SHIVAMOGGA LIVE NEWS | 17 MAY 2023
BENGALURU : ನೈಋತ್ಯ ಮುಂಗಾರು (Monsoon) ಈ ಬಾರಿ ಸ್ವಲ್ಪ ತಡವಾಗಿ ಆರಂಭವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಅಂದಾಜಿಸಿದೆ. ಇದಕ್ಕೆ ಎರಡು ಪ್ರಮುಖ ಕಾರಣಗಳನ್ನು ಕೂಡ ಗುರುತಿಸಿದೆ.
ವಾಡಿಕೆಯಂತೆ ಜೂ.1ರಿಂದ ನೈಋತ್ಯ ಮುಂಗಾರು (Monsoon) ಕೇರಳವನ್ನು ಪ್ರವೇಶಿಸಿ ಕ್ರಮೇಣ ಕರ್ನಾಟಕದ ಮೂಲಕ ಬೇರೆ ರಾಜ್ಯಗಳತ್ತ ಸಾಗುತ್ತದೆ. ಆದರೆ ಈ ಬಾರಿ ಜೂ. 4 ಅಥವಾ 5ರಂದು ನೈಋತ್ಯ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ – ರೈಲು ಡಿಕ್ಕಿಯಾಗಿ ಹಳಿ ಪಕ್ಕದ ಚರಂಡಿಯಲ್ಲಿ ಸಿಲುಕಿದ ಕಾಡು ಕೋಣ
ತಡವಾಗಲು ಎರಡು ಕಾರಣ
1 ಪ್ರಸ್ತುತ ವಾತಾವರಣ ತುಂಬಾ ಬಿಸಿ ಇದೆ. ಇದರಿಂದ ಮಳೆಯ ಮಾರುತವಾಗಿ ಪರಿವರ್ತನೆಯಾಗಲು ಕೆಲವು ದಿನಗಳು ಬೇಕಾಗುತ್ತವೆ. 2 ಕೆಲವು ದಿನಗಳ ಹಿಂದೆ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾ ಕರಾವಳಿಗೆ ಅಪ್ಪಳಿಸಿದ ಚಂಡಮಾರುತವು ಮುಂಗಾರಿನ ಮೇಲೆ ಸ್ವಲ್ಪ ಮಟ್ಟಿಗೆ ಪರಿಣಾಮ ಬೀರಿದೆ.WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200