ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | COVID CURFEW NEWS | 5 ಜನವರಿ 2022
ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ಕ್ರಮ ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಹೊಸ ಗೈಡ್ ಲೈನ್ ಸಿದ್ಧಪಡಿಸಲಾಗಿದೆ.
ರಾಜ್ಯ ಸರ್ಕಾರದ ಹೊಸ ಗೈಡ್ ಲೈನ್ ಪ್ರಕಾರ ಶಿವಮೊಗ್ಗ ಜಿಲ್ಲೆಗೆ ಯಾವೆಲ್ಲ ರೂಲ್ಸ್ ಅನ್ವಯವಾಗಲಿದೆ ಅನ್ನುವುದರ ಕಂಪ್ಲೀಟ್ ಮಾಹಿತಿ ಇಲ್ಲಿದೆ.
ನೈಟ್ ಕರ್ಫ್ಯೂ ವಿಸ್ತರಣೆ
ಜನವರಿ 19ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಇರಲಿದೆ.
ಎಲ್ಲಾ ಸರ್ಕಾರಿ ಕಚೇರಿಗಳು ವಾರದ ಐದು ದಿನಗಳು ಅಂದರೆ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ.
ಹೊಟೇಲ್, ರೆಸ್ಟೋರೆಂಟ್, ಬಾರ್ ಸೇರಿದಂತೆ ವಿವಿಧ ತಿಂಡಿ, ತನಿಸು ಕೇಂದ್ರಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ. ಕೋವಿಡ್ ಗೈಡ್ ಲೈನ್ ಕಡ್ಡಾಯವಾಗಿ ಪಾಲಿಸಬೇಕು.
ಚಿತ್ರಮಂದಿರ, ಮದುವೆ, ದೇವಸ್ಥಾನ
ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್, ರಂಗಮಂದಿರಗಳು, ಆಡಿಟೋರಿಯಂಗಳ ಒಟ್ಟು ಆಸನಗಳ ಪೈಕಿ ಶೇ.50ರಷ್ಟು ಮಂದಿಗೆ ಮಾತ್ರ ಅವಕಾಶ.
ಮದುವೆ ಸಮಾರಂಭಗಳು ಹೊರಾಂಗಣವಾದರೆ 200 ಮಂದಿ ಭಾಗವಹಿಸಬಹುದು. ಒಳಾಂಗಣದಲ್ಲಿ ಕೇವಲ 100 ಮಂದಿ.
ದೇವಸ್ಥಾನಗಳಲ್ಲಿ ಪೂಜೆಗೆ ಮಾತ್ರ ಅವಕಾಶ. ಒಮ್ಮೆಗೆ 50 ಮಂದಿಗೆ ಮಾತ್ರ ಪ್ರವೇಶ. ಮಾಲ್’ಗಳು, ಶಾಪಿಂಗ್ ಸೆಂಟರ್’ಗಳು ಎಂದಿನಂತೆ ವ್ಯಾಪಾರ ಮಾಡಬಹುದು. ಸ್ವಿಮ್ಮಿಂಗ್ ಪೂಲ್, ಜಿಮ್, ಕ್ರೀಡಾ ಸಂಕೀರ್ಣ, ಕ್ರೀಡಾಂಗಣದಲ್ಲಿ ಶೇ.50ರಷ್ಟು ಮಂದಿಗೆ ಮಾತ್ರ ಅವಕಾಶ.
ಯಾವುದೆ ಧರಣಿ, ಸತ್ಯಾಗ್ರಹ, ಪ್ರತಿಭಟನೆಗಳಿಗೆ ಅವಕಾಶ ಇಲ್ಲ.
ವೀಕೆಂಡ್ ಕರ್ಫ್ಯೂ
ರಾಜ್ಯಾದ್ಯಂತ ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ.
ವೀಕೆಂಡ್ ಕರ್ಫ್ಯೂ ಸಂದರ್ಭ ತುರ್ತು ಸೇವೆಗಳನ್ನು ಒದಗಿಸುವ ಸರ್ಕಾರಿ ಕಚೇರಿಗಳು, ಅವುಗಳ ಸ್ವಾಯತ್ತ ಸಂಸ್ಥೆಗಳ ಕರ್ತವ್ಯ ನಿರ್ವಹಿಸಲು ಅವಕಾಶವಿದೆ.
ವೀಕೆಂಡ್ ಕರ್ಫ್ಯೂ ಸಂದರ್ಭ ಎಲ್ಲಾ ಪಾರ್ಕುಗಳನ್ನು ಬಂದ್ ಮಾಡಲಾಗುತ್ತದೆ.
ಕಾರ್ಖಾನೆಗಳ ಕಾರ್ಯನಿರ್ವಹಣೆಗೆ ಅವಕಾಶವಿದೆ. ಕಾರ್ಮಿಕರು, ಉದ್ಯೋಗಿಗಳು ಓಡಾಡಲು ಅವಕಾಶವಿದೆ. ಐಡಿ ಕಾರ್ಡ್ ಕಡ್ಡಾಯವಾಗಿರಬೇಕು.
ಅನಾರೋಗ್ಯಕ್ಕೆ ತುತ್ತಾದವರ ಆರೈಕೆಗೆ, ಕರೋನ ಲಸಿಕೆ ಪಡೆಯಲು ಹೋಗುವವರಿಗೆ ಅವಕಾಶ.
ದಿನಸಿ, ಆಹಾರ, ಹಣ್ಣು, ತರಕಾರಿ ಮಾರಾಟ ಮಳಿಗೆ ತೆಗೆಯಲು ಅವಕಾಶ. ತಳ್ಳುಗಾಡಿ ವ್ಯಾಪಾರ, ಹೋಂ ಡೆಲಿವರಿಗೆ ಅವಕಾಶ. ರೆಸ್ಟೋರೆಂಟ್, ಹೊಟೇಲ್’ಗಳಲ್ಲಿ ಪಾರ್ಸಲ್’ಗೆ ಮಾತ್ರ ಅವಕಾಶ.
ರೈಲು, ಬಸ್ ಸಂಚಾರಕ್ಕೆ ಅವಕಾಶ. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಕ್ಕೆ ಪ್ರಯಾಣಿಕರನ್ನ ಬಿಡಲು ಮತ್ತು ಅಲ್ಲಿಂದ ಕರೆತರಲು ವಾಹನಗಳಿಗೆ ಅವಕಾಶ. ಈ ಸಂದರ್ಭ ಟಿಕೆಟ್ ಅಥವಾ ಇತರೆ ದಾಖಲೆಗಳನ್ನು ತೋರಿಸಬೇಕು.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















