| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಮೇ 2020
ಸರಿಯಾಗಿ ೭೦ ದಿನದ ಬಳಿಕ ಶಿವಮೊಗ್ಗದಲ್ಲಿ ರೈಲು ಸಂಚಾರ ಆರಂಭವಾಗುತ್ತಿದೆ. ಕೊರೊನಾ ಹಿನ್ನಲೆಯಲ್ಲಿ ನಿಬಂಧನೆಗೆ ಒಳಪಡಿಸಿ ಜನ ಶತಾಬ್ಧಿ ರೈಲಿನ ಸಂಚಾರ ಮಾತ್ರ ಆರಂಭಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಪರಿಸ್ಥಿತಿ ಸುಧಾರಿಸಿದ ಬಳಿಕ ಹಂತ ಹಂತವಾಗಿ ಉಳಿದ ರೈಲುಗಳ ಸಂಚಾರ ಆರಂಭವಾಗಲಿವೆ.
ಜೂನ್ ೧ರಂದು ಸಂಜೆ ಯಶವಂತಪುರದಿಂದ(ರೈಲು ಗಾಡಿ ಸಂಖ್ಯೆ 02089) ಹೊರಟು ರಾತ್ರಿ ಶಿವಮೊಗ್ಗ ತಲುಪುವ ಜನ ಶತಾಬ್ಧಿಯು ಶಿವಮೊಗ್ಗದಿಂದ (ರೈಲು ಗಾಡಿ ಸಂಖ್ಯೆ 02090) ಜೂನ್ 2ರಂದು ಮುಂಜಾನೆ 5.30ಕ್ಕೆ ಯಶವಂತಪುರಕ್ಕೆ ಹೊರಡಲಿದೆ.
ಸಿಕ್ಕ ಸಿಕ್ಕಲೆಲ್ಲ ಇಲ್ಲ ನಿಲುಗಡೆ
ರೈಲಿನ ಸಂಚಾರ ಆರಂಭದಲ್ಲಿ ಇದ್ದಂತೆ ಭದ್ರಾವತಿ, ಕಡೂರು, ತುಮಕೂರುಗಳಲ್ಲಿ ಮಾತ್ರ ನಿಲುಗಡೆ ಇರಲಿದೆ. ಸದ್ಯಕ್ಕೆ ಕೇವಲ ಆನ್ಲೈನ್ ಬುಕಿಂಗ್ ಮಾತ್ರ ಅವಕಾಶ ನೀಡಲಾಗಿದೆ. ಹೀಗಾಗಿ ರೈಲು ನಿಲ್ದಾಣಗಳಲ್ಲಿ ಟಿಕೆಟ್ ಬುಕಿಂಗ್ ಇರುವುದಿಲ್ಲ.

ರೈಲು ಮುಂಜಾನೆ 5.30ಕ್ಕೆ ಹೊರಟರೂ ಪ್ರಯಾಣಿಕರು ನಿಲ್ದಾಣಕ್ಕೆ 90 ನಿಮಿಷ ಮೊದಲೇ ಆಗಮಿಸಬೇಕು. ಪ್ರತಿಯೊಬ್ಬ ಪ್ರಯಾಣಿಕರ ಥರ್ಮಲ್ ಟೆಸ್ಟ್ ಮಾಡಿ, ಸ್ಯಾನಿಟೈಸರ್ನಿಂದ ಕೈಗಳನ್ನು ಸ್ವಚ್ಚಗೊಳಿಸಿ ಒಳಬಿಡಲಾಗುತ್ತದೆ. ಅದಕ್ಕೆ ಸಮಯ ಹಿಡಿಯುವುದರಿಂದ ಪ್ರಯಾಣಿಕರು ಏಕಾಏಕಿ ಒಳನುಗ್ಗಿ ಸಾಮಾಜಿಕ ಅಂತರ ಉಲ್ಲಂಘನೆಯಾಗುವುದು, ಕೈ ಸ್ವಚ್ಚತೆಯಾಗದಿರುವುದನ್ನು ತಪ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಅದಕ್ಕಾಗಿ ನಿಲ್ದಾಣದಲ್ಲಿ ಮುಂಜಾನೆ 4 ಗಂಟೆಯಿಂದಲೆ ಪ್ರಯಾಣಿಕರನ್ನು ಒಳಬಿಡುವ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ತಿಂಡಿ, ಟೀ, ಕಾಫಿ, ನೀರು ಸಿಗಲ್ಲ
ರೈಲಿನಲ್ಲಿ ಉಪಹಾರ, ಟೀ-ಕಾಫಿಯ ಪ್ಯಾಂಟ್ರಿ ಸೇವೆ ಇರುವುದಿಲ್ಲ. ಕುಡಿಯುವ ನೀರು ಮಾರಾಟ ಸಹ ಇರುವುದಿಲ್ಲ. ಹೀಗಾಗಿ ಪ್ರಯಾಣಿಕರೇ ಅದೆಲ್ಲವನ್ನು ಮಾಡಿಕೊಳ್ಳಬೇಕಾಗುತ್ತದೆ. ಮಾಸ್ಕ್ ಧರಿಸುವುದು ಕೂಡ ಕಡ್ಡಾಯವಾಗಿದೆ. ಪ್ರಯಾಣಿಕರಿಗೆ ಮತ್ತೊಬ್ಬರ ಸಂಪರ್ಕವನ್ನು ಆದಷ್ಟು ತಪ್ಪಿಸುವ ಉದ್ದೇಶದಿಂದ ಇಲಾಖೆ ಈ ಕ್ರಮ ಕೈಗೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()