| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಚಿತ್ರೀಕರಣದ ಸಂದರ್ಭ ಹೃದಯಾಘಾತವಾಗಿ ನಿರ್ದೇಶಕ (Director) ಸಂಗೀತ್ ಸಾಗರ್ ಅವರು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೊಪ್ಪ ತಾಲೂಕು ಹರಿಹರಪುರದಲ್ಲಿ ‘ಪಾತ್ರಧಾರಿʼ ಸಿನಿಮಾದ (Movie) ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಸಂಗೀತ್ ಸಾಗರ್ ಕುಸಿದು ಬಿದ್ದಿದ್ದರು. ಕೂಡಲೆ ಅವರನ್ನು ಕೊಪ್ಪ ಆಸ್ಪತ್ರೆಗೆ ರವಾನಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಿರ್ದೇಶಕ ಸಂಗೀತ್ ಸಾಗರ್ ಅವರನ್ನು ಶಿವಮೊಗ್ಗಕ್ಕೆ ಕರೆತರಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಕೊನೆಯ ಆ್ಯಕ್ಷನ್ ಕಟ್
ಪರಿಸರ ಸಂರಕ್ಷಣೆಯ ಕತೆಯುಳ್ಳ ಪಾತ್ರಧಾರಿ ಸಿನಿಮಾವನ್ನು ಸಂಗೀತ್ ಸಾಗರ್ ನಿರ್ದೇಶಿಸುತ್ತಿದ್ದರು. ಕಳೆದ ಎರಡು ತಿಂಗಳಿಂದ ತೀರ್ಥಹಳ್ಳಿ ಮತ್ತು ಕೊಪ್ಪ ತಾಲೂಕಿನ ವಿವಿಧೆಡೆ ಚಿತ್ರೀಕರಣ ಮಾಡುತ್ತಿದ್ದರು. ಗುರುವಾರ ಬೆಳಗ್ಗೆ ಸಿನಿಮಾದ ಕೊನೆಯ ಶಾಟ್ ಚಿತ್ರೀಕರಣಕ್ಕೆ ಯೋಜಿಸಲಾಗಿತ್ತು.

ಇಂದು ಮಧ್ಯಾಹ್ನ ಹಾಸ್ಯ ಕಲಾವಿದ ಸಂಜು ಬಸಯ್ಯ ಅವರಿಗೆ ಆ್ಯಕ್ಷನ್ ಹೇಳಿದ್ದರು. ಆ ವೇಳಗಾಗಲೇ ಸುಸ್ತಾಗಿ ಸಂಗೀತ್ ಸಾಗರ್ ಕುಸಿದಿದ್ದಾರೆ. ಕೂಡಲೆ ಸಿನಿಮಾ ತಂಡ ಅವರ ಆರೈಕೆ ಮಾಡಿ ಕೊಪ್ಪ ತಾಲೂಕಿನ ಆಸ್ಪತ್ರೆಗೆ ಕರೆದೊಯ್ದಿದ್ದರು.
ಚಿತ್ರತಂಡದಿಂದ ಅಂತಿಮ ದರ್ಶನ
ನಿರ್ದೇಶಕ ಸಂಗೀತ್ ಸಾಗರ್ ನಿಧನರಾದ ವಿಷಯ ತಿಳಿದು ಪಾತ್ರಧಾರಿ ಚಿತ್ರತಂಡ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ಧಾವಿಸಿದೆ. ನಿರ್ಮಾಪಕ ಡೇವಿಡ್, ನಟ ಸಂಜು ಬಸಯ್ಯ ಸೇರಿದಂತೆ ನಟ, ನಟಿಯರು, ಸಿನಿಮಾ ತಂಡ ಅಂತಿಮ ದರ್ಶನ ಪಡೆಯಿತು.


ಇದನ್ನೂ ಓದಿ » ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ವಿರುದ್ಧ ಜಿಲ್ಲಾಧಿಕಾರಿಗೆ ದೂರು, ಏನೇನಿದೆ ಕಂಪ್ಲೇಂಟ್ನಲ್ಲಿ?
ನಿರ್ದೇಶಕ ಸಂಗೀತ್ ಸಾಗರ್ ಅವರು ಸ್ನೇಹಿತ, ಕೋಟೆ ಹುಡುಗರು ಸೇರಿ ಎಂಟು ಸಿನಿಮಾಗಳನ್ನು ನಿರ್ದೇಶಿಸಿದ್ದರು. ಮೂಲತಃ ಹಾಸನ ಜಿಲ್ಲೆ ಸಕಲೇಶಪುರದವರು. ಇವರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
- ಅಡಿಕೆ ಧಾರಣೆ | 4 ಡಿಸೆಂಬರ್ 2025 | ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್?
![]()