ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021
ಆರನೆ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿ, ಕೆಎಸ್ಆರ್ಟಿಸಿ ನೌಕರರು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ನಡುವೆ ಇವತ್ತಿಂದಲೇ ಮುಷ್ಕರದ ಬಿಸಿ ತಟ್ಟಲು ಆರಂಭವಾಗಿದೆ.
ಮುಷ್ಕರದ ಮುನ್ನಾ ದಿನವೇ ಶಿವಮೊಗ್ಗದಲ್ಲಿ ಶೇ.50ರಷ್ಟು ಬಸ್ ಸಂಚಾರ ಕಡಿತವಾಗಿದೆ ಶಿವಮೊಗ್ಗ ವಿಭಾಗದ ನಾಲ್ಕು ಘಟಕಗಳಿಂದ 205 ಬಸ್ಸುಗಳ ಪೈಕಿ ಈತನಕ 107 ಬಸ್ಸುಗಳು ಮಾತ್ರ ಹೊರ ಊರುಗಳಿಗೆ ಸಂಚರಿಸಿವೆ ಎಂದು ಹೇಳಲಾಗುತ್ತಿದೆ. ವಿವಿಧೆಡೆಯಿಂದ ಜಿಲ್ಲೆಗೆ ಬರುವ ಬಸ್ಸುಗಳ ಸಂಖ್ಯೆಯಲ್ಲೂ ಕಡಿತವಾಗಿದೆ.
ಪ್ರಯಾಣಿಕರ ಪರದಾಟ ಶುರು
ದೂರದ ಊರುಗಳಿಗೆ ತೆರಳಲು ಬಸ್ ನಿಲ್ದಾಣಕ್ಕೆ ಆಗಮಿಸಿರುವ ಪ್ರಯಾಣಿಕರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಸ್ಸುಗಳಿಗೆ ಕಾಯುವವರ ಸಂಖ್ಯೆ ಹೆಚ್ಚುತ್ತಿದೆ.
ಶಿವಮೊಗ್ಗ ಜಿಲ್ಲೆಯೊಳಗೆ ತಟ್ಟುವುದಿಲ್ಲ ಬಿಸಿ
ಸಾರಿಗೆ ನೌಕರರು ಮುಷ್ಕರ ನಡೆಸಿದರೂ ಜಿಲ್ಲೆಯೊಳಗೆ ಪ್ರಯಾಣಿಕರಿಗೆ ಅದರ ಬಿಸಿ ತಟ್ಟುವುದಿಲ್ಲ. ಜಿಲ್ಲೆಯ ಬಹುತೇಕ ರೂಟ್ಗಳಲ್ಲಿ ಖಾಸಗಿ ಬಸ್ಗಳೇ ಸಂಚರಿಸುತ್ತಿವೆ. ಹಾಗಾಗಿ ಬಹುತೇಕ ಪ್ರಯಾಣಿಕರು ಖಾಸಗಿ ಬಸ್ಗಳ ಮೇಲೆ ಅವಲಂಬಿತವಾಗಿದ್ದಾರೆ. ಶಿವಮೊಗ್ಗ ಭದ್ರಾವತಿ, ಶಿವಮೊಗ್ಗ ಹೊನ್ನಾಳಿ ರೂಟ್ಗಳಲ್ಲಿ ಮಾತ್ರ ಸರ್ಕಾರಿ ಬಸ್ಸುಗಳು ಸಂಚರಿಸುತ್ತಿವೆ. ಈ ಮಾರ್ಗದಲ್ಲಿ ಪರ್ಯಾಯ ವ್ಯವಸ್ಥೆಗೆ ಜಿಲ್ಲಾಡಳಿತ ಯೋಜಿಸಿದೆ.
ಜಿಲ್ಲಾಡಳಿತಕ್ಕೆ ವರದಿ ಸಲ್ಲಿಕೆ
ಪ್ರಯಾಣಿಕರಿಗೆ ಅನಾನುಕೂಲ ಆಗದಂತೆ ತಡೆಯಲು ಖಾಸಗಿ ಬಸ್ಗಳ ಸಂಚಾರಕ್ಕೆ ಜಿಲ್ಲಾಡಳಿತ ಚಿಂತಿಸಿದೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿಯಿಂದ ಜಿಲ್ಲಾಡಳಿತ ವರದಿ ಪಡೆದುಕೊಂಡಿದೆ. ಶಿವಮೊಗ್ಗ ವಿಭಾಗದಿಂದ ಎಷ್ಟು ಬಸ್ಸುಗಳು ಸಂಚಾರ ಮಾಡುತ್ತವೆ, ಯಾವೆಲ್ಲ ಮಾರ್ಗಗಳಲ್ಲಿ ಸರ್ಕಾರಿ ಬಸ್ಸುಗಳು ಸಂಚರಿಸುತ್ತಿವೆ ಅನ್ನುವದರ ಮಾಹಿತಿ ಪಡೆಯಲಾಗಿದೆ. ಬುಧವಾರ ಬೆಳಗ್ಗೆಯಿಂದ ಅನಿವಾರ್ಯತೆ ಉಂಟಾದರೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಯೋಜಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200