ಶಿವಮೊಗ್ಗ : ಭಾರಿ ಬಿಸಿಲಿನಿಂದ ಕಂಗೆಟ್ಟಿದ್ದ ಮಲೆನಾಡಿಗರಿಗೆ ಇವತ್ತು ಮಳೆ ತಂಪು ನೀಡಿದೆ. ಜಿಲ್ಲೆಯ ವಿವಿಧೆಡೆ ಮಳೆಯಾಗಿದ್ದು (Rainfall), ಅಲ್ಲಲ್ಲಿ ಭಾರಿ ಹಾನಿಯು ಸಂಭವಿಸಿದೆ.
ಇವತ್ತು ಎಲ್ಲೆಲ್ಲಿ ಮಳೆಯಾಗಿದೆ?
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯು ಮಳೆಯಾಗಿದೆ (Rainfall). ಹೊಸನಗರ, ಸಾಗರ, ತೀರ್ಥಹಳ್ಳಿ, ಸೊರಬ ಭಾಗದ ವಿವಿಧೆಡೆ ಭಾರಿ ಮಳೆಯಾಗಿದೆ. ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಕಡಿಮೆ ಪ್ರಮಾಣದ ಮಳೆಯಾಗಿದೆ.
ಹೊಸನಗರದ ಮುಂಬಾರು, ಕೋಡೂರು, ಮೇಲಿನಬೆಸಿಗೆ, ತೀರ್ಥಹಳ್ಳಿಯ ದೇಮ್ಲಾಪುರ, ಶಿವಮೊಗ್ಗದ ಅಬ್ಬಲಗೆರೆ, ಆಯನೂರು, ಹಾಡೋನಹಳ್ಳಿ, ಸೊರಬದ ಹೆಚ್ಚೆ, ಗುಡುವಿ, ತಲ್ಲೂರು ಭಾಗದಲ್ಲಿ ಜೋರು ಮಳೆಯಾಗಿದೆ.

ಹೊಸನಗರ ತಾಲೂಕನಲ್ಲಿ ಮಳೆ ಅಬ್ಬರ
ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯಾಗಿದೆ (Rainfall). ತಾಲೂಕಿನ ಕೋಡೂರು ಭಾಗದಲ್ಲಿ ವಿಪರೀತ ಗಾಳಿ ಸಹಿತ ಮಳೆಯಾದ ವರದಿಯಾಗಿದೆ. ಸಮೀಪದ ಮುಂಬಾರು, ಮೇಲಿನಬೆಸಿಗೆಯಲ್ಲೂ ಭಾರಿ ಮಳೆಯಾಗಿದೆ. ಜೋರು ಮಳೆಯಿಂದಾಗಿ ತಾಲೂಕಿನ ವಿವಿಧೆಡೆ ಆಸ್ತಿಪಾಸ್ತಿ ಹಾನಿ ಉಂಟಾಗಿದೆ.

ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆಯ ರೈತ ಶ್ರೀನಿವಾಸ್ ಅವರ ಜಮೀನಿನಲ್ಲಿ ಅಡಿಕೆ ಮತ್ತು ತೆಂಗಿನ ಮರಗಳು ಧರೆಗುರುಳಿವೆ. ಕಾಳು ಮೆಣಸು ಸೇರಿದಂತೆ ವಿವಿಧ ಬೆಳೆ ಹಾನಿಗೀಡಾಗಿವೆ. ಹಲವು ತೋಟ, ಗದ್ದೆಗಳಲ್ಲಿ ಬೆಳೆ ಹಾನಿ ಸಂಭವಿಸಿ, ರೈತರಿಗೆ ದೊಡ್ಡ ನಷ್ಟವಾಗಿದೆ.

ಇದನ್ನೂ ಓದಿ » ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರತಿದಿನ ಎಷ್ಟು ರೈಲು ಸಂಚರಿಸುತ್ತವೆ? ಟೈಮಿಂಗ್ ಏನು?
ಸಾಗರ, ತೀರ್ಥಹಳ್ಳಿಯಲ್ಲು ಜೋರು ಮಳೆ
ಸಾಗರ, ತೀರ್ಥಹಳ್ಳಿ ತಾಲೂಕುಗಳಲ್ಲಿಯು ಇವತ್ತು ಭಾರಿ ಮಳೆಯಾಗಿದೆ. ಜೋರು ಬಿಸಿಲು, ವಿಪರೀತ ಶಕೆಯಿಂದ ಹೈರಾಣಾಗಿದ್ದ ಮಲೆನಾಡಿಗರಿಗೆ ಮಳೆ ತುಸು ತಂಪು ನೀಡಿದೆ. ಆದರೆ ಮಳೆ ಆರಂಭವಾಗುತ್ತಿದ್ದಂತೆ ಹಲವೆಡೆ ವಿದ್ಯುತ್ ವ್ಯತ್ಯಯವಾದ ವರದಿಯಾಗಿದೆ.

ಇದನ್ನೂ ಓದಿ » ಸಿಗಂದೂರು ಸೇತುವೆ ವೈಭವ ಕಣ್ತುಂಬಿಕೊಂಡ ಕನ್ನಡದ ನಟ, ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪ್ರಕಟ
ಶಿವಮೊಗ್ಗ, ಭದ್ರಾವತಿಯಲ್ಲಿ ಮಳೆ ಅಷ್ಟಕ್ಕಷ್ಟೆ
ಶಿವಮೊಗ, ಭದ್ರಾವತಿ ತಾಲೂಕಿನ ವಿವಿಧೆಡೆ ಮಳೆಯಾಗಿದೆ. ಆದರೆ ಮಳೆ ಪ್ರಮಾಣ ಕಡಿಮೆ ಇತ್ತು. ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಇತ್ತು. ಭಾರಿ ಮಳೆಯಾಗುವ ಸಾದ್ಯತೆ ಇತ್ತು. ಆದರೆ ಅಲ್ಲಲ್ಲಿ ಸೋನೆ ಸುರಿದಿದೆ. ಸೊರಬ ತಾಲೂಕಿನ ಬಹುಭಾಗದಲ್ಲಿ ಮಳೆಯಾಗಿದೆ. ಶಿಕಾರಿಪುರ ತಾಲೂಕಿನಲ್ಲಿಯು ಅಲ್ಲಲ್ಲಿ ಮಳೆಯಾಗಿದ್ದು, ವಾತಾವರಣ ತುಸು ತಂಪಾಗಿದೆ.

ಇದನ್ನೂ ಓದಿ » ಭದ್ರಾವತಿಯಲ್ಲಿ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿದ ಲೇಡಿ ಇನ್ಸ್ಪೆಕ್ಟರ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200