ಯುವನಿಧಿ ಯೋಜನೆ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌, ಈಗಲೇ ನೋಂದಣಿಗೆ ಸೂಚನೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಯುವನಿಧಿ (Yuva Nidhi) ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಶಿವಮೊಗ್ಗ ಜಿಲ್ಲೆಯ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಯೋಜನೆಯಡಿ ಸರ್ಕಾರ ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಐ), ಜಿಟಿಟಿಸಿ, ಸಿಇಡಿಒಕೆ, ಕೆಎಸ್‌ ಡಿಸಿಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿ ನೀಡುತ್ತಿದೆ. ಯುವನಿಧಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ರಾಜ್ಯ ಕೌಶಲಾಭಿವೃದ್ಧಿ ನಿಗಮದ ವೆಬ್ ಸೈಟ್ https:// www.kaushalkar.com/app/registration_verify ಬಳಸಿ ನೋಂದಣಿ ಮಾಡಿಕೊಳ್ಳಲು ಸೂಚಿಸಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಕೌಶಲ್ಕಾರ್ ಪೋರ್ಟಲ್‌ನಲ್ಲಿ ಯುವನಿಧಿ ಫಲಾನುಭವಿಗಳು ತರಬೇತಿ ಪಡೆದರೆ ನಿರುದ್ಯೋಗ ಭತ್ಯೆ ತಡೆಹಿಡಿಯಲಾಗುತ್ತದೆ ಎಂದು ಭಾವಿಸಿ ಕೌಶಲ್ಕಾರ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ಹಿಂಜರಿಯುತ್ತಿರುವುದಾಗಿ ತಿಳಿದುಬಂದಿದೆ.

ತರಬೇತಿ ಪಡೆದರೂ ಸರ್ಕಾರ ನಿಗದಿಪಡಿಸಿರುವ ಅವಧಿಯವರೆಗೆ ನಿರುದ್ಯೋಗ ಭತ್ಯೆ ನೀಡಲಾಗುವುದು. ಆದ್ದರಿಂದ ಯುವನಿಧಿ ಫಲಾನುಭವಿಗಳು ನೋಂದಣಿ ಮಾಡಿಕೊಂಡು ತಮ್ಮ ಇಚ್ಚೆಯ ತರಬೇತಿ ಪಡೆಯುವಂತೆ ಜಿಲ್ಲಾ ಕೌಶಲಾಭಿವೃದ್ಧಿ ನಿಗಮ ಅಧಿ ಕಾರಿಗಳ ಪ್ರಕಟಣೆ ತಿಳಿಸಿದೆ.

JNNCE-Admission-Advt-scaled

ಇದನ್ನೂ ಓದಿ » ಹೊಸನಗರದಲ್ಲಿ ಉಕ್ಕಡ ಮಗುಚಿ ಯುವಕ ನಾಪತ್ತೆ, ಸರ್ಕಾರದ ವಿರುದ್ಧ ಸ್ಥಳೀಯರು ಗರಂ, ಹೇಗಾಯ್ತು ಘಟನೆ?

training in Yuva Nidhi scheme

Shimoga-News-update

Leave a Comment