Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ಸಂಭ್ರಮ, ಜಿಲ್ಲೆಯಾದ್ಯಂತ ಯಾರೆಲ್ಲ ಧ್ವಜಾರೋಹಣ ಮಾಡಿದರು? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ಸಂಭ್ರಮ, ಜಿಲ್ಲೆಯಾದ್ಯಂತ ಯಾರೆಲ್ಲ ಧ್ವಜಾರೋಹಣ ಮಾಡಿದರು? ಇಲ್ಲಿದೆ ಡಿಟೇಲ್ಸ್‌

15/08/2024 8:06 PM
ನಿತಿನ್‌ ಕೈದೊಟ್ಲು

SHIMOGA, 15 AUGUST 2024 : 78ನೇ ಸ್ವಾತಂತ್ರ್ಯ ದಿನಾಚರಣೆ (Independence Day) ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಧ್ವಜಾರೋಹಣ ನೆರವೇರಿಸಲಾಯಿತು. ಎಲ್ಲೆಲ್ಲಿ ಯಾರು ಧ್ವಜಾರೋಹಣ ಮಾಡಿದರು? ಯಾರೆಲ್ಲ ಏನೆಲ್ಲ ಹೇಳಿದರು? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌.

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ

#eaeff0 SHIMOGA-NEWS-FATAFATಶಿವಮೊಗ್ಗದ ಡಿಎಆರ್‌ ಮೈದಾನದಲ್ಲಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಿದರು. ಇದೇ ವೇಳೆ ಧ್ವಜ ವಂದನೆ, ಪಥ ಸಂಚಲನ ನಡೆಯಿತು. ವಿವಿಧ ಶಾಲೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಳಿಕ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದ ಜನರನ್ನು ಉದ್ದೇಶಿಸಿ ಮಾತನಾಡಿದರು.

Shimoga Independence Day

ಆಂತರಿಕ ಭಾವನೆಗಳು ಶುದ್ಧವಾಗಿರಬೇಕು. ಇದರಿಂದ ಹಿರಿಯರು ತಂದು ಕೊಟ್ಟ ಸ್ವಾತಂತ್ರ್ಯಕ್ಕೆ ಪರಿಪೂರ್ಣ ಅರ್ಥ ಲಭಿಸಲಿದೆ. ಇಂದಿನ ಸ್ವಾತಂತ್ರ್ಯ ಸಂಭ್ರಮಕ್ಕೆ ಮಹಾತ್ಮ ಗಾಂಧೀಜಿ ಸೇರಿ ಅನೇಕ ಹೋರಾಟಗಾರರ ಪರಿಶ್ರಮವಿದೆ. ಇದು ವ್ಯರ್ಥವಾಗಕೂಡದು.ಮಧು ಬಂಗಾರಪ್ಪ, ಸಚಿವ

ಭದ್ರಾವತಿಯಲ್ಲಿ ಧ್ವಜಾರೋಹಣ

#eaeff0 BHADRAVATHI-NEWS-FATAFAT.ಭದ್ರಾವತಿಯ ಹಳೆ ನಗರದ ಕನಕ ಮಂಟಪ ಮೈದಾನದಲ್ಲಿ ತಹಶೀಲ್ದಾರ್‌ ನಾಗರಾಜ್‌ ಧ್ವಜಾರೋಹಣ ಮಾಡಿದರು. ಶಾಸಕ ಸಂಗಮೇಶ್ವರ್‌ ಮತ್ತು ತಹಶೀಲ್ದಾರ್‌ ನಾಗರಾಜ್‌ ಅವರು ಧ್ವಜ ವಂದನೆ ಸ್ವೀಕರಿಸಿದರು.

Bhadravathi Independence Day

ಮಕ್ಕಳು ಡಾಕ್ಟರ್‌, ಇಂಜಿನಿಯರ್‌ ಆಗಲಿ ಎಂದು ಪೋಷಕರು ಅಪೇಕ್ಷಿಸುವುದರ ಜೊತೆಗೆ ಅವರಲ್ಲಿ ದೇಶ ಪ್ರೇಮವನ್ನು ಬೆಳೆಸಬೇಕು.ಬಿ.ಕೆ.ಸಂಗಮೇಶ್ವರ, ಶಾಸಕ

ತೀರ್ಥಹಳ್ಳಿಯಲ್ಲಿ ಧ್ವಜಾರೋಹಣ

#eaeff0 THIRTHAHALLI-NEWS-FATAFATಯು.ಆರ್.ಅನಂತಮೂರ್ತಿ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ತಹಶೀಲ್ದಾರ್‌ ಜಕ್ಕಣ್ಣಗೌಡರ್‌ ಧ್ವಜಾರೋಹಣ ನೆರವೇರಿಸಿದರು. ವಿವಿಧ ಶಾಲೆ, ಕಾಲೇಜು ವಿದ್ಯಾರ್ಥಿಗಳು, ಪೊಲೀಸ್‌ ಸಿಬ್ಬಂದಿಯಿಂದ ಪಥ ಸಂಚಲನ ನಡೆಯಿತು. ಶಾಸಕ ಆರಗ ಜ್ಞಾನೇಂದ್ರ, ಡಿವೈಎಸ್‌ಪಿ ಗಜಾನನ ವಾಮನ ಸುತಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Thirthahalli Independence Day

ಶಿಕಾರಿಪುರದಲ್ಲಿ ಧ್ವಜಾರೋಹಣ

#eaeff0 SHIKARIPURA-NEWS-FATAFATಶಿಕಾರಿಪುರದ ತಾಲೂಕು ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ತಹಶೀಲ್ದಾರ್‌ ಮಲ್ಲೇಶಪ್ಪ ಪೂಜಾರ್‌ ಧ್ವಜಾರೋಹಣ ನೆರವೇರಿಸಿದರು. ಶಾಸಕ ಬಿ.ವೈ.ವಿಜಯೇಂದ್ರ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಪಥ ಸಂಚಲನ ನಡೆಯಿತು.

ದೇಶದ ಮೊದಲ ಸ್ವತಂತ್ರ ಗ್ರಾಮ ಈಸೂರು. ಈ ಗ್ರಾಮದ ಹೋರಾಟಗಾರರ ತ್ಯಾಗ, ಹೋರಾಟ ಇತಿಹಾಸದ ಪುಟದಲ್ಲಿ ದಾಖಲಾಗಿದೆ. ಇದಕ್ಕೆ ನಾವು ಹೆಮ್ಮೆ ಪಡಬೇಕು.ಬಿ.ವೈ.ವಿಜಯೇಂದ್ರ, ಶಾಸಕ

ಹೊಸನಗರದಲ್ಲಿ ಧ್ವಜಾರೋಹಣ

#eaeff0 HOSANAGARA-NEWS-FATAFATಹೊಸನಗರದ ನೆಹರು ಕ್ರೀಡಾಂಗಣದಲ್ಲಿ ತಹಶೀಲ್ದಾರ್‌ ರಶ್ಮಿ ಹಾಲೇಶ್‌ ಅವರು ಧ್ವಜಾರೋಹಣ ಮಾಡಿದರು. ಪೊಲೀಸರು, ಗೃಹ ರಕ್ಷಕ ದಳ, ಶಾಲೆ, ಕಾಲೇಜು ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿದರು. ಇದೆ ವೇಳೆ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು, ಮೆಸ್ಕಾಂ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ಸಾಗರದಲ್ಲಿ ಧ್ವಜಾರೋಹಣ

#eaeff0 SAGARA-NEWS-FATAFATಸಾಗರದ ನೆಹರು ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಉಪ ವಿಭಾಗದ ಸಹಾಯಕ ಆಯುಕ್ತ ಆರ್.ಯತೀಶ್‌ ಅವರು ಧ್ವಜಾರೋಹಣ ನೆರವೇರಿಸಿದರು. ಪೊಲೀಸ್‌, ಗೃಹ ರಕ್ಷಕ ದಳ, ವಿವಿಧ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Sagara Independence Day

ಪಂಚ ಗ್ಯಾರಂಟಿಗಳನ್ನು ಜನರಿಗೆ ತಲುಪಿಸುವ ಮೂಲಕ ಜನರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲಾಗುತ್ತಿದೆ. ಕ್ಷೇತ್ರದ ಅಭಿವೃದ್ದಿಗೆ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ.ಬೇಳೂರು ಗೋಪಾಲಕೃಷ್ಣ, ಶಾಸಕ

ಸೊರಬದಲ್ಲಿ ಧ್ವಜಾರೋಹಣ

#eaeff0 SORABA-NEWS-FATAFATಸೊರಬದ ರಂಗಮಂದಿರ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ತಹಶೀಲ್ದಾರ್‌ ಮಂಜುಳಾ ಧ್ವಜಾರೋಹಣ ಮಾಡಿದರು. ಪೊಲೀಸರು, ಗೃಹ ರಕ್ಷಕ ದಳ, ಶಾಲೆ ಮಕ್ಕಳಿಂದ ಪಥ ಸಂಚಲನ ನಡೆಯಿತು.

ಇದನ್ನೂ ಓದಿ ⇒ ಶಿವಮೊಗ್ಗ ಸಿಟಿಯ 15 ಕಿ.ಮೀ ವ್ಯಾಪ್ತಿಯಲ್ಲಿವೆ 10 ಪ್ರಮುಖ ಪಿಕ್ನಿಕ್‌ ತಾಣಗಳು, ಇಲ್ಲಿದೆ ಲಿಸ್ಟ್‌

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Shimoga-City-MRS-Drone-Shot ಶಿವಮೊಗ್ಗ ಸಿಟಿಯ 15 ಕಿ.ಮೀ ವ್ಯಾಪ್ತಿಯಲ್ಲಿವೆ 10 ಪ್ರಮುಖ ಪಿಕ್ನಿಕ್‌ ತಾಣಗಳು, ಇಲ್ಲಿದೆ ಲಿಸ್ಟ್‌
Next Article Police-Jeep-at-Shimoga-General-Image ಶಿವಮೊಗ್ಗದಲ್ಲಿ ಶೂ ಹೊಲಿಸಿಕೊಂಡು ಕಾರು ಬಳಿ ಬಂದ ಸರ್ಕಾರಿ ನೌಕರನಿಗೆ ಕಾದಿತ್ತು ಆಘಾತ

ಇದನ್ನೂ ಓದಿ

Lokayukta-raid-at-Shimoga-hosanagara-and-shikaripura.
SHIVAMOGGA CITY

BREAKING NEWS – ಶಿವಮೊಗ್ಗ ಜಿಲ್ಲೆಯ ಮೂರು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/06/2025
Shimoga-News-update
FATAFAT NEWS

ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Agriculture-News-Farmer
FATAFAT NEWS

ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದ ತೋಟಗಾರಿಕೆ ಇಲಾಖೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
BJP-City-president-Mohan-Reddy-press-meet.
SHIVAMOGGA CITY

ತುರ್ತು ಪರಿಸ್ಥಿತಿಗೆ 50 ವರ್ಷ, ಶಿವಮೊಗ್ಗದಲ್ಲಿ ಕರಾಳ ದಿನ, ಯಾವಾಗ? ಏನೆಲ್ಲ ಕಾರ್ಯಕ್ರಮ ಇರುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Traffic-Police-checks-School-vans-in-Shimoga-city
SHIVAMOGGA CITY

ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ, ನಾಲ್ಕು ಡ್ರಂಕ್‌ ಅಂಡ್‌ ಡ್ರೈವ್‌ ಕೇಸ್‌ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?