ಶಿವಮೊಗ್ಗದಿಂದ ಜನ ಶತಾಬ್ದಿ ರೈಲು ಶುರು, ಯಾವತ್ತಿಂದ? ಟೆಕೆಟ್ ಎಲ್ಲಿ ಸಿಗುತ್ತೆ? ಸ್ಟಾಪ್ ಎಲ್ಲೆಲ್ಲಿ? ಏನೆಲ್ಲ ನಿಯಮ ಪಾಲಿಸಬೇಕು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಮೇ 2020

ಸರಿಯಾಗಿ ೭೦ ದಿನದ ಬಳಿಕ ಶಿವಮೊಗ್ಗದಲ್ಲಿ ರೈಲು ಸಂಚಾರ ಆರಂಭವಾಗುತ್ತಿದೆ. ಕೊರೊನಾ ಹಿನ್ನಲೆಯಲ್ಲಿ ನಿಬಂಧನೆಗೆ ಒಳಪಡಿಸಿ ಜನ ಶತಾಬ್ಧಿ ರೈಲಿನ ಸಂಚಾರ ಮಾತ್ರ ಆರಂಭಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಪರಿಸ್ಥಿತಿ ಸುಧಾರಿಸಿದ ಬಳಿಕ ಹಂತ ಹಂತವಾಗಿ ಉಳಿದ ರೈಲುಗಳ ಸಂಚಾರ ಆರಂಭವಾಗಲಿವೆ.

ಜೂನ್ ೧ರಂದು ಸಂಜೆ ಯಶವಂತಪುರದಿಂದ(ರೈಲು ಗಾಡಿ ಸಂಖ್ಯೆ 02089) ಹೊರಟು ರಾತ್ರಿ ಶಿವಮೊಗ್ಗ ತಲುಪುವ ಜನ ಶತಾಬ್ಧಿಯು ಶಿವಮೊಗ್ಗದಿಂದ (ರೈಲು ಗಾಡಿ ಸಂಖ್ಯೆ 02090) ಜೂನ್ 2ರಂದು ಮುಂಜಾನೆ 5.30ಕ್ಕೆ ಯಶವಂತಪುರಕ್ಕೆ ಹೊರಡಲಿದೆ.

ಸಿಕ್ಕ ಸಿಕ್ಕಲೆಲ್ಲ ಇಲ್ಲ ನಿಲುಗಡೆ

ರೈಲಿನ ಸಂಚಾರ ಆರಂಭದಲ್ಲಿ ಇದ್ದಂತೆ ಭದ್ರಾವತಿ, ಕಡೂರು, ತುಮಕೂರುಗಳಲ್ಲಿ ಮಾತ್ರ ನಿಲುಗಡೆ ಇರಲಿದೆ. ಸದ್ಯಕ್ಕೆ ಕೇವಲ ಆನ್‌ಲೈನ್ ಬುಕಿಂಗ್ ಮಾತ್ರ ಅವಕಾಶ ನೀಡಲಾಗಿದೆ. ಹೀಗಾಗಿ ರೈಲು ನಿಲ್ದಾಣಗಳಲ್ಲಿ ಟಿಕೆಟ್ ಬುಕಿಂಗ್ ಇರುವುದಿಲ್ಲ.

Shivamogga Board General Image 1 1

ರೈಲು ಮುಂಜಾನೆ 5.30ಕ್ಕೆ ಹೊರಟರೂ ಪ್ರಯಾಣಿಕರು ನಿಲ್ದಾಣಕ್ಕೆ 90 ನಿಮಿಷ ಮೊದಲೇ ಆಗಮಿಸಬೇಕು. ಪ್ರತಿಯೊಬ್ಬ ಪ್ರಯಾಣಿಕರ ಥರ್ಮಲ್ ಟೆಸ್ಟ್ ಮಾಡಿ, ಸ್ಯಾನಿಟೈಸರ್‌ನಿಂದ ಕೈಗಳನ್ನು ಸ್ವಚ್ಚಗೊಳಿಸಿ ಒಳಬಿಡಲಾಗುತ್ತದೆ. ಅದಕ್ಕೆ ಸಮಯ ಹಿಡಿಯುವುದರಿಂದ ಪ್ರಯಾಣಿಕರು ಏಕಾಏಕಿ ಒಳನುಗ್ಗಿ ಸಾಮಾಜಿಕ ಅಂತರ ಉಲ್ಲಂಘನೆಯಾಗುವುದು, ಕೈ ಸ್ವಚ್ಚತೆಯಾಗದಿರುವುದನ್ನು ತಪ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಅದಕ್ಕಾಗಿ ನಿಲ್ದಾಣದಲ್ಲಿ ಮುಂಜಾನೆ 4 ಗಂಟೆಯಿಂದಲೆ ಪ್ರಯಾಣಿಕರನ್ನು ಒಳಬಿಡುವ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಿಂಡಿ, ಟೀ, ಕಾಫಿ, ನೀರು ಸಿಗಲ್ಲ

ರೈಲಿನಲ್ಲಿ ಉಪಹಾರ, ಟೀ-ಕಾಫಿಯ ಪ್ಯಾಂಟ್ರಿ ಸೇವೆ ಇರುವುದಿಲ್ಲ. ಕುಡಿಯುವ ನೀರು ಮಾರಾಟ ಸಹ ಇರುವುದಿಲ್ಲ. ಹೀಗಾಗಿ ಪ್ರಯಾಣಿಕರೇ ಅದೆಲ್ಲವನ್ನು ಮಾಡಿಕೊಳ್ಳಬೇಕಾಗುತ್ತದೆ. ಮಾಸ್ಕ್ ಧರಿಸುವುದು ಕೂಡ ಕಡ್ಡಾಯವಾಗಿದೆ. ಪ್ರಯಾಣಿಕರಿಗೆ ಮತ್ತೊಬ್ಬರ ಸಂಪರ್ಕವನ್ನು ಆದಷ್ಟು ತಪ್ಪಿಸುವ ಉದ್ದೇಶದಿಂದ ಇಲಾಖೆ ಈ ಕ್ರಮ ಕೈಗೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 22, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment