ಹೃದಯಾಘಾತ, ಹೊಸನಗರ ತಾಲೂಕು ಬಿಜೆಪಿ ಅ‍ಧ್ಯಕ್ಷ ನಿಧನ, ಪ್ರಮುಖರ ಸಂತಾಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಸನಗರ: ತಾಲೂಕು ಬಿಜೆಪಿ ಅಧ್ಯಕ್ಷ ಸುಬ್ರಹ್ಮಣ್ಯ ಮತ್ತಿಮನೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರ ಅಗಲಿಕೆಯ ವಿಚಾರ ತಿಳಿದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಬಿಜೆಪಿ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

ಇಂದು ಮಧ್ಯಾಹ್ನ ಸುಬ್ರಹ್ಮಣ್ಯ ಅವರು ತಮ್ಮ ಮನೆಯಲ್ಲಿ ಅಸ್ವಸ್ಥರಾಗಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಸುಬ್ರಹ್ಮಣ್ಯ ಮತ್ತಿಮನೆ ಅವರು ಈ ಹಿಂದೆ ತಾಲೂಕು ಪಂಚಾಯಿತಿ ಸದಸ್ಯರಾಗಿಯು ಸೇವೆ ಸಲ್ಲಿಸಿದ್ದರು.

ಬಿಜೆಪಿ ಪ್ರಮುಖರ ಸಂತಾಪ

ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಮತ್ತಿಮನೆ ನಿಧನಕ್ಕೆ ಸಂಸದ ರಾಘವೇಂದ್ರ ಸೇರಿದಂತೆ ಬಿಜೆಪಿ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ » ಟ್ರಾಫಿಕ್‌ ಫೈನ್‌ ಬಾಕಿ ಇದ್ಯಾ? ಮತ್ತೆ ಆಫರ್‌ ನೀಡಿದ ಸರ್ಕಾರ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment