SHIVAMOGGA LIVE NEWS | 6 OCTOBER 2023
SHIMOGA : ನಾಡಹಬ್ಬ ದಸರಾ (Dasara) ಆಚರಣೆಗೆ ಅನುದಾನ ಬಿಡುಗಡೆ ಮಾಡುವಂತೆ ಮತ್ತು ಜಂಬೂ ಸವಾರಿಗೆ ಅನೆಗಳಿಗೆ ಅನುಮತಿ ನೀಡುವಂತೆ ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದ ನಿಯೋಗ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ವಿಧಾನಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರ ಕಾರ್ಯದರ್ಶಿಯನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ದಸರಾ ಹಬ್ಬ ಆಚರಣೆ ಕುರಿತು ಚರ್ಚೆ ನಡೆಸಲಾಯಿತು.
ಪಾಲಿಕೆಯ ಮೇಯರ್ ಶಿವಕುಮಾರ್, ಉಪ ಮೇಯರ್ ಲಕ್ಷ್ಮಿ ಶಂಕರ ನಾಯಕ್, ಆಡಳಿತ ಪಕ್ಷದ ನಾಯಕ ಜ್ಞಾನೇಶ್ವರ್, ಪಾಲಿಕೆ ಸದಸ್ಯರಾದ ಪ್ರಭಾಕರ್, ವಿಶ್ವಾಸ್, ಅನಿತಾ ರವಿಶಂಕರ್, ವಿಶ್ವನಾಥ್, ಭಾನುಮತಿ, ವಿನೋದ್ ಇದ್ದರು.
ಇದನ್ನೂ ಓದಿ – ಗೋಪಿ ಸರ್ಕಲ್ನಲ್ಲಿದ್ದ ಸ್ಮಾರ್ಟ್ ಸಿಟಿ ಕಲ್ಲಿನ ರೇಲಿಂಗ್ ನಾಪತ್ತೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200