ಕುವೆಂಪು ವಿಶ್ವವಿದ್ಯಾಲಯದಲ್ಲಿ ಏಕಾಂಗಿಯಾಗಿ ಸತ್ಯಾಗ್ರಹ ಆರಂಭಿಸಿದ ಮಹಿಳಾ ಅಧಿಕಾರಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA | 20 ಫೆಬ್ರವರಿ 2020

87150925 809206726225906 5843094214962839552 o.jpg? nc cat=109& nc ohc=xdLVG 2v6qkAX A6L2W& nc ht=scontent.fblr1 3

ಬಡ್ತಿಯಲ್ಲಿ ವಂಚನೆಯಾಗಿರುವುದನ್ನು ವಿರೋಧಿಸಿ ಕುವೆಂಪು ವಿಶ್ವವಿದ್ಯಾಲಯ ಖರೀದಿ ವಿಭಾಗದ ಮೇಲ್ವಿಚಾರಕಿ ಪದ್ಮಲತಾ ಅವರು ವಿಶ್ವವಿದ್ಯಾಲಯದ ಕುವೆಂಪು ಶತಮಾನೋತ್ಸವ ಭವನದ ಮುಂಭಾಗದಲ್ಲಿ ಬುಧವಾರದಿಂದ ಏಕಾಂಗಿಯಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ಕೈಗೊಂಡಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗಷ್ಟೆ ಬಡ್ತಿ ಪಟ್ಟಿಯನ್ನು ಪ್ರಕಟಿಸಲಾಗಿದ್ದು ಇದರಲ್ಲಿ ತಮಗೆ ನ್ಯಾಯಯುತವಾಗಿ ಸಿಗಬೇಕಾದ ಮುಂಬಡ್ತಿ ಸಿಗದೆ ವಂಚನೆಯಾಗಿದೆ, ತಮಗಿಂತ ಕಿರಿಯರಿಗೆ ಮುಂಬಡ್ತಿ ನೀಡಲಾಗಿದೆ. ಇದರ ಬಗ್ಗೆ ಹಲವು ಬಾರಿ ಕುಲಪತಿ, ಕುಲಸಚಿವರಿಗೆ ಮನವಿ ಮಾಡಿದರೂ ನ್ಯಾಯ ಸಿಕ್ಕಿಲ್ಲ ಎಂದು ಪದ್ಮಲತಾ ಅವರು ಆಪಾದಿಸಿದ್ದಾರೆ.

ಫೆ.18ರೊಳಗೆ ತಮಗೆ ನ್ಯಾಯ ಒದಗಿಸುವಂತೆ ಕುಲಪತಿ ಅವರನ್ನು ಕೋರಲಾಗಿತ್ತು. ಆದರೆ, ಅದಕ್ಕೂ ಸ್ಪಂದನೆ ಸಿಗದ ಕಾರಣ ಸತ್ಯಾಗ್ರಹ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ಇದರ ನಡುವೆ ಪದ್ಮಲತಾ ಅವರು ಅನಾರೋಗ್ಯದ ನಡುವೆಯೂ ಉಪವಾಸ ಸತ್ಯಾಗ್ರಹ ನಡೆಸಿರುವುದು ಆತಂಕಕ್ಕೀಡು ಮಾಡಿದೆ. ಕತ್ತಲಾದ ಬಳಿಕವೂ ಅವರು ಸತ್ಯಾಗ್ರಹ ಮುಂದುವರಿಸಿದ್ದಾರೆ.

ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಮತ್ತು ಕುಲಸಚಿವ ಪ್ರೊ. ಎಸ್.ಎಸ್.ಪಾಟೀಲ್ ಅವರು ಕೇಂದ್ರ ಸ್ಥಾನದಿಂದ ಹೊರಗಿದ್ದಾರೆ. ಪದ್ಮಲತಾ ಅವರಿಗೆ ಬಂಬಲ ವ್ಯಕ್ತಪಡಿಸಿ ಬಸವರಾಜ್ ಬಳಿಗಾರ್ ಮತ್ತು ಸುರೇಶ್ ಪಂಡಿತ್ ಅವರೂ ಸಂಜೆ ಬಳಿಕ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

84533154 796421937504385 9023917582444396544 n.jpg? nc cat=100& nc ohc=s8S4LeqVlzYAX8xYAGp& nc ht=scontent.fblr1 3

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment