ಶಿವಮೊಗ್ಗ ಲೋಕ ಅದಾಲತ್’ನಲ್ಲಿ 811 ಕೇಸ್ ಇತ್ಯರ್ಥ, ಯಾವ್ಯಾವ ತಾಲೂಕಲ್ಲಿ ಎಷ್ಟು ಕೇಸ್ ಬಗೆಹರಿದಿದೆ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 11 ಫೆಬ್ರವರಿ 2020

83853851 801284613684784 6948877049041780736 n.jpg? nc cat=105& nc ohc=MRoJqoeUjD4AX9jkgPF& nc ht=scontent.fblr1 4

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ ಫೆ.8ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ನಡೆಸಿದ ಲೋಕ ಅದಾಲತ್ನಲ್ಲಿ 811 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.

ವಿವಿಧ ರೀತಿಯ 7,797 ಪ್ರಕರಣಗಳನ್ನು ತೆಗೆದುಕೊಂಡು, ಅವುಗಳ ಪೈಕಿ ವಿಚಾರಣೆಯ ಹಂತದಲ್ಲಿ ಬಾಕಿ ಇದ್ದ 656 ಪ್ರಕರಣಗಳನ್ನು ಹಾಗೂ 155 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಸುವ ಮೂಲಕ ಇತ್ಯರ್ಥಪಡಿಸಲಾಯಿತು ಎಂದು ಜಿಲ್ಲಾ ಸಿವಿಲ್ ನ್ಯಾಯಾಧೀಶರಾದ ಕೆ.ಎನ್.ಸರಸ್ವತಿ ತಿಳಿಸಿದ್ದಾರೆ.

ಪ್ರಕರಣಗಳನ್ನು ರಾಜಿ ಮಾಡಿಸಲು ಶಿವಮೊಗ್ಗ ನಗರದಲ್ಲಿ 16ಪೀಠಗಳನ್ನು, ಭದ್ರಾವತಿಯಲ್ಲಿ 7, ಹೊಸನಗರದಲ್ಲಿ2, ಸಾಗರದಲ್ಲಿ 4 ಪೀಠಗಳನ್ನು ರಚಿಸಲಾಗಿತ್ತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಸ್ಟರ್ ಆರ್.ಕೆ.ಜಿ.ಎಂ.ಎಂ.ಮಹಾಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ರಾಜಿ ಸಂಧಾನ ಮಾಡಿಸಲಾಯಿತು ಅವರು ತಿಳಿಸಿದ್ದಾರೆ.

84154603 796500824163163 8901587988912275456 n.jpg? nc cat=103& nc ohc=SWNaME XsREAX WtYJZ& nc ht=scontent.fblr1 3

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment