ಶಿವಮೊಗ್ಗ ಲೈವ್.ಕಾಂ | SHIMOGA | 2 ಏಪ್ರಿಲ್ 2020
ಕರೋನ ಲಾಕ್’ಡೌನ್’ನಿಂದಾಗಿ ಬೆಳೆ ಹಾಳಾಗುವ ಭೀತಿಯಲ್ಲಿದ್ದ ರೈತರಿಗೆ ಶಿವಮೊಗ್ಗ ಜಿಲ್ಲಾಡಳಿತ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ತಾವು ಬೆಳೆದ ಬೆಳೆಯನ್ನು ರೈತರು ಮಾರುಕಟ್ಟೆಗೆ ಸಾಗಿಸಲು ಅವಕಾಶ ಕಲ್ಪಿಸುವುದಾಗಿ ಜಿಲ್ಲಾಡಳಿತ ತಿಳಿಸಿದೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು, ಶಿವಮೊಗ್ಗ ಜಿಲ್ಲೆಯ ರೈತರು ಬೆಳೆದ ಹಣ್ಣು, ತರಕಾರಿ ಸರಬರಾಜಿಗೆ ಲಾಕ್’ಡೌನ್’ನಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಳೆಗಾರರು ದಾಸ್ತಾನು ಮಾಡಿಕೊಂಡಿರುವ ಹಣ್ಣು, ತರಕಾರಿಯನ್ನು ಸ್ಥಳೀಯ ಮಾರುಕಟ್ಟೆ, ಜಿಲ್ಲೆ, ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ನಿಯಮಾನುಸಾರ ಸಾಗಿಸಲು ಮತ್ತು ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಸಗಟು ವ್ಯಾಪಾರಿಗಳು ರೈತರ ಬೆಳೆ ಖರೀದಿಸಿ, ಸಾಗಾಣಿಕೆ ಮಾಡಲೂ ಅನುಮತಿ ನೀಡಲಾಗಿದೆ. ಈ ವೇಳೆ ಕೆಲಸಕ್ಕೆ ಬರುವವರಿಗೆ ಮಾಸ್ಕ್, ಸ್ಯಾನಿಟೈಸರ್ ಒದಗಿಸುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200