ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲೆಯಾದ್ಯಂತ ಪುಷ್ಯ ಮಳೆ ಬಿರುಸಾಗಿದೆ. ವಿವಿಧೆಡೆ ಸಾಧಾರಣದಿಂದ ಭಾರಿ ಮಳೆಯಾಗುತ್ತಿದೆ (Rainfall). ಇನ್ನೊಂದೆಡೆ ಇವತ್ತು ಜಿಲ್ಲೆಯಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಶಿವಮೊಗ್ಗ ಜಿಲ್ಲೆಗೆ ಇವತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಪಕ್ಕದ ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲು ಆರೆಂಜ್ ಅಲರ್ಟ್ ಇದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಇದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಳಗ್ಗೆಯಿಂದ ನಿರಂತರ ಮಳೆ

ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಹಲವೆಡೆ ಬೆಳಗ್ಗೆಯಿಂದಲೆ ಮಳೆ ಅಬ್ಬರಿಸುತ್ತಿದೆ. ತೀರ್ಥಹಳ್ಳಿಯ ಅರೇಹಳ್ಳಿ, ಮೇಗರವಳ್ಳಿ, ಹೊಸಹಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹೊನ್ನೇತಾಳು, ತೀರ್ಥಮತ್ತೂರು, ಸಾಲ್ಗಡಿ, ನೆರಟೂರು, ಆರಗ, ತೂದೂರು, ಬೆಜ್ಜವಳ್ಳಿ, ಬಾಂಡ್ಯ ಕುಕ್ಕೆ, ತ್ರಿಯಂಬಕಪುರ, ಹಾದಿಗಲ್ಲು ಸುತ್ತಮುತ್ತಲು ಮಳೆ ಬಿರುಸಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಮನೆಯಲ್ಲಿ ಸಿಲಿಂಡರ್ ಸ್ಪೋಟ, ಹಾರಿ ಹೋದ ಛಾವಣಿ
ಹೊಸನಗರ ತಾಲೂಕಿನ ಅಮೃತ, ಸೋನಲೆ, ಮೇಲಿನಬೆಸಿಗೆ, ಹೊಸನಗರ, ಮುಂಬಾರು, ಕೋಡೂರು, ಚಿಕ್ಕಜೇನಿ, ಮಾರುತಿಪುರ ಸುತ್ತಮುತ್ತ ಜೋರು ಮಳೆಯಾಗುತ್ತಿದೆ. ಸಾಗರದ ಹೊಸೂರು, ಕೋಳೂರು, ಭೀಮನಕೋಣೆ, ಕಲ್ಮನೆ, ಕಾಂಡಿಕ, ಭೀಮನೇರಿ, ಮಾಲ್ವೆ, ಕೆಳದಿ, ಹಿರೆನಲ್ಲೂರು, ತ್ಯಾಗರ್ತಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ.

ಭದ್ರಾವತಿ, ಶಿವಮೊಗ್ಗ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಹಲವಡೆ ಸಾಧಾರಣ ಮಳೆಯಾಗುತ್ತಿದೆ.
ಜಿಲ್ಲೆಯಲ್ಲಿ ತಗ್ಗಿದ ತಾಪಮಾನ
ಮೋಡ ಕವಿದ ವಾತಾವರಣ ಮತ್ತು ನಿರಂತರ ಮಳೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ತಗ್ಗಿದೆ. ಇವತ್ತು ಜಿಲ್ಲೆಯಾದ್ಯಂತ ತಂಪು ವಾತಾವರಣ ಇರಲಿದೆ.
- ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
- ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
- ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















