ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಅಕ್ಟೋಬರ್ 2021
ಸಿನಿಮಾ ಚಿತ್ರೀಕರಣಕ್ಕೆ ಬಂದಾಗ ತೀರ್ಥಹಳ್ಳಿಯಲ್ಲಿ ನಟ ಪುನೀತ್ ರಾಜ್ ಕುಮಾರ್ ಮೇಲೆ ಜೇನು ದಾಳಿಯಾಗಿತ್ತು. ಆದರೂ ಚಿತ್ರೀಕರಣ ಸ್ಥಗಿತಗೊಳಿಸಲು ಪುನೀತ್ ರಾಜ್ ಕುಮಾರ್ ಅವರು ಬಿಡಲಿಲ್ಲ ಎಂದು ನಿರ್ಮಾಪಕ ಜಯಣ್ಣ ಸ್ಮರಿಸಿಕೊಂಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಜಯಣ್ಣ ಅವರು ಪರಮಾತ್ಮ ಸಿನಿಮಾದ ಚಿತ್ರೀಕರಣದ ವೇಳೆ ನಡೆದ ಘಟನೆಯನ್ನು ಸ್ಮರಿಸಿಕೊಂಡಿದ್ದಾರೆ. ಜೇನು ದಾಳಿಗೆ ತುತ್ತಾಗಿ ಕಣ್ಣಿನ ಭಾಗದಲ್ಲಿ ಊದಿಕೊಂಡಿದ್ದರೂ ಅಪ್ಪು ಅಭಿನಯಿಸಿದ್ದರು ಎಂದು ವಿವರಿಸಿದ್ದಾರೆ.
ಸೈಕಲ್ ರೈಡ್, ಜೇನು ದಾಳಿ
‘ತೀರ್ಥಹಳ್ಳಿಯಲ್ಲಿ ಚಿತ್ರೀಕರಣ ನಡೆಯುತಿತ್ತು. ಒಂದೆಡೆ ಮೂರು ರೂಮುಗಳನ್ನು ಮಾಡಿದ್ದೆವು. ಪುನೀತ್ ರಾಜ್ ಕುಮಾರ್ ಅವರಿಗೆ ಒಂದು ರೂಮ್ ನೀಡಲಾಗಿತ್ತು. ಬೆಳಗ್ಗೆ ಬೇಗನೆ ಎದ್ದು ಪುನೀತ್ ರಾಜ್ ಕುಮಾರ್ ಅವರು ಸೈಕಲ್ ತೆಗೆದುಕೊಂಡು ತೀರ್ಥಹಳ್ಳಿಯಲ್ಲಿ ಒಂದು ಸುತ್ತು ಹಾಕಿ ಬರಲು ಹೋಗಿದ್ದರು’
‘ಆಗ ಪುನೀತ್ ಮೇಲೆ ಜೇನುಗಳು ದಾಳಿ ಮಾಡಿದ್ದವು. ಅವರ ಬೆನ್ನು, ಕಣ್ಣು ಸೇರಿದಂತೆ ವಿವಿಧೆಡೆ ಜೇನುಗಳು ಹೊಡೆದಿದ್ದವು. ರೂಮಿಗೆ ಬಂದಾಗ ಕಣ್ಣಿನ ಭಾಗದಲ್ಲಿ ಊದಿಕೊಂಡಿತ್ತು. ಕೂಡಲೆ ವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಿದೆವು. ಇಂತಹ ಸಂದರ್ಭದಲ್ಲಿ ಚಿತ್ರೀಕರಣ ಬೇಡ ನಿರ್ಧಾರ ಮಾಡಿದ್ದೆವು. ಆದರೆ ಪುನೀತ್ ಈ ನಿರ್ಧಾರವನ್ನು ಒಪ್ಪಲಿಲ್ಲಿ. ಯಾವುದೆ ಕಾರಣಕ್ಕೂ ಚಿತ್ರೀಕರಣ ನಿಲ್ಲಿಸಬಾರದು ಎಂದು ಪಟ್ಟು ಹಿಡಿದರು.’
‘ಪರಮಾತ್ಮ ಸಿನಿಮಾದಲ್ಲಿ ರೆಂಗಾಯಣ ರಘು ಮತ್ತು ಪುನೀತ್ ಅವರು ದೋಣಿಯಲ್ಲಿ ಹೋಗುವ ಸೀನ್ ಇದೆ. ಅದರಲ್ಲಿ ಪುನೀತ್ ಅವರ ಕಣ್ಣುಗಳನ್ನು ಊದಿಕೊಂಡಿರುವುದನ್ನು ಗಮನಿಸಬಹುದು. ಅಷ್ಟು ನೋವಿದ್ದರೂ ಪುನೀತ್ ಅಭಿನಯಿಸಿದ್ದರು.’ ಎಂದು ನಿರ್ಮಾಪಕ ಜಯಣ್ಣ ಸ್ಮರಿಸಿಕೊಂಡಿದ್ದಾರೆ.