ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ವಿದೇಶದ ಐಟಿ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗ ಜಿಲ್ಲೆಯ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರಿಗೆ ₹2,58,000 ವಂಚನೆ ಮಾಡಲಾಗಿದೆ.
ಶಿವಮೊಗ್ಗದ ಸಾಫ್ಟ್ವೇರ್ ಇಂಜಿನಿಯರ್ ಆನ್ಲೈನ್ ಮೂಲಕ ವಿದೇಶಗಳಲ್ಲಿ ಉದ್ಯೋಗ ಹುಡುಕುತ್ತಿದ್ದ ಸಂದರ್ಭ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಕರೆ ಬಂದಿತ್ತು. ಆ ವ್ಯಕ್ತಿ ವಿವಿಧ ಐಟಿ ಕಂಪನಿಗಳಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿದ್ದ. ಅದಕ್ಕಾಗಿ 2 ರಿಂದ 3 ಲಕ್ಷ ರುಪಾಯಿವರೆಗೆ ಖರ್ಚಾಗಲಿದೆ ಎಂದು ಹೇಳಿದ್ದ. ನಂಬಿದ ಸಾಫ್ಟ್ವೇರ್ ಇಂಜಿನಿಯರ್, ತಮ್ಮ ರೆಸ್ಯೂಮ್ ಕಳುಹಿಸಿದ್ದರು. ಅಪರಿಚಿತ ವಿವಿಧ ಹಂತಗಳ ಪ್ರೊಸೆಸಿಂಗ್ ಫೀಸ್ ಮತ್ತು ಇತರೆ ಕಾರಣಗಳನ್ನು ಹೇಳಿ ಸಾಫ್ಟ್ವೇರ್ ಇಂಜಿನಿಯರ್ ಕಡೆಯಿಂದ ₹2,58,000 ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದ.

ಇದನ್ನೂ ಓದಿ » ಕೊನೆಗೂ ಎಚ್ಚೆತ್ತ ಅಧಿಕಾರಿಗಳು, ಶಿವಮೊಗ್ಗ ಲೈವ್ ನಿರಂತರ ವರದಿ ಬಳಿಕ ರಸ್ತೆ ಗುಂಡಿಗಳು ಬಂದ್
ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಕರೆ ಮಾಡಿದ ವ್ಯಕ್ತಿ ಇನ್ನೂ 2 ಲಕ್ಷ ರೂಪಾಯಿ ಹಣ ಹಾಕುವಂತೆ ಬೇಡಿಕೆ ಇಟ್ಟಿದ್ದರು. ಇದರಿಂದ ಸಾಫ್ಟ್ವೇರ್ ಇಂಜಿನಿಯರ್ಗೆ ಅನುಮಾನ ಬಂದಿದ್ದು, ತಾವು ಹಾಕಿದ ಹಣವನ್ನು ವಾಪಸ್ ನೀಡುವಂತೆ ಕೇಳಿದ್ದಾರೆ. ಆದರೆ ಅಪರಿಚಿತರು ಕರೆ ಕಡಿತಗೊಳಿಸಿ ನಂತರ ಸ್ವೀಕರಿಸಿಲ್ಲ. ವಂಚನೆಗೊಳಗಾದ ಅರಿವಾದ ಹಿನ್ನಲೆ ಸಾಫ್ಟ್ವೇರ್ ಇಂಜಿನಿಯರ್ ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು
















