ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಮೇ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹೊರ ರಾಜ್ಯದಿಂದ ಶಿವಮೊಗ್ಗಕ್ಕೆ ಆಗಮಿಸಲು ಮತ್ತಷ್ಟು ಮಂದಿ ಈಗ ಅರ್ಜಿ ಸಲ್ಲಿಸಿದ್ದಾರೆ. ಹೀಗೆ ಬರುವವರನ್ನು ಕೂಡಲೆ ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್ಗೆ ಕಳುಹಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.
ನಾನಾ ರಾಜ್ಯದಿಂದ ಶಿವಮೊಗ್ಗಕ್ಕೆ 312 ಮಂದಿ ಬರಲು ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ಬಹುತೇಕರ ಅರ್ಜಿಗಳು ಸ್ವೀಕಾರಗೊಂಡಿವೆ. ಮೇ.28ರಿಂದ ಅನೇಕ ಮಂದಿ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಜಿಲ್ಲೆಗೆ ಬರುತ್ತಿದ್ದಂತೆ ಇವರ ಆರೋಗ್ಯ ಪರೀಕ್ಷೆ ನಡೆಸಿ, ಕ್ವಾರಂಟೈನ್ಗೆ ಒಳಪಡಿಸಲಾಗುತ್ತದೆ.
ಆಪತ್ತು ಆಗದಂತೆ ಕ್ರಮ
ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ಆಂಧ್ರ, ಕೇರಳ, ರಾಜಸ್ಥಾನದ ರಾಜ್ಯದಿಂದ ಶಿವಮಗ್ಗಕ್ಕೆ ಬಂದವರಿಂದಲೇ ಶಿವಮೊಗ್ಗದಲ್ಲಿ ಪಾಸಿಟಿವ್ ಕೇಸ್ಗಳು ಹೆಚ್ಚಳವಾಗಿತ್ತು. ಇದೇ ಕಾರಣಕ್ಕೆ, ಕಳೆದ ಒಂದು ವಾರದಿಂದ ಹೊರ ರಾಜ್ಯದಿಂದ ಬರುವವರಿಗೆ ಒಂದು ಪಾಸ್ ವಿತರಣೆ ಮಾಡಿರಲಿಲ್ಲ. ಈಗ ಪುನಃ ಪಾಸ್ ವಿತರಣೆ ಆರಂಭವಾಗಿದ್ದು, ಕಡ್ಡಾಯ ಪರೀಕ್ಷೆ ಮತ್ತು ಕ್ವಾರಂಟೈನ್ ಇರಲಿದೆ. ಹಾಗಾಗಿ ಸಮುದಾಯದ ಹಂತದಲ್ಲಿ ಕರೋನ ಹರಡುವುದನ್ನು ತಡೆಯಲು ಸುಲಭವಾಗಲಿದೆ.
ಶಿವಮೊಗ್ಗಕ್ಕೆ ವಿದೇಶದಿಂದಲೂ ಬಂದಿದ್ದಾರೆ
ಜಿಲ್ಲೆಗೆ ವಿದೇಶದಿಂದಲೂ ಜನರು ಆಗಮಿಸಿದ್ದಾರೆ. ಈತನಕ ಎಂಟು ಮಂದಿ ವಿದೇಶದಿಂದ ಬಂದಿದ್ದಾರೆ. ಇವರನ್ನು ಪರೀಕ್ಷೆಗೆ ಒಳಪಡಿಸಿ, ಕ್ವಾರಂಟೈನ್ನಲ್ಲಿ ಇರುವಂತೆ ಸೂಚಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






