ಶಿವಮೊಗ್ಗ ಲೈವ್.ಕಾಂ | NATIONAL NEWS | 22 ಮಾರ್ಚ್ 2021
ದೆಹಲಿ ಸರ್ಕಾರ ಕುಡಿತದ ವಯೋಮಿತಿಯನ್ನು ಇಳಿಕೆ ಮಾಡಿದೆ. ಅಬಕಾರಿ ನೀತಿಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ಸರ್ಕಾರ, ವಯೋಮಿತಿ ಇಳಿಕೆ ಮಾಡಿದೆ.
![]() |
ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು ಪರಿಷ್ಕೃತ ಅಬಕಾರಿ ನೀತಿಯನ್ನು ಪ್ರಕಟಿಸಿದ್ದಾರೆ. ಇದರಲ್ಲಿ ಮದ್ಯ ಸೇವನೆಗೆ ಹಿಂದೆ ನಿಗದಿಪಡಿಸಲಾಗಿದ್ದ ವಯೋಮಿತಿಯನ್ನು ಸಡಿಲಗೊಳಿಸಲಾಗಿದೆ. 25 ವರ್ಷ ವಯೋಮಿತಿಯನ್ನು 21 ವರ್ಷಕ್ಕೆ ಇಳಿಸಲಾಗಿದೆ.
ತಜ್ಞರ ಸಮಿತಿ ಕೊಟ್ಟಿರುವ ಆದೇಶದ ಮೇರೆಗೆ ವಯೋಮಿತಿಯನ್ನು ಇಳಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಮನಿಷ್ ಸಿಸೋಡಿಯಾ.
ನೂತನ ಮದ್ಯದ ಅಂಗಡಿಗಳನ್ನು ತೆರೆಯುವುದಕ್ಕೆ ಪರವಾನಗಿ ನೀಡುವುದಿಲ್ಲ ಎಂದು ದೆಹಲಿ ಸರ್ಕಾರ ತಿಳಿಸಿದೆ. ಪರವಾನಗಿ ಇಲ್ಲದ ಮದ್ಯದ ಅಂಗಡಿಗಳನ್ನು ಮುಚ್ಚಲಾಗಿದೆ. ಮತ್ತೊಂದೆಡೆ ಒಂದೇ ಪರವಾನಗಿಯಲ್ಲಿ ಹಲವು ಶಾಖೆಗಳನ್ನು ತೆರೆಯುವುದು ಸೇರಿದಂತೆ ಹಲವು ಅಕ್ರಮಗಳಿಗೆ ಬ್ರೇಕ್ ಹಾಕಲಾಗಿದೆ ಎಂದು ಮನಿಷ್ ಸಿಸೋಡಿಯಾ ಹೇಳಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200