಳಿಸಿದರು.

Speed News 12ಭದ್ರಾವತಿ: ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯಿಂದ ವೇದಾವತಿ ನದಿಗೆ ಸೇರುವ ಹಳ್ಳದ ಮುಖಾಂತರ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರಕ್ಕೆ ಜುಲೈ 27ರಿಂದ ನೀರು ಹರಿಸಲಾಗುತ್ತದೆ. ಮುಂದಿನ ನಾಲ್ಕು ತಿಂಗಳವರೆಗೆ 4.25 ಟಿಎಂಸಿ ಅಡಿ ನೀರು ಹರಿಯಲಿದೆ.

Prashanth-Loan-Advertisement.

Speed News 13ಹೊಸನಗರ: ಮಾರ್ಗ ಮಧ್ಯೆ ಡಿಸೇಲ್‌ ಖಾಲಿಯಾಗಿ ನಿಂತ ಕೆಎಸ್‌ಆರ್‌ಟಿಸಿ ಬಸ್‌. ಹುಲಿಕಲ್‌ ಘಾಟಿ ತಿರುವಿನಿಂದ ಕೊಂಚ ದೂರದಲ್ಲಿ ಬಸ್‌ ನಿಂತಿದ್ದರಿಂದ ಕೆಲ ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು. ಶಿವಮೊಗ್ಗ ಹೊಸನಗರ ಮಾರ್ಗವಾಗಿ ಬಸ್ಸು ಉಡುಪಿಗೆ ತೆರಳುತಿತ್ತು. ಪೂರ್ತಿ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ » ಹುಲಿಕಲ್‌ ಘಾಟಿಯಲ್ಲಿ ಡಿಸೇಲ್‌ ಖಾಲಿಯಾಗಿ ನಿಂತ KSRTC ಬಸ್‌, ಕೆಲಕಾಲ ಸಂಚಾರ ಅಸ್ತವ್ಯಸ್ತ

Speed News 14ಶಿವಮೊಗ್ಗ: ರೈಲ್ವೆ ನಿಲ್ದಾಣದ ಮುಂದೆ ಆಟೋಗಳನ್ನು ನಿಷೇಧಿಸಲಾಗಿದೆ. ನಿಲ್ದಾಣದ ಮೂರು ದಾರಿಯಲ್ಲಿ ಬ್ಯಾರಿಕೇಡ್‌ ಅಳವಡಿಸಲಾಗಿದೆ. ಚಾಲಕರಿಂದ ಪ್ರಯಾಣಿಕರಿಗೆ ಕಿರಿಕಿರಿ ತಪ್ಪಿಸಲು ಸಂಚಾರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಪೂರ್ತಿ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ » ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂದಿನ ರಸ್ತೆಯಲ್ಲಿ ಆಟೋಗಳಿಗೆ ನಿಷೇಧ, ಕಾರಣವೇನು? ಈಗ ಹೇಗಿದೆ ವ್ಯವಸ್ಥೆ?

Speed News 15ಸಾಗರ: ಜೀವನ್ಮುಖಿ ಸಂಸ್ಥೆಯು ಎಸ್.ಎನ್. ನಗರ ಬಡಾವಣೆಯ ಭೂಮಿ ರಂಗಮನೆಯಲ್ಲಿ ಜುಲೈ 25ರಿಂದ 27ರವರೆಗೆ ನೆಲದ ದನಿ ಜನಪದ ಗಾಯನ ಕಲಿಕಾ ಶಿಬಿರ ಆಯೋಜಿಸಿದೆ.

shivamogga live news whatsappa number

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 23, 2025

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment