ಶಿವಮೊಗ್ಗ: ಅರಣ್ಯ ಸಚಿವ (Forest Minister) ಈಶ್ವರ ಖಂಡ್ರೆ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಬೆಂಗಳೂರಿನಲ್ಲಿ ಭೇಟಿ ಮಾಡಿದರು.
ಇದನ್ನೂ ಓದಿ » ಕಾಶ್ಮೀರ ದಾಳಿ, ಸಾಂತ್ವನ ಹೇಳಲು ತಿಪಟೂರಿನಿಂದ ಶಿವಮೊಗ್ಗಕ್ಕೆ ಬಂದ 103 ವರ್ಷದ ವೃದ್ಧೆ
ಶಿವಮೊಗ್ಗದ ಶೆಟ್ಟಿಹಳ್ಳಿ ವನ್ಯಜೀವಿ ಅಭಯಾರಣ್ಯದ ಸೀಮಾರೇಖೆಯ ಮರು ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅದನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸುವಂತೆ ಕೋರಿದರು.
ಶಿವಮೊಗ್ಗ ನಗರದ ಆರ್ಥಿಕ, ಸಾಮಾಜಿಕ ಬೆಳವಣಿಗೆಯ ವೇಗ ಹೆಚ್ಚಿಸಲು ಶೆಟ್ಟಿಹಳ್ಳಿ ಅಭಯಾರಣ್ಯದ ವ್ಯಾಪ್ತಿಯ ಪರಿಸರ ಸೂಕ್ಷ್ಮ ಪ್ರದೇಶವನ್ನು 1 ಕಿ.ಮೀಗೆ ಇಳಿಸಲು ಅನುಮತಿಸಲಾಗಿದೆ ಎಂದು ರಾಘವೇಂದ್ರ ಹೇಳಿದರು.
ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಶರಾವತಿ ಸಂತ್ರಸ್ತರಲ್ಲಿ ನಿಜವಾದ ಭೂ ಅನುಭವದಾರರನ್ನು ಗುರುತಿಸಿ ಪಟ್ಟಿ ಕಳುಹಿಸಿಕೊಡುವಂತೆ ಹಾಗೂ ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಮೃಗಾಲಯ, ಹುಲಿ-ಸಿಂಹಧಾಮದ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ ನೀಡುವಂತೆ ಅರಣ್ಯ ಸಚಿವರಿಗೆ ಮನವಿ ಮಾಡಿದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200