
ಶಿವಮೊಗ್ಗ ಲೈವ್.ಕಾಂ | SHIMOGA | 22 ಫೆಬ್ರವರಿ 2020
ಮಾಜಿ ಸೈನಿಕ ರಾಘವೇಂದ್ರ ಮತ್ತು ರಾಘವ್ ಸಿಂಹ ಅವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಮೂರು ದಿನ ಉಚಿತ ಕಾರ್ಯಾಗಾರ ಆಯೋಜಿಸಲಾಗಿದೆ. ಸ್ಪರ್ಧಾಕಾಂಕ್ಷಿಗಳ ಅನುಕೂಲಕ್ಕಾಗಿ ದುರ್ಗಿಗುಡಿ 3ನೇ ತಿರುವಿನಲ್ಲಿರುವ ಅನುದಾನಿತ ನೌಕರರ ಸಹಕಾರ ಸಂಘ ಕಟ್ಟಡದಲ್ಲಿರುವ ಅಧಿಕಾರಿ ಅಕಾಡೆಮಿಯಲ್ಲಿ ಕಾರ್ಯಾಗಾರ ನಡೆಸಲಾಗುತ್ತಿದೆ.
ಕೆಎಎಸ್, ಎಪ್’ಡಿಎ, ಎಸ್’ಡಿಎ, ಪಿಎಸ್ಐ, ಪಿಸಿ ಸೇರಿದಂತೆ ವಿವಿಧ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ. ಶಿಕಾರಿಪುರದ ಸಾಧನ ಅಕಾಡೆಮಿಯ ಬಿ.ಎಂ.ಮಂಜುನಾಥ್ ಅವರು ವಿಶೇಷ ಸಂಪನ್ಮೂಲ ವ್ಯಕ್ತಿಯಾಗಿ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಆಸಕ್ತರು 9682570834, 8722173603 ನಂಬರ್’ಗೆ ಕರೆ ಮಾಡಿ ರಿಜಿಸ್ಟರ್ ಮಾಡಿಕೊಳ್ಳಬಹುದಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200