ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾದ ಸಂಸದ ರಾಘವೇಂದ್ರ, ವಿಐಎಸ್ಎಲ್, ಉದ್ಯೋಗ ಸೃಷ್ಟಿ ಬಗ್ಗೆ ಚರ್ಚೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನರುಜ್ಜೀವನಗೊಳಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಸಂಸದ ಬಿ.ವೈ.ರಾಘವೇಂದ್ರ ಮನವಿ ಸಲ್ಲಿಸಿದರು.

ಸಂಸದರ ಮನವಯಲ್ಲಿ ಏನಿದೆ?

ಭದ್ರಾವತಿಯಲ್ಲಿ ಸ್ಥಗಿತಗೊಂಡಿರುವ ಕಾರ್ಖಾನೆಯು ಹೆಚ್ಚಿನ ಮೌಲ್ಯವುಳ್ಳ ಆತ್ಯಾಧುನಿಕ ಉಕ್ಕು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಈ ಕೈಗಾರಿಕೆಯನ್ನು ಲಾಭದಾಯಕವಾಗಿ ನಡೆಸಲು ಇನ್ನಷ್ಟು ಅತ್ಯಾಧುನಿಕ ಯಂತ್ರೋಪಕರಣ, ವಿವಿಧ ಸೌಲಭ್ಯಗಳ ಅಗತ್ಯವಿದೆ.

ಆಧುನಿಕ ವ್ಯವಸ್ಥೆಗೆ ಪೂಕರವಾಗಿ ವಿಐಎಸ್‍ಎಲ್‍ ಕಾರ್ಖಾನೆ ನವೀಕರಿಸಿ, ಸಿಂಟರ್ ಪ್ಲಾಂಟ್, ಕೋಕ್ ಓವನ್ ಹಾಗೂ ಆಧುನೀಕರಿಸಿದ ಸ್ಟೀಲ್ ಕರಗುವ ಘಟಕ ಸೌಲಭ್ಯಗಳನ್ನು ನೀಡಬೇಕು. ಪ್ರತಿಸ್ಪರ್ಧಿಗಳ ಮಟ್ಟಕ್ಕೆ ವಿಐಎಸ್ಎಲ್ ಕಾರ್ಖಾನೆಯನ್ನು ಕೊಂಡೊಯ್ಯಬೇಕು.

ಖಾಸಗಿ ಬಂಡವಾಳಗಾರರನ್ನು ಆಕರ್ಷಿಸಿ ವಿಐಎಸ್‍ಎಲ್ ಕರ್ಖಾನೆಯನ್ನು ಪುನಾರಂಭ ಮಾಡಬೇಕು.

ಶಿವಮೊಗ್ಗದಲ್ಲಿ ಉದ್ಯೋಗ ಸೃಷ್ಟಿಗೆ ಮನವಿ

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್.ಇ.ಡಿ. ಬಲ್ಬ್, ಟೆಕ್ಸ್‍ಟೈಲ್ ಪಾರ್ಕ್, ಆಹಾರ ಸಂಸ್ಕರಣಾ ಘಟಕಗಳು ಮತ್ತು ಇ.ಎಸ್.ಡಿ.ಎಂ. (Electronics System Design & Manufacturing) ಕೈಗಾರಿಕಾ ಕೇಂದ್ರಗಳ ಮೂಲಕ ಉದ್ಯೋಗ ಸೃಷ್ಟಿ ಮಾಡುವಂತೆಯೂ ಸಂಸದ ರಾಘವೇಂದ್ರ ಮನವಿ ಮಾಡಿದ್ದಾರೆ.

ಮನವಿ ಸ್ವೀಕರಿಸಿದ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಅವರು, ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment