SHIVAMOGGA LIVE NEWS | 12 MAY 2024
RAINFALL NEWS : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಆರಂಭವಾಗಿದೆ. ಹಾಗಾಗಿ ಉಷ್ಣವಾಯು ತಗ್ಗಿದ್ದು, ತಾಪಮಾನ ಇಳಿಕೆಯಾಗುತ್ತಿದೆ. ಇನ್ನೊಂದೆಡೆ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು, ಕರಾವಳಿ ಕರ್ನಾಟಕದಲ್ಲಿ ಮೇ 15ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಗುಡುಗು, ಮಿಂಚಿನ ಎಚ್ಚರಿಕೆಯನ್ನು ನೀಡಿದೆ.
ಉಷ್ಣವಾಯು ತಗ್ಗಲಿದೆ, ರಾಜ್ಯ ಕೂಲ್ ಆಗಲಿದೆ
ಭಾನುವಾರ ಮತ್ತು ಸೋಮವಾರ ರಾಜ್ಯದ ವಿವಿಧೆಡೆ ಮಳೆ ಅಬ್ಬರಿಸಲಿದೆ. ಸೈಕ್ಲೋನ್ ಪರಿಣಾಮ ಕರ್ನಾಟಕದಲ್ಲಿ ಜೋರು ಮಳೆಯಾಗಲಿದೆ. ಕೇರಳದಲ್ಲಿ ಮೇ 15 ಮತ್ತು 17ರಂದು ಜೋರು ಮಳೆಯಾಗಲಿದೆ. ಇದರಿಂದ ರಾಜ್ಯ ಸೇರಿದಂತೆ ದಕ್ಷಿಣ ಭಾರತದಲ್ಲಿ ಉಷ್ಣವಾಯು ತಗ್ಗಲಿದೆ ಎಂದು ಸ್ಕೈ ಮೇಟ್ ವರದಿ ಮಾಡಿದೆ.
ದಕ್ಷಿಣ ಭಾರತದಲ್ಲಿ ಯಲ್ಲೋ ಅಲರ್ಟ್
ಮೇ 15ರವರೆಗೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನೊಂದೆಡೆ ಮಂಗಳವಾರದವರೆಗೆ ಕರಾವಳಿ ಕರ್ನಾಟಕ ಹೊರತು ದಕ್ಷಿಣ ಭಾರತದಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಮಳೆ ಸುರಿಯುವ ಸಾಧ್ಯತೆ, ಕೂಲ್ ಕೂಲ್ ಆಗಲಿದೆ ಜಿಲ್ಲೆ, ಎಷ್ಟಿದೆ ತಾಪಮಾನ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200