ಲಿಂಗನಮಕ್ಕಿ ಜಲಾಶಯದಲ್ಲಿ ಗಂಗೆ ಪೂಜೆ, ಶರಾವತಿಗೆ ಬಾಗಿನ ಅರ್ಪಣೆ, ಗೇಟ್‌ ಮೇಲೆತ್ತಿ ನೀರು ಹೊರಕ್ಕೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SAGARA, 26 JULY 2024 : ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಲಿಂಗನಮಕ್ಕಿ ಜಲಾಶಯ (LINGANAMAKKI DAM) ಭರ್ತಿಯಾಗುವ ಹಂತಕ್ಕೆ ತಲುಪಿದೆ. ಜಲಾಶಯದ ನೀರಿನ ಮಟ್ಟ ಹೆಚ್ಚಳವಾದ ಹಿನ್ನೆಲೆ ಇವತ್ತು ಗಂಗೆ ಪೂಜೆ ನೆರವೇರಿಸಲಾಯಿತು. ಅಲ್ಲದೆ ಒಂದು ಗೇಟ್ ಮೂಲಕ ಸಾಂಪ್ರದಾಯಿಕವಾಗಿ ನೀರನ್ನು ಹೊರ ಬಿಡಲಾಯಿತು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಅಧಿಕಾರಿಗಳಿಂದ ಗಂಗೆ ಪೂಜೆ

ಲಿಂಗನಮಕ್ಕಿ ಜಲಾಶಯ ಭರ್ತಿಯಾಗುವ ಹಂತ ತಲುಪಿದ ಹಿನ್ನೆಲೆ ಇವತ್ತು ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳು ಗಂಗೆ ಪೂಜೆ ನೆರವೇರಿಸಿದರು. ಜಲಾಶಯದಲ್ಲಿ ಪೂಜೆ ಸಲ್ಲಿಸಿ, ಬಳಿಕ ಶರಾವತಿ ನದಿಗೆ ಬಾಗಿನ ಅರ್ಪಿಸಿದರು.

Linganamakki-dam-gange-pooje

ಗಂಗೆ ಪೂಜೆ ಬಳಿಕ ಲಿಂಗನಮಕ್ಕಿ ಜಲಾಶಯದ ಒಂದು ಕ್ರಸ್ಟ್ ಗೇಟನ್ನು ಮೇಲೆತ್ತಿ, ಸ್ವಲ್ಪ ಹೊತ್ತು ನೀರು ಹೊರಗೆ ಬಿಡುವ ಸಂಪ್ರದಾಯವಿದೆ. ಅದರಂತೆ ಇವತ್ತು ಜಲಾಶಯದ ಕ್ರಸ್ಟ್ ಗೇಟನ್ನು ಮೇಲೆತ್ತಿ ನೀರನ್ನು ಹರಿಸಲಾಯಿತು. ಈ ವೇಳೆ ವಿದ್ಯುತ್ ನಿಗಮದ ಸಿಬ್ಬಂದಿಗಳು, ಕುಟುಂಬದವರು ಸಂಭ್ರಮ ವ್ಯಕ್ತಪಡಿಸಿದರು.

ಎಷ್ಟು ಭರ್ತಿಯಾಗಿದೆ ಲಿಂಗನಮಕ್ಕಿ?

ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದೆ. ಕಳೆದ ಒಂದು ವಾರದಿಂದ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಪ್ರಸ್ತುತ ಜಲಾಶಯ ಶೇ.71.43ರಷ್ಟು ಭರ್ತಿಯಾಗಿದೆ. ಇದೆ ರೀತಿ ಮಳೆ ಮುಂದುವರೆದರೆ ಕೆಲವೇ ದಿನದಲ್ಲಿ ಲಿಂಗನಮಕ್ಕಿ ಡ್ಯಾಂ ಭರ್ತಿಯಾಗಲಿದ್ದು, ಕ್ರಸ್ಟ್ ಗೇಟ್‌ಗಳ ಮೂಲಕ ನೀರನ್ನು ಹೊಳೆಗೆ ಹರಿಸಲಾಗುತ್ತದೆ.

linganamakki dam

ಇವತ್ತು ಲಿಂಗನಮಕ್ಕಿ ಜಲಾಶಯಕ್ಕೆ 65,147 ಸಾವಿರ ಕ್ಯೂಸೆಕ್‌ ನೀರು ಒಳ ಹರಿವು ಇದೆ. ಜಲಾಶಯದ ಗರಿಷ್ಠ ಮಟ್ಟ 1819 ಅಡಿ ಇದೆ. ಈಗ 1804.80 ಅಡಿಯಷ್ಟು ನೀರು ಭರ್ತಿಯಾಗಿದೆ. ನೀರಿನ ಮಟ್ಟ 1816 ಅಡಿಗೆ ತಲುಪಿದಾಗ ಜಲಾಶಯದ ಮೂಲಕ ನೀರನ್ನು ಹೊರ ಬಿಡಲಾಗುತ್ತದೆ.

linganamakki dam

ಮುನ್ನೆಚ್ಚರಿಕೆ ನೀಡಿದ ನಿಗಮ

ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾದ ಹಿನ್ನೆಲೆ, ಜಲಾಶಯದ ವತಿಯಿಂದ ಅಲರ್ಟ್ ಘೋಷಣೆ ಮಾಡಲಾಗಿದೆ. ಯಾವುದೆ ಸಂದರ್ಭ ಜಲಾಶಯದಿಂದ ನೀರ ಹೊರ ಬಿಡುವ ಸಾಧ್ಯತೆ ಇದೆ. ಹಾಗಾಗಿ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸಬೇಕು. ಎತ್ತರದ ಪ್ರದೇಶದಕ್ಕೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ ⇓

BREAKING NEWS – ಹೆದ್ದಾರಿಯಲ್ಲಿ ಬಸ್‌ ಮೇಲೆ ಬಿದ್ದ ಮರ, ಚಾಲಕನ ಸಮಯಪ್ರಜ್ಞೆಗೆ ತಪ್ಪಿತು ಅನಾಹುತ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment