ಶಿವಮೊಗ್ಗ ಜಿಲ್ಲೆಯ 71 ಸಾವಿರ ರೈತರ ಖಾತೆಗೆ ವಿಮೆ ಪರಿಹಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 DECEMBER 2024

ಶಿವಮೊಗ್ಗ : ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಎಂದ ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ ಜಿಲ್ಲೆಯ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

Agriculture-News-Farmer

ತಾಲೂಕುವಾರು ವಿಮೆ ಹಣದ ವಿವರ

ಭದ್ರಾವತಿಯಲ್ಲಿ 3110 ರೈತರಿಗೆ ವಿಮೆ ಮೊತ್ತ ಬಿಡುಗಡೆಯಾಗಿದೆ. ಈ ಪೈಕಿ 3108 ಅಡಿಕೆ ಬೆಳೆಗಾರರು, 2 ಮೆಣಸು ಬೆಳೆಗಾರರಿದ್ದಾರೆ.

ಹೊಸನಗರದಲ್ಲಿ ಒಟ್ಟು 7305 ರೈತರಿಗೆ ವಿಮೆ ಹಣ ಬರಲಿದೆ. ಈ ಪೈಕಿ 6878 ಅಡಿಕೆ ಬೆಳೆಗಾರರು, 397 ಮೆಣಸು, 30 ಶುಂಠಿ ಬೆಳೆಗಾರಿದ್ದಾರೆ.

ಸಾಗರದಲ್ಲಿ 7662 ರೈತರಿಗೆ ವಿಮೆ ಮೊತ್ತ ದೊರೆಯಲಿದೆ. ಈ ಪೈಕಿ 7524 ಅಡಿಕೆ ಬೆಳೆಗಾರರು, 104 ಮೆಣಸು, 34 ಶುಂಠಿ ಬೆಳೆಗಾರರಿದ್ದಾರೆ.

BY-Raghavendra-Press-meet-in-Shimoga-city

ಶಿಕಾರಿಪುರದಲ್ಲಿ 15,386 ಬೆಳೆಗಾರರಿಗೆ ವಿಮೆ ಹಣ ಬಿಡುಗಡೆಯಾಗಲಿದೆ. 15,063 ಅಡಿಕೆ ಬೆಳೆಗಾರರು, 5 ಮೆಣಸು, 106  ಶುಂಠಿ, 212 ಮಾವು ಬೆಳೆಗಾರರು ಇದ್ದಾರೆ.

ಶಿವಮೊಗ್ಗದಲ್ಲಿ 7398 ಬೆಳೆಗಾರರಿಗೆ ವಿಮೆ ಹಣ ಸಿಗಲಿದೆ. ಈ ಪೈಕಿ 7292 ಅಡಿಕೆ ಬೆಳೆಗಾರರು, 7 ಮೆಣಸು, 75 ಶುಂಠಿ, 24 ಮಾವು ಬೆಳೆಗಾರರಿದ್ದಾರೆ.

ಸೊರಬದಲ್ಲಿ 18,627 ರೈತರಿಗೆ ವಿಮೆ ಹಣ ಜಮೆ ಆಗಲಿದೆ. 17,807 ಅಡಿಕೆ ಬೆಳೆಗಾರರು, 23 ಮೆಣಸು, 139 ಶುಂಠಿ ಬೆಳೆಗಾರರು, 658 ಮಾವು ಬೆಳೆಗಾರರಿಗೆ ವಿಮೆ ಹಣ ಬಿಡುಗಡೆಯಾಗಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ 11,689 ರೈತರಿಗೆ ವಿಮೆ ಪರಿಹಾರ ದೊರೆಯಲಿದೆ. ಈ ಪೈಕಿ 11,279 ಅಡಿಕೆ ಬೆಳೆಗಾರರು, 410 ಮೆಣಸು ಬೆಳೆಗಾರರಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಿಂದ ಚನ್ನಗಿರಿಗೆ ಬಸ್ಸಿನಲ್ಲಿ ತೆರಳುತ್ತಿದ್ದ ಮಹಿಳೆಗೆ ಕಾದಿತ್ತು ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 1, 2024

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment