ಮೂರು ದಿನ ತಡವಾಗಿ ಮುಂಗಾರು ಪ್ರವೇಶ, ಹವಾಮಾನ ತಜ್ಞರು ಹೇಳಿದ್ದೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಮಳೆ ವರದಿ: ದೇಶದ ಕೃಷಿ ವಲಯದ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಮಾರುತಗಳು ಜೂನ್ 4ರಂದು ಕೇರಳಂ ಪ್ರವೇಶಿಸಿವೆ. ಇದರೊಂದಿಗೆ ದೇಶದಲ್ಲಿ ಅಧಿಕೃತವಾಗಿ ಮಳೆಗಾಲ ಆರಂಭವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಜೂನ್ 1ರಂದು ಮುಂಗಾರು ಕೇರಳಂ ಪ್ರವೇಶಿಸಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಮೂರು ದಿನ ತಡವಾಗಿ ಪ್ರವೇಶಿಸಿದೆ.

Rain-General-Image-youth-With-an-Umbrella

ಭಾರಿ ಮಳೆ ಮುನ್ನೆಚ್ಚರಿಕೆ

ಮುಂಗಾರು ಆಗಮನದ ಹಿನ್ನೆಲೆ ಕೇರಳಂನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಆಲಪ್ಪುಳ, ಕೊಟ್ಟಾಯಂ ಮತ್ತು ಎರ್ನಾಕುಲಂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ. ಅನುಕೂಲಕರ ವಾತಾವರಣ ಇರುವುದರಿಂದ ಮುಂಗಾರು ಮಾರುತಗಳು ಮುಂದಿನ ದಿನಗಳಲ್ಲಿ ದೇಶದ ಇತರ ಭಾಗಗಳಿಗೆ ವಿಸ್ತರಿಸಲಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.