SHIVAMOGGA LIVE NEWS | 15 MAY 2024
RAINFALL : ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯ ಉತ್ತಮವಾಗಿದೆ. ಈ ಮಧ್ಯೆ ಪ್ರಸಕ್ತ ಸಾಲಿನ ಮುಂಗಾರು (Monsoon) ಮಾರುತ ಜೂ. 1ರಂದೇ ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದರು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಕೇರಳಕ್ಕೆ ಪ್ರವೇಶಿಸಲಿದೆ
ಮೇ 19ರಂದು ನೈಋತ್ಯ ಮುಂಗಾರು ಮಾರುತ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಆಗ್ನೆಯ ಭಾಗ ಹಾಗೂ ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸಲಿದೆ. ಜೂನ್ 1ರ ವೇಳೆಗೆ ಕೇರಳ ಪ್ರವೇಶಿಸಲಿದೆ. ಜೂನ್ 15ರ ವೇಳೆಗೆ ದೇಶಾದ್ಯಂತ ವ್ಯಾಪಿಸಲಿದೆ ಎಂದು ಇಲಾಖೆ ತಿಳಿಸಿದೆ. ಕೇರಳ ಪ್ರವೇಶಿಸಿದ ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕ ಕರಾವಳಿಗೂ ಪ್ರವೇಶಿಸುವ ನಿರೀಕ್ಷೆಯಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಗಾಡಿಕೊಪ್ಪ, ಗೋಪಾಳದ ಇಬ್ಬರು ಯುವಕರು ಅರೆಸ್ಟ್
24 ಗಂಟೆಯಲ್ಲಿ ಎಷ್ಟಾಯ್ತು ಮಳೆ?
ಶಿವಮೊಗ್ಗದಲ್ಲಿ ಮೇ 14ರ ಬೆಳಗ್ಗೆ 8.30ರಿಂದ ಮೇ 15ರ ಬೆಳಗ್ಗೆ 8.30ರವರೆಗೆ 5.1 ಮಿ.ಮೀ ಮಳೆಯಾಗಿದೆ. ಭದ್ರಾವತಿಯಲ್ಲಿ 6.7 ಮಿ.ಮೀ., ಹೊಸನಗರ 8.9 ಮಿ.ಮೀ., ಸಾಗರ 4 ಮಿ.ಮೀ., ಶಿಕಾರಿಪುರ 4.1 ಮಿ.ಮೀ., ಶಿವಮೊಗ್ಗ 3.6 ಮಿ.ಮೀ., ಸೊರಬ 5.5 ಮಿ.ಮೀ., ತೀರ್ಥಹಳ್ಳಿ 3.4 ಮಿ.ಮೀ. ಮಳೆಯಾಗಿದೆ ಎಂದು ಕೆಎಸ್ಎನ್ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200