GOOD MORNING SHIMOGA, 3 OCTOBER 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ವೈರಿಗಳು ಹೊರಗಿಲ್ಲ. ನಮ್ಮೊಳಗೇ ಇದ್ದಾರೆ. ಸಿಟ್ಟು, ಅಹಂ, ಮೋಹ, ದ್ವೇಷಗಳೆ ನಿಜವಾದ ಶತ್ರುಗಳು.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಬಿಸಿಲ ಧಗೆ, ಒಣ ಹವೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ ಸಿಟಿ ಸುದ್ದಿ
ಮಹಾನಗರ ಪಾಲಿಕೆ : ಶಿವಮೊಗ್ಗದಲ್ಲಿ ಇವತ್ತಿನಿಂದ ಶರನ್ನವರಾತ್ರಿ. 68 ವಿವಿಧ ಕಾರ್ಯಕ್ರಮ ಆಯೋಜನೆ. ಪತ್ರಿಕಾಗೋಷ್ಠಿಯಲ್ಲಿ ಶಾಸಕ ಚನ್ನಬಸಪ್ಪ ಹೇಳಿಕೆ.
ಶಿವಮೊಗ್ಗ ಸಿಟಿ : ನಗರದ ವಿವಿಧ ದೇಗುಲಗಳಲ್ಲಿ ಶರನ್ನವರಾತ್ರಿ ಅಂಗವಾಗಿ ವಿವಿಧ ಕಾರ್ಯಕ್ರಮ ಆಯೋಜನೆ. ಬೆಳಗ್ಗೆಯಿಂದಲೆ ಪೂಜೆಗಳು ಆರಂಭ.
ಕುವೆಂಪು ರಂಗಮಂದಿರ : ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮ. ಗಾಂಧೀಜಿ ಸೇರಿದಂತೆ ಅನೇಕರ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿಕೆ.
ಶಿವಮೊಗ್ಗ ಸಿಟಿ : ಜಿಲ್ಲಾ ಕಾಂಗ್ರೆಸ್ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ನಗರದಲ್ಲಿ ಪಾದಯಾತ್ರೆ ನಡೆಸಲಾಯಿತು. ಗಾಂಧಿ ಟೋಪಿ ಧರಿಸಿ, ಗಾಂಧೀಜಿ ಪರ ಘೋಷಣೆ ಮೊಳಗಿಸುತ್ತ ಪಾದಯಾತ್ರೆ ನಡೆಸಲಾಯಿತು.
ಗೋಪಿ ಸರ್ಕಲ್ : ಬಿಜೆಪಿ ನಗರ ಘಟಕದ ವತಿಯಿಂದ ಖಾದಿ ಉತ್ಸವ. ಖಾದಿ ಉತ್ಪನ್ನಗಳ ಮಾರಾಟ ಮಳಿಗೆಗೆ ಸಂಸದ ರಾಘವೇಂದ್ರ ಚಾಲನೆ.
ಶಿವಮೊಗ್ಗ ಸಿಟಿ : ಮೂಡ ಹಗರಣದಲ್ಲಿ ಆಗಿರುವ ತಪ್ಪು ಮರೆಮಾಚಲು ಸಾಧ್ಯವಿಲ್ಲ. ಯಾರೆ ತಪ್ಪು ಮಾಡಿದ್ದರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸಂಸದ ರಾಘವೇಂದ್ರ ಹೇಳಿಕೆ.
ಶಿವಮೊಗ್ಗ ಸಿಟಿ : ಮೂಡ ಹಗರಣದ ವಿರುದ್ಧ ಬಿಜೆಪಿಯ ಹೋರಾಟವನ್ನು ಲಘುವಾಗಿ ಪರಿಗಣಿಸಲಾಗಿತ್ತು. ಈಗ ಸಿದ್ದರಾಮಯ್ಯ ಅವರ ಪತ್ನಿ ಸೈಟ್ ಹಿಂತಿರುಗಿಸಿದ್ದಾರೆ. ಇನ್ನಾದರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಎಂಎಲ್ಸಿ ಡಿ.ಎಸ್.ಅರುಣ್ ಆಗ್ರಹ.
ಇದನ್ನೂ ಓದಿ » ದಿನ ಭವಿಷ್ಯ | ಇವತ್ತು ಈ ರಾಶಿಯವರಿಗೆ ಸ್ತ್ರೀ ದೋಷ, ಹಣಕಾಸು ಸಮಸ್ಯೆ
ತಾಲೂಕು ಸುದ್ದಿಗಳು
ಸಕ್ರೆಬೈಲು : ಶಿವಮೊಗ್ಗ ದಸರಾಗೆ ಬಿಡಾರದ ಆನೆಗಳಿಗೆ ಆಹ್ವಾನ. ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಆನೆಗಳಿಗೆ ಪೂಜೆ ಸಲ್ಲಿಸಲಾಯಿತು.
ಹೊಳೆಹೊನ್ನೂರು : ಆನವೇರಿಯಲ್ಲಿ ತಗಡಿನ ಶೆಡ್ ನಿರ್ಮಾಣದ ವೇಳೆ ವಿದ್ಯುತ್ ಅವಘಡಕ್ಕೆ ರಕ್ಷಿತ್ (22) ಸಾವು. ಕೂಡ್ಲಿಯಲ್ಲಿ ತುಂಗಭದ್ರ ಸಂಗಮದಲ್ಲಿ ಸ್ನಾನಕ್ಕೆ ಇಳಿದಿದ್ದ ಹರ್ಷಿತ್ (23) ನಾಪತ್ತೆ.
ಸಾಗರ : ಹೆಗ್ಗೋಡಿನ ನೀನಾಸಂನಲ್ಲಿ ಕಲೆಗಳ ಸಂಗಡ ಮಾತುಕತೆ ಕಾರ್ಯಕ್ರಮದಲ್ಲಿ ಪರಿಸರ ಅಂಕಣಕಾರ ನಾಗೇಶ್ ಹೆಗಡೆ ಭಾಗಿ. ಚಳವಳಿಗಳ ಸಂದರ್ಭ ಕಲೆಗಳ ಮೂಲಕ ಕಲಾವಿದರು ಜನರ ಬಳಿ ಸಮಸ್ಯೆ ಕೊಂಡೊಯ್ಯುತ್ತಿದ್ದರು. ಈಗಲೂ ಕಲೆಗಳು ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡುತ್ತಿವೆ ಎಂದರು.
ರಿಪ್ಪನ್ಪೇಟೆ : ಬಿಜೆಪಿಯಿಂದ ಉಚ್ಛಾಟಿತರಾಗಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಸಲಹೆ ಪಕ್ಷಕ್ಕೆ ಅಗತ್ಯವಿಲ್ಲ. ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿಕೆ.
ಶಿಮುಲ್ : ಹಾಲು ಉತ್ಪಾದಕರಿಂದ ಖರೀದಿ ದರ 90 ಪೈಸೆ ಇಳಿಸಿದ ಹಾಲು ಒಕ್ಕೂಟ. ಪರಿಷ್ಕೃತ ದರ ಅ.1ರಿಂದಲೇ ಜಾರಿಗೆ ಬಂದಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಯಾವ್ಯಾವ ಗ್ಯಾರಂಟಿ ಯೋಜನೆ ಎಷ್ಟು ಜನರಿಗೆ ತಲುಪುತ್ತಿದೆ? ಇಲ್ಲಿದೆ ಡಿಟೇಲ್ಸ್
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






