ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 5 ಏಪ್ರಿಲ್ 2020
ಲಾಕ್’ಡೌನ್ ಸಂದರ್ಭ ವೈನ್ ಶಾಪ್ ಒಂದರಿಂದ ಮದ್ಯವನ್ನು ಬೇರೆಡೆ ಕೊಂಡೊಯ್ಯುತ್ತಿದ್ದ ವ್ಯಕ್ತಿ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಕಾರು, ಬಾಕ್ಸ್’ಗಟ್ಟಲೆ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.
ಸೊರಬ ತಾಲೂಕು ಆನವಟ್ಟಿಯಲ್ಲಿ ಘಟನೆಯ ಸಂಭವಿಸಿದೆ. ಇಲ್ಲಿನ ವೈನ್ ಶಾಪ್ ಒಂದರಿಂದ ವ್ಯಕ್ತಿಯೊಬ್ಬರು 25 ಬಾಕ್ಸ್ ಮದ್ಯವನ್ನು ಕಾರಿನಲ್ಲಿ ಕೊಂಡೊಯ್ಯುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು, ಕಾರು ಮತ್ತು ಮದ್ಯವನ್ನು ಸೀಜ್ ಮಾಡಿದ್ದಾರೆ.
‘ದೇವರಾಜ್ ಎಂಬಾತ ಮದ್ಯವನ್ನು ಕೊಂಡೊಯ್ಯುವಾಗ ದಾಳಿ ನಡೆಸಲಾಗಿದೆ. ರಾತ್ರಿ ದಾಳಿ ವೇಳೆ ಆತ ಪರಾರಿಯಾಗಿದ್ದಾನೆ. ಆತನಿಮದ ವಶಕ್ಕೆ ಪಡೆದ ಮದ್ಯ ಮತ್ತು ಕಾರಿನ ಮೌಲ್ಯ 2.25 ಲಕ್ಷ ರೂ. ಎಂದು ಅಂದಾಜು ಮಾಡಲಾಗಿದೆ. ಇನ್ಸ್’ಪೆಕ್ಟರ್ ಹನುಮಂತಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ’’ ಅಂತಾ ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ತಿಳಿಸಿದ್ದಾರೆ.
ಹಗಲು, ರಾತ್ರಿ ಕಾರ್ಯಾಚರಣೆಗೆ ಟೀಮ್
ಕರೋನ ಲಾಕ್’ಡೌನ್ ಹಿನ್ನೆಲೆ ಮದ್ಯ ಮಾರಾಟ ನಿಷೇಧವಿದೆ. ಸರ್ಕಾರದ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಸಲುವಾಗಿ ಅಬಕಾರಿ ಇಲಾಖೆ ಇನ್ಸ್’ಪೆಕ್ಟರ್, ಸಬ್’ಇನ್ಸ್’ಪೆಕ್ಟರ್’ಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ಹಗಲು, ರಾತ್ರಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಉಪ ಆಯುಕ್ತ ಅಜಿತ್ ಕುಮಾರ್ ಸ್ಪಷ್ಟಪಡಿಸಿದರು.
ಲಾಕ್’ಡಾನ್ ಆದ ನಂತರದಿಂದ ಈವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 13 ಪ್ರಕರಣಗಳು ದಾಖಲು ಮಾಡಿಕೊಳ್ಳಲಾಗಿದೆ. ಸುಮಾರು 500 ಲೀಟರ್’ನಷ್ಟು ಮದ್ಯ ವಶಕ್ಕೆ ಪಡೆಯಲಾಗಿದ್ದು, ಇದರ ಮೌಲ್ಯ ಮೂರುವರೆ ಲಕ್ಷ ರೂ. ಎಂದು ಅವರು ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






