ಶಿವಮೊಗ್ಗ : ಸಾಫ್ಟ್ವೇರ್ (Software) ಕಂಪನಿಯೊಂದರಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನಕಲಿ ಆದೇಶ ಕಾಪಿ ನೀಡಿ ಶಿವಮೊಗ್ಗದ ಯುವಕನೊಬ್ಬನಿಗೆ (ಹೆಸರು ಗೌಪ್ಯ) 2.10 ಲಕ್ಷ ರೂ. ವಂಚಿಸಲಾಗಿದೆ.
ಯುವಕನ ಸ್ನೇಹಿತನೊಬ್ಬನ ಕಡೆಯಿಂದ ಹೈದರಾಬಾದ್ನ ಮಹೇಶ್ ಎಂಬಾತನ ಪರಿಚಯವಾಗಿತ್ತು. ಆತ ಯುವಕನಿಗೆ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದ. ಹಂತ ಹಂತವಾಗಿ ಹಣ ಪಡೆದು 2023ರ ಡಿಸೆಂಬರ್ನಲ್ಲಿ ಸಾಫ್ಟ್ವೇರ್ (Software) ಕಂಪನಿಯೊಂದರಲ್ಲಿ ನೇಮಕಾತಿ ಪತ್ರ ಕಳುಹಿಸಿದ್ದ.
ಪರಿಶೀಲಿಸಿದಾಗ ಕಾದಿತ್ತು ಶಾಕ್
ಪರಿಶೀಲಿಸಿದಾಗ ಆ ನೇಮಕಾತಿ ಆದೇಶ ನಕಲಿ ಎಂಬುದು ಯುವಕನಿಗೆ ಗೊತ್ತಾಗಿತ್ತು. ಈ ಹಿನ್ನೆಲೆ ಮಹೇಶ್ಗೆ ಕರೆ ಮಾಡಿ ಹಣ ಹಿಂತಿರುಗಿಸುವಂತೆ ತಿಳಿಸಿದ್ದ. ಆದರೆ ಈವರೆಗು ಆತ ಹಣ ಹಿಂತಿರುಗಿಸದ ಹಿನ್ನೆಲೆ ಯುವಕ ದೂರು ನೀಡಿದ್ದಾನೆ.
ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ » ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಲೋಗೋ ರಿಲೀಸ್, ಕಡಿಮೆ ವೆಚ್ಚದಲ್ಲಿ ಹೈಟೆಕ್ ಟ್ರೀಟ್ಮೆಂಟ್, ವೈದ್ಯರು ಹೇಳಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200