NATIONAL NEWS | 9 MAY 2021
ತೀವ್ರ ಸ್ವರೂಪದಲ್ಲಿ ಹರಡುತ್ತಿರುವ ಕರೋನ ಸೋಂಕನ್ನು ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆರೋಪಿಸಿದೆ.
ಕರೋನ ಎರಡನೆ ಅಲೆಯನ್ನು ನಿಯಂತ್ರಿಸುವಲ್ಲಿ ಆರೋಗ್ಯ ಇಲಾಖೆಯು ನಿರುತ್ಸಾಹ ತೋರಿಸಿದೆ. ಶೀಘ್ರ ಸೂಕ್ತ ಕೈಗೊಳ್ಳಬೇಕು ಎಂದು ಐಎಂಎ ಆಗ್ರಹಿಸಿದೆ.
ಆರೋಗ್ಯ ಮೂಲ ಸೌಕರ್ಯ ಹೆಚ್ಚಿಸುವುದು ಮತ್ತು ಪೂರ್ವಯೋಜಿತ ರಾಷ್ಟ್ರೀಯ ಲಾಕ್ ಡೌನ್ ಘೋಷಿಸುವಂತೆ ಕಳೆದ 20 ದಿನದಿಂದ ಐಎಂಎ ಆಗ್ರಹಿಸುತ್ತಿದೆ. ಆದರೆ ಐಎಂಎ ಮನವಿಯನ್ನು ಕಸದ ಬುಟ್ಟಿಗೆ ಹಾಕಲಾಗಿದೆ. ಇದರ ಪರಿಣಮ ಕರೋನ ವ್ಯಾಪಕವಾಗಿ ಹರಡುತ್ತಿದೆ.
ಪ್ರತಿದಿನ ನಾಲ್ಕು ಲಕ್ಷಕ್ಕೂ ಅಧಿಕ ಸೋಂಕಿತರು ದಾಖಲಾಗುತ್ತಿದ್ದಾರೆ. ಗಂಭೀರ ಪ್ರಕರಣ ಸಂಖ್ಯೆ ಶೇ.40ಕ್ಕೆ ಹೆಚ್ಚಳವಾಗಿದೆ. ರಾತ್ರಿ ಕರ್ಫ್ಯೂನಿಂದ ಯಾವುದೆ ಪ್ರಯೋಜನವಾಗುತ್ತಿಲ್ಲ. ಈ ಕುರಿತು ಇನ್ನಾದರೂ ಕೇಂದ್ರ ಆರೋಗ್ಯ ಇಲಾಖೆ ಕಠಿಣ ಕ್ರಮದತ್ತ ಯೋಚಿಸಬೇಕಿದೆ ಎಂದು ಐಎಂಎ ಆಗ್ರಹಿಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200