ಶಿವಮೊಗ್ಗದಲ್ಲಿ ಮಳೆ ಕಣ್ಮರೆ, ಬಿಸಿಲು ಪ್ರತ್ಯಕ್ಷ, ಗಾಳಿ ಅಬ್ಬರಕ್ಕೆ ಜನರಲ್ಲಿ ಆತಂಕ, ಎಲ್ಲೆಲ್ಲಿ ಹೇಗಿದೆ ಸ್ಥಿತಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆ ಕಾಡಿಮೆಯಾಗಿದೆ. ಅಲ್ಲಲ್ಲಿ ಸಾಧಾರಣ ವ್ಯಾಪಕ ಮಳೆಯಾಗುತ್ತಿದೆ. ಆದರೆ ಮೇಲ್ಮೈ ಗಾಳಿ (Wind) ರಭಸವಾಗಿದ್ದು, ಮರ, ರೆಂಬೆ ಕೊಂಬೆಗಳು ಧರೆಗುರುಳುವ ಭೀತಿ ಎದುರಾಗಿದೆ.

ಮಳೆ ವಿವರ: ಇಲ್ಲಿದೆ ಹೈಲೈಟ್ಸ್‌

ಸಾಧಾರಣ ವ್ಯಾಪಕ ಮಳೆ

ಕಳೆದ 24 ಗಂಟೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ವ್ಯಾಪಕ ಮಳೆಯಾಗಿದೆ. ಇವತ್ತು ಚದುರಿದಂತೆ ಮಳೆಯಾಗುವ ಸಂಭವವಿದ್ದು, ಮೇಲ್ಮೈ ಗಾಳಿ ಇರಲಿದೆ.

Rain-in-Shimoga-city-night.

ಎಲ್ಲೆಲ್ಲಿ ಎಷ್ಟಾಗಿದೆ ಮಳೆ?

ಜುಲೈ 27ರ ಬೆಳಗ್ಗೆ 8.30ರಿಂದ ಜ.28ರ ಬೆಳಗ್ಗೆ 8.30ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಸರಾಸರಿ  13 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ  3 ಮಿ.ಮೀ, ಭದ್ರಾವತಿಯಲ್ಲಿ 2.6 ಮಿ.ಮೀ, ಸಾಗರ 16 ಮಿ.ಮೀ, ಸೊರಬ 11.6 ಮಿ.ಮೀ, ಶಿಕಾರಿಪುರ 5.1 ಮಿ.ಮೀ, ತೀರ್ಥಹಳ್ಳಿ 23.7 ಮಿ.ಮೀ, ಹೊಸನಗರ 15.9 ಮಿ.ಮೀ ಮಳೆಯಾಗಿದೆ.

ಅತಿ ಹೆಚ್ಚು ಮಳೆಯಾದ ಊರುಗಳು

RAIN-REPORT-LOGOಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ 92 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 70 ಮಿ.ಮೀ, ಮಾನಿಯಲ್ಲಿ 62 ಮಿ.ಮೀ, ಯಡೂರು 62 ಮಿ.ಮೀ, ಯಡೂರಿನಲ್ಲಿ 59 ಮಿ.ಮೀ, ಸಾವೇಹಕ್ಲುವಿನಲ್ಲಿ 55 ಮಿ.ಮೀ, ಹುಲಿಕಲ್‌ನಲ್ಲಿ 48 ಮಿ.ಮೀ, ಸುಳಗೋಡಿನಲ್ಲಿ 46.5 ಮಿ.ಮೀ ಮಳೆಯಾಗಿದೆ. ತೀರ್ಥಹಳ್ಳಿಯ ಮೇಗರವಳ್ಳಿಯಲ್ಲಿ 41.5 ಮಿ.ಮೀ, ಸಾಗರದ ಹಿರೆನೆಲ್ಲೂರು 41.5 ಮಿ.ಮೀ, ತೀರ್ಥಹಳ್ಳಿಯ ಹಾದಿನಲ್ಲಿನಲ್ಲಿ 36 ಮಿ.ಮೀ ಮಳೆಯಾಗಿದೆ. ಇವು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾದ ಪ್ರದೇಶಗಳು.

ಶೇ.7ರಷ್ಟು ಮಳೆ ಕೊರತೆ

ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ 1ರಿಂದ 28ರವರೆಗೆ ವಾಡಿಕೆಯಂತೆ 694 ಮಿ.ಮೀ ಮಳೆಯಾಗಬೇಕಿತ್ತು. ಆದರೆ ಈ ಬಾರಿ ಶೇ.7ರಷ್ಟು ಮಳೆ ಕಡಿಮೆಯಾಗಿದೆ. 647 ಮಿ.ಮೀ ಮಳೆಯಾಗಿದೆ.

June-2025-Report-Shivamogga-Live-New-New.

ಬಿಸಿಲು, ಗಾಳಿ ಅಬ್ಬರ

ಶಿವಮೊಗ್ಗದಲ್ಲಿ ಜಿಲ್ಲೆಯಲ್ಲಿ ಮಳೆ ಮರೆಯಾಗಿದೆ. ಮೋಡ ಸರಿದಿದೆ. ಬಿಸಿಲು ಆವರಿಸಿದೆ. ಮಳೆಯೇ ಆಗಿಲ್ಲವೇನೊ ಎಂಬಂತೆ ವಾತಾವರಣ ಬದಲಾಗಿದೆ. ಇನ್ನು, ಗಾಳಿ ಜೋರಾಗಿ ಬೀಸುತ್ತಿದೆ. ಗಾಳಿ ರಭಸಕ್ಕೆ ಅಲ್ಲಲ್ಲಿ ರೆಂಬೆ, ಕೊಂಬೆಗಳು ರಸ್ತೆಗೆ ಬೀಳುತ್ತಿದ್ದು, ಜನರಲ್ಲಿ ಆತಂಕದಲ್ಲಿ ಓಡಾಡುವಂತಾಗಿದೆ.

Wind in Shimoga District

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 28, 2025

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

Leave a Comment