ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಅರಣ್ಯ ಸಚಿವ (Forest Minister) ಈಶ್ವರ ಖಂಡ್ರೆ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಬೆಂಗಳೂರಿನಲ್ಲಿ ಭೇಟಿ ಮಾಡಿದರು.
ಇದನ್ನೂ ಓದಿ » ಕಾಶ್ಮೀರ ದಾಳಿ, ಸಾಂತ್ವನ ಹೇಳಲು ತಿಪಟೂರಿನಿಂದ ಶಿವಮೊಗ್ಗಕ್ಕೆ ಬಂದ 103 ವರ್ಷದ ವೃದ್ಧೆ
ಶಿವಮೊಗ್ಗದ ಶೆಟ್ಟಿಹಳ್ಳಿ ವನ್ಯಜೀವಿ ಅಭಯಾರಣ್ಯದ ಸೀಮಾರೇಖೆಯ ಮರು ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅದನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸುವಂತೆ ಕೋರಿದರು.
ಶಿವಮೊಗ್ಗ ನಗರದ ಆರ್ಥಿಕ, ಸಾಮಾಜಿಕ ಬೆಳವಣಿಗೆಯ ವೇಗ ಹೆಚ್ಚಿಸಲು ಶೆಟ್ಟಿಹಳ್ಳಿ ಅಭಯಾರಣ್ಯದ ವ್ಯಾಪ್ತಿಯ ಪರಿಸರ ಸೂಕ್ಷ್ಮ ಪ್ರದೇಶವನ್ನು 1 ಕಿ.ಮೀಗೆ ಇಳಿಸಲು ಅನುಮತಿಸಲಾಗಿದೆ ಎಂದು ರಾಘವೇಂದ್ರ ಹೇಳಿದರು.

ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಶರಾವತಿ ಸಂತ್ರಸ್ತರಲ್ಲಿ ನಿಜವಾದ ಭೂ ಅನುಭವದಾರರನ್ನು ಗುರುತಿಸಿ ಪಟ್ಟಿ ಕಳುಹಿಸಿಕೊಡುವಂತೆ ಹಾಗೂ ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಮೃಗಾಲಯ, ಹುಲಿ-ಸಿಂಹಧಾಮದ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ ನೀಡುವಂತೆ ಅರಣ್ಯ ಸಚಿವರಿಗೆ ಮನವಿ ಮಾಡಿದರು.

LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





