ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಆರನೆ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿ, ಕೆಎಸ್ಆರ್ಟಿಸಿ ನೌಕರರು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ನಡುವೆ ಇವತ್ತಿಂದಲೇ ಮುಷ್ಕರದ ಬಿಸಿ ತಟ್ಟಲು ಆರಂಭವಾಗಿದೆ.
ಮುಷ್ಕರದ ಮುನ್ನಾ ದಿನವೇ ಶಿವಮೊಗ್ಗದಲ್ಲಿ ಶೇ.50ರಷ್ಟು ಬಸ್ ಸಂಚಾರ ಕಡಿತವಾಗಿದೆ ಶಿವಮೊಗ್ಗ ವಿಭಾಗದ ನಾಲ್ಕು ಘಟಕಗಳಿಂದ 205 ಬಸ್ಸುಗಳ ಪೈಕಿ ಈತನಕ 107 ಬಸ್ಸುಗಳು ಮಾತ್ರ ಹೊರ ಊರುಗಳಿಗೆ ಸಂಚರಿಸಿವೆ ಎಂದು ಹೇಳಲಾಗುತ್ತಿದೆ. ವಿವಿಧೆಡೆಯಿಂದ ಜಿಲ್ಲೆಗೆ ಬರುವ ಬಸ್ಸುಗಳ ಸಂಖ್ಯೆಯಲ್ಲೂ ಕಡಿತವಾಗಿದೆ.
ಪ್ರಯಾಣಿಕರ ಪರದಾಟ ಶುರು
ದೂರದ ಊರುಗಳಿಗೆ ತೆರಳಲು ಬಸ್ ನಿಲ್ದಾಣಕ್ಕೆ ಆಗಮಿಸಿರುವ ಪ್ರಯಾಣಿಕರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಸ್ಸುಗಳಿಗೆ ಕಾಯುವವರ ಸಂಖ್ಯೆ ಹೆಚ್ಚುತ್ತಿದೆ.
ಶಿವಮೊಗ್ಗ ಜಿಲ್ಲೆಯೊಳಗೆ ತಟ್ಟುವುದಿಲ್ಲ ಬಿಸಿ
ಸಾರಿಗೆ ನೌಕರರು ಮುಷ್ಕರ ನಡೆಸಿದರೂ ಜಿಲ್ಲೆಯೊಳಗೆ ಪ್ರಯಾಣಿಕರಿಗೆ ಅದರ ಬಿಸಿ ತಟ್ಟುವುದಿಲ್ಲ. ಜಿಲ್ಲೆಯ ಬಹುತೇಕ ರೂಟ್ಗಳಲ್ಲಿ ಖಾಸಗಿ ಬಸ್ಗಳೇ ಸಂಚರಿಸುತ್ತಿವೆ. ಹಾಗಾಗಿ ಬಹುತೇಕ ಪ್ರಯಾಣಿಕರು ಖಾಸಗಿ ಬಸ್ಗಳ ಮೇಲೆ ಅವಲಂಬಿತವಾಗಿದ್ದಾರೆ. ಶಿವಮೊಗ್ಗ ಭದ್ರಾವತಿ, ಶಿವಮೊಗ್ಗ ಹೊನ್ನಾಳಿ ರೂಟ್ಗಳಲ್ಲಿ ಮಾತ್ರ ಸರ್ಕಾರಿ ಬಸ್ಸುಗಳು ಸಂಚರಿಸುತ್ತಿವೆ. ಈ ಮಾರ್ಗದಲ್ಲಿ ಪರ್ಯಾಯ ವ್ಯವಸ್ಥೆಗೆ ಜಿಲ್ಲಾಡಳಿತ ಯೋಜಿಸಿದೆ.
ಜಿಲ್ಲಾಡಳಿತಕ್ಕೆ ವರದಿ ಸಲ್ಲಿಕೆ
ಪ್ರಯಾಣಿಕರಿಗೆ ಅನಾನುಕೂಲ ಆಗದಂತೆ ತಡೆಯಲು ಖಾಸಗಿ ಬಸ್ಗಳ ಸಂಚಾರಕ್ಕೆ ಜಿಲ್ಲಾಡಳಿತ ಚಿಂತಿಸಿದೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿಯಿಂದ ಜಿಲ್ಲಾಡಳಿತ ವರದಿ ಪಡೆದುಕೊಂಡಿದೆ. ಶಿವಮೊಗ್ಗ ವಿಭಾಗದಿಂದ ಎಷ್ಟು ಬಸ್ಸುಗಳು ಸಂಚಾರ ಮಾಡುತ್ತವೆ, ಯಾವೆಲ್ಲ ಮಾರ್ಗಗಳಲ್ಲಿ ಸರ್ಕಾರಿ ಬಸ್ಸುಗಳು ಸಂಚರಿಸುತ್ತಿವೆ ಅನ್ನುವದರ ಮಾಹಿತಿ ಪಡೆಯಲಾಗಿದೆ. ಬುಧವಾರ ಬೆಳಗ್ಗೆಯಿಂದ ಅನಿವಾರ್ಯತೆ ಉಂಟಾದರೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಯೋಜಿಸಲಾಗಿದೆ.




ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






