Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ – ಬೆಂಗಳೂರು ಮಧ್ಯೆ ಸಂಚರಿಸುತ್ತಾ ವಂದೇ ಭಾರತ್‌ ರೈಲು? ಸಂಸದ ರಾಘವೇಂದ್ರ ಮೀಟಿಂಗ್‌, ಏನೇನು ಚರ್ಚೆಯಾಯ್ತು?

ಶಿವಮೊಗ್ಗ – ಬೆಂಗಳೂರು ಮಧ್ಯೆ ಸಂಚರಿಸುತ್ತಾ ವಂದೇ ಭಾರತ್‌ ರೈಲು? ಸಂಸದ ರಾಘವೇಂದ್ರ ಮೀಟಿಂಗ್‌, ಏನೇನು ಚರ್ಚೆಯಾಯ್ತು?

24/05/2023 5:02 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 24 MAY 2023

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

HUBBALLI : ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ರೈಲ್ವೆ ಯೋಜನೆಗಳ (Railway Projects) ಕುರಿತು ಸಂಸದ ಬಿ.ವೈ.ರಾಘವೇಂದ್ರ ಹುಬ್ಬಳ್ಳಿಯ ನೈಋತ್ಯ ರೈಲ್ವೆ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದರು. ನೈಋತ್ಯ ರೈಲ್ವೆಯ ಮಹಾ ಪ್ರಬಂಧಕ ಸಂಜೀವ್‌ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಏನೇನೆಲ್ಲ ಚರ್ಚೆಯಾಯ್ತು?

ನೂರು ಕೋಟಿ ರೂ. ಅನುದಾನ

ತಾಳಗುಪ್ಪ, ಶಿವಮೊಗ್ಗ ನಗರ, ಸಾಗರ ರೈಲ್ವೆ ನಿಲ್ದಾಣಗಳ ಆಧುನೀಕರಣಕ್ಕೆ ಸಂಸದ ರಾಘವೇಂದ್ರ ಒತ್ತಾಯಿಸಿದ್ದರು. ಇದರ ಫಲವಾಗಿ ಅಮೃತ್‌ ಭಾರತ್‌ ಯೋಜನೆ ಅಡಿ ಮೂರು ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗಿದೆ. ತಾಳಗುಪ್ಪ ನಿಲ್ದಾಣಕ್ಕೆ 22.5 ಕೋಟಿ ರೂ., ಶಿವಮೊಗ್ಗ ನಿಲ್ದಾಣಕ್ಕೆ 19.28 ಕೋಟಿ ರೂ., ಸಾಗರ ನಿಲ್ದಾಣಕ್ಕೆ 21.10 ಕೋಟ ರೂ., ಶಿವಮೊಗ್ಗ ಗೂಡ್ಸ್‌ ಯಾರ್ಡ್‌ ಅಭಿವೃದ್ದಿಗೆ 33 ಕೋಟಿ ರೂ. ಅನುದಾನ ಒದಗಿಸಲಾಗಿದೆ.

MP-BY-Raghavendra-urges-for-Vande-Bharat-Express

ನಿಲ್ದಾಣಗಳಲ್ಲಿ ಹೈಟೆಕ್‌ ಸವಲತ್ತು

ಪ್ರಯಾಣಿಕ ಸ್ನೇಹಿ ಸವಲತ್ತುಗಳಾದ ಗ್ರಾನೇಟ್ ನೆಲಹಾಸಿನ ಪ್ಲಾಟ್ ಫಾರಂ, ಡಿಜಿಟಲ್ ಸಿಗ್ನಲ್ಸ್, ಪ್ಲಾಟ್ ಫಾರಂ ಶೆಲ್ಟರ್, ಪಾರ್ಕಿಂಗ್‌ ಜಾಗದಲ್ಲಿ ಶೆಡ್ ನಿರ್ಮಾಣ, ಕಾಂಪೌಂಡ್ ವಾಲ್ ನಿರ್ಮಾಣ, ಸರ್ಕುಲೇಟಿಂಗ್ ಏರಿಯಾ ಅಭಿವೃದ್ಧಿ, ನಿಲ್ದಾಣದ ಸೌಂದರೀಕರಣ, ನಿಲ್ದಾಣದ ಮುಂಭಾಗದ ಉದ್ಯಾನವನ, ಫುಟ್ ಓವರ್ ಬ್ರಿಡ್ಜ್, ಆಧುನಿಕ ಶೌಚಾಲಯಗಳು, ಉತ್ತಮ ಗುಣಮಟ್ಟದ ವಿದ್ಯುತ್ ಬೆಳಕಿನ ವ್ಯವಸ್ಥೆ, ಸಿ.ಸಿ.ಟಿ.ವಿ ರೈಲ್ವೆ ಉದ್ಘೋಷಣಾ ವ್ಯವಸ್ಥೆ ಸೇರಿ ಹಲವು ಸವಲತ್ತುಗಳನ್ನು ಒದಗಿಸುವ ಯೋಜನೆಯು ಮಂಜೂರಾತಿ ಗೊಂಡಿದೆ.

ಗೂಡ್ಸ್‌ ಯಾರ್ಡ್‌ ಆಧುನೀಕರಣ

ಶಿವಮೊಗ್ಗ (Railway Projects) ಗೂಡ್ಸ್ ಯಾರ್ಡ್‌ನಲ್ಲಿ ಮೂಲ ಸೌಕರ್ಯ ಹೆಚ್ಚಿಸಬೇಕಿದೆ. ಇದರಿಂದ ಶಿವಮೊಗ್ಗ ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರ, ಪಡಿತರ ಧಾನ್ಯ, ಸಿಮೆಂಟ್, ಕಬ್ಬಿಣ ಮತ್ತಿತರ ಅಗತ್ಯ ವಸ್ತುಗಳು ಶೀಘ್ರವಾಗಿ ಲಭ್ಯವಾಗುವಂತೆ ಮಾಡಲು ಕ್ರಮಕೈಗೊಳ್ಳುವುದಾಗಿ ಸಭೆಯಲ್ಲಿ ರೈಲ್ವೆ ಉನ್ನತಾಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗದ ಮೊದಲ ಇಂದಿರಾ ಕ್ಯಾಂಟೀನ್‌ ಈಗ ಹೇಗಿದೆ? ಊಟ, ತಿಂಡಿ ಸಿಕ್ತಿದ್ಯ? ಪ್ರತಿದಿನ ಎಷ್ಟು ಜನ ಬರ್ತಾರೆ?

ಹೊಸ ರೈಲ್ವೆ ಮಾರ್ಗದ ಕೆಲಸ ಶುರು

ಮಲೆನಾಡು – ಉತ್ತರ ಕರ್ನಾಟಕವನ್ನು ಬೆಸೆಯುವ ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ನೂತನ ರೈಲ್ವೆ ಮಾರ್ಗಕ್ಕೆ 1200 ಕೋಟಿ ರೂ. ಅನುದಾನ ಮಂಜೂರಾಗಿದೆ. ಮೊದಲನೇ ಹಂತವಾದ ಶಿವಮೊಗ್ಗ-ಶಿಕಾರಿಪುರ (46 ಕಿ.ಮೀ) ನಡುವಿನ ಕಾಮಗಾರಿಗೆ ಅಗತ್ಯವಿರುವ ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಮುಂದಿನ ವಾರದಿಂದ ಕಾಮಗಾರಿ ಪ್ರಾರಂಭಿಸಲಾಗುತ್ತದೆ. 2025ರ ಡಿಸೆಂಬರ್ ವೇಳೆಗೆ ಶಿವಮೊಗ್ಗ-ಶಿಕಾರಿಪುರ ನಡುವಿನ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ರೈಲ್ವೆ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.

BY Raghavendra Meeting about Railway works in Shimoga

ಶಿವಮೊಗ್ಗದ ರೈಲ್ವೆ ಮೇಲ್ಸೇತುವೆ ಕಾಮಗಾರಿಗಳು

ಮೂರು ರೈಲ್ವೆ ಮೇಲ್ಸೇತುವೆ, ಕೆಳ ಸೇತುವೆ ಕಾಮಗಾರಿಗಳು ನಡೆಯುತ್ತಿವೆ. ಭದ್ರಾವತಿ ಕಡದಕಟ್ಟೆ ಹತ್ತಿರದ ಕಾಮಗಾರಿಯು 2023ರ ಡಿಸೆಂಬರ್‌ಗೆ ಪೂರ್ಣಗೊಳ್ಳಲಿದೆ. ಶಿವಮೊಗ್ಗದ ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ 2023ರ ಅಕ್ಟೋಬರ್‌ಗೆ, ಕಾಶಿಪುರ ಗೇಟ್‌ ಬಳಿ ಮೇಲ್ಸೇತುವೆ ಜೂನ್‌ ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ಪ್ರಧಾನ ವ್ಯವಸ್ಥಾಪಕರು ತಿಳಿಸಿದ್ದಾರೆ.

Flyover at Vidyanagara

ಕೋಚಿಂಗ್‌ ಡಿಪೋ ಕೆಲಸ ಶುರು

ಕೋಟೆ ಗಂಗೂರಿನಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಕೋಚಿಂಗ್‌ ಡಿಪೋ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಭೂಮಿಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ. 3 ಪ್ಲಾಟ್‌ ಫಾರಂ ಇರುವ ಕೋಟೆಗಂಗೂರಿನ ನೂತನ ರೈಲ್ವೆ ನಿಲ್ದಾಣ, 2 ಪಿಟ್‍ಲೈನ್, 3 ಸಿಕ್‍ಲೈನ್, 3 ಸ್ಟೇಬಲಿಂಗ್ ಲೈನ್‍ಗಳನ್ನು ಹೊಂದಲಿದೆ. ಈ ಯೋಜನೆಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಆರಂಭಗೊಂಡಿದೆ. 2024ರ ಮೇ ಅಥವಾ ಜೂನ್ ಗೂ ಮೊದಲು ಈ ಕಾಮಗಾರಿ ಪೂರ್ಣಗೊಳಿಸುವುದಾಗಿ ನೈರುತ್ಯ ರೈಲ್ವೆಯ ಸಭೆಯಲ್ಲಿ ತಿಳಿಸಿರುತ್ತಾರೆ.

ವಂದೇ ಭಾರತ್‌ ರೈಲು ಸಂಚಾರ

ಭವಿಷ್ಯದಲ್ಲಿ ವಂದೇ ಭಾರತ್ ರೈಲುಗಳನ್ನು  ಸಹ ಇಲ್ಲಿ ನಿರ್ವಹಣೆ ಮಾಡಲು ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಬೆಂಗಳೂರು ಮತ್ತು ಶಿವಮೊಗ್ಗ ನಗರಗಳ ಮಧ್ಯೆ ವಂದೇ ಭಾರತ ರೈಲು ಸೇವೆ ಆರಂಭಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ಕುರಿತಂತೆ ರೈಲ್ವೆ ಮಂಡಳಿಯ ಅನುಮೋದನೆ ಪಡೆಯಲು ಕ್ರಮ ಕೈಗೊಳ್ಳುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿರುತ್ತಾರೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ತಾಳಗುಪ್ಪ – ಶಿರಸಿ – ಹುಬ್ಬಳಿ ಸರ್ವೆ ಕಂಪ್ಲೀಟ್‌

ತಾಳಗುಪ್ಪ – ತಡಸ – ಹೊನ್ನಾವರ – ಶಿರಸಿ – ಹುಬ್ಬಳ್ಳಿ ನೂತನ ರೈಲ್ವೆ ಮಾರ್ಗ ಯೋಜನೆಯ ಸರ್ವೆ ಕಾಮಗಾರಿ ಪೂರ್ಣಗೊಂಡಿದೆ. ನೈರುತ್ಯ ರೈಲ್ವೆಯು ಸರ್ವೆ ವರದಿಯನ್ನು ರೈಲ್ವೆ ಮಂಡಳಿಗೆ ಸಲ್ಲಿಸಿದೆ. ಸಂಸದರು ಈ ಯೋಜನೆ ಮಂಜೂರು ಮಾಡಲು ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್‌ ಅವರನ್ನು ಈಗಾಗಲೇ ಕೋರಿದ್ದು, ನೈರುತ್ಯ ರೈಲ್ವೆಯಿಂದಲು ಸಹ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಯಿತು.

ಅರಸಾಳು, ಹಾರನಹಳ್ಳಿಯಲ್ಲಿ ರೈಲಿಗೆ ಬೇಕು ಸ್ಟಾಪ್‌

ಅರಸಾಳು ಮತ್ತು ಹಾರನಹಳ್ಳಿಯಲ್ಲಿ ಮೈಸೂರು-ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್‌ ರೈಲುಗಳ ನಿಲುಗಡೆಗೆ ಮಾಡಲು ಸಂಸದ ರಾಘವೇಂದ್ರ ಒತ್ತಾಯಿಸಿರು. ಈ ಕುರಿತು ಅಗತ್ಯ ಕ್ರಮಕೈಗೊಳ್ಳುವುದಾಗಿ ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದರು.

Shimoga-Railway-Station-Board

ವೇಳಾಪಟ್ಟಿಯಲ್ಲಿ ಸಣ್ಣಪುಟ್ಟ ಬದಲಾವಣೆ ಬೇಕು

ಶಿವಮೊಗ್ಗ, ಬೆಂಗಳೂರು ಹಾಗೂ ಮೈಸೂರು ನಡುವೆ ಸಂಚರಿಸುತ್ತಿರುವ ರೈಲುಗಳ ವೇಳಾಪಟ್ಟಿಯಲ್ಲಿ ಸಣ್ಣ ಪುಟ್ಟ ಬದಲಾವಣೆ ಅಳವಡಿಸಿಕೊಳ್ಳಬೇಕು. ಈ ರೈಲುಗಳ ಸೇವೆಯನ್ನು ಮತ್ತಷ್ಟು ಜನ ಸ್ನೇಹಿಯಾಗಿಸುವಂತೆ ಮಾಡಬೇಕು ಎಂದು ಸಂಸದ ರಾಘವೇಂದ್ರ ಮನವಿ ಮಾಡಿದರು. ನೈರುತ್ಯ ರೈಲ್ವೆಯು ಈ ಪ್ರಸ್ತಾವನೆಯನ್ನು ಪರಿಶೀಲಿಸಿ, ಸೂಕ್ತ ಬದಲಾವಣೆ ಮಾಡುವುದಾಗಿ ತಿಳಿಸಿದೆ.

SHIVAMOGGA-LIVE-NITIN-KAIDOTLU

ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಕ್ಲಿಕ್‌ ಮಾಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Child-Labour-rescued-at-Soraba-Anavatti ಸೊರಬ ತಾಲೂಕಿನ ವಿವಿಧೆಡೆ ಮಳಿಗೆಗಳಲ್ಲಿ ಅಧಿಕಾರಿಗಳಿಂದ ದಿಢೀರ್‌ ತಪಾಸಣೆ, ಒಂದು ಕೇಸ್‌ ದಾಖಲು
Next Article Fatafat-News-Update-Shimoga-Live ಶಿವಮೊಗ್ಗದ ಫಟಾಫಟ್‌ ಸುದ್ದಿಗಳು, ಇವತ್ತು ಎಲ್ಲೆಲ್ಲಿ ಏನೇನಾಯ್ತು? 3 ನಿಮಿಷದಲ್ಲಿ 10 ಸುದ್ದಿಗಳನ್ನು ಓದಿ

ಇದನ್ನೂ ಓದಿ

140525 JNNCE engineering college in Shimoga
COLLEGE NEWSSHIVAMOGGA CITY

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್‌ ಕೋಟಾದ ಸೀಟುಗಳು ಲಭ್ಯ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
140525 SLV Book House Sharavathi Nagara in Shimoga city
SHIVAMOGGA CITY

ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
WEATHER-REPORT-SHIMOGA-
WEATHER REPORT

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಒಣಹವೆ, ವಿವಿಧೆಡೆ ಮಳೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?